Don't Miss!
- News ಬಕ್ರಾ ಮಾಡಲು ಇಲ್ಲಿಗೆ ಬಂದಿದ್ದೀರಾ?, ಬೆಳಗಾವಿಗೆ ನಿಮ್ಮ ಕೊಡುಗೆ ಏನು?: ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದುನಿಯಾ ವಿಜಯ್, ನಾಗಶೇಖರ್, ರವಿವರ್ಮಗೆ ತಾತ್ಕಾಲಿಕ ನಿಷೇಧ
'ಇಂದಿನಿಂದ ಮುಂದಿನ ಆದೇಶದವರೆಗೂ, ತಮ್ಮ ಯಾವುದೇ ಚಿತ್ರದ ಚಿತ್ರೀಕರಣದಲ್ಲಿ ನಟ ದುನಿಯಾ ವಿಜಯ್ ಭಾಗವಹಿಸಬಾರದು'' ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು ಸೂಚನೆ ನೀಡಿದ್ದಾರೆ.
ದುನಿಯಾ ವಿಜಯ್ ಮಾತ್ರ ಅಲ್ಲ, 'ಮಾಸ್ತಿ ಗುಡಿ' ಚಿತ್ರದ ನಿರ್ದೇಶಕ ನಾಗಶೇಖರ್ ಹಾಗೂ ಸಾಹಸ ನಿರ್ದೇಶಕ ರವಿವರ್ಮ ಕೂಡ ಇನ್ಮುಂದೆ ಯಾವುದೇ ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಳ್ಳುವಂತಿಲ್ಲ ಅಂತ ಫಿಲ್ಮ್ ಚೇಂಬರ್ ಅಧ್ಯಕ್ಷರು ಆದೇಶಿಸಿದ್ದಾರೆ.['ಮಾಸ್ತಿಗುಡಿ' ದುರಂತ: 2 ದಿನಗಳ ಬಳಿಕ ಓರ್ವ ನಟನ ಶವ ಪತ್ತೆ ]
'ಮಾಸ್ತಿ ಗುಡಿ' ಚಿತ್ರದ ಖಳ ನಟರ ಸಾವಿನ ಪ್ರಕರಣದಿಂದ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಈ ಪ್ರಕರಣಗಳು ಮುಂದಿನ ದಿನಗಳಲ್ಲಿ ಮರುಕಳಿಸಿಬಾರದು. ಈ ಹಿನ್ನೆಲೆಯಲ್ಲಿ ಸೂಕ್ತ ನಿರ್ಧಾರ ಜರುಗಿಸುವ ಅವಶ್ಯಕತೆಯಿದೆ. ಅದನ್ನ ಚಿತ್ರರಂಗದ ಹಿರಿಯರ ಜೊತೆ ಚರ್ಚಿಸಿ ತಿರ್ಮಾನ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೂ ಈ ನಮ್ಮ ಆದೇಶವನ್ನ 'ಮಾಸ್ತಿಗುಡಿ' ಚಿತ್ರದ ನಟ ಹಾಗೂ ನಿರ್ದೇಶಕರು ಪಾಲಿಸಿಬೇಕು ಎಂದು ತಿಳಿಸಿದ್ದಾರೆ.
ಇದು ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲ, ಬೇರೆ ಯಾವುದೇ ಇಂಡಸ್ಟ್ರಿ ಚಿತ್ರೀಕರಣದಲ್ಲೂ ಸದ್ಯಕ್ಕೆ ಭಾಗವಹಿಸುವಂತಿಲ್ಲ. ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್, ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರುಗಳು ಜೊತೆ ಸಭೆ ಮಾಡಿ, ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೂ ಈ ಆದೇಶವನ್ನ ಪಾಲಿಸಬೇಕು, ಇದು ಆದೇಶವಷ್ಟೇ, ಬಹಿಷ್ಕಾರವಲ್ಲ ಎಂದು ಸಾ.ರಾ ಗೋವಿಂದು ಹೇಳಿದ್ದಾರೆ.[ನಾಪತ್ತೆ ಆಗಿದ್ದ 'ಮಸಣ ಗುಡಿ' ಸೂತ್ರಧಾರ ನಾಗಶೇಖರ್ ಪೊಲೀಸರ ವಶಕ್ಕೆ.!]
ಸದ್ಯ, ನಿರ್ಮಾಪಕ ಸುಂದರ್ ಗೌಡ ಜೈಲಿನಲ್ಲಿದ್ದಾರೆ. ನಿರ್ದೇಶಕರ ನಾಗಶೇಖರ್ ಅವರನ್ನ ಇಂದು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೂ ದುನಿಯಾ ವಿಜಯ್ ಅವರು ಸತತ ಮೂರು ದಿನಗಳಿಂದ ತಿಪ್ಪಗೊಂಡನಹಳ್ಳಿ ಕೆರೆಯ ಬಳಿ ಮೃತ ದೇಹಗಳನ್ನ ಹುಡುಕುತ್ತಿದ್ದಾರೆ. ಹೀಗಾಗಿ, ಮೂವರ ಜೊತೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚಿಸಿಬೇಕಿದೆ. ತದ ನಂತರವಷ್ಟೇ ಮುಂದಿನ ಕ್ರಮದ ಬಗ್ಗೆ ಯೋಚಿಸಬೇಕು ಎಂದಿದ್ದಾರೆ.[ಎ-1 ಆರೋಪಿ 'ಮಾಸ್ತಿ ಗುಡಿ' ನಿರ್ಮಾಪಕ ಸುಂದರ್ ಗೌಡ ಅರೆಸ್ಟ್.!]
ಇನ್ನೂ, ವಾಣಿಜ್ಯ ಮಂಡಳಿಯ ತೀರ್ಮಾನಕ್ಕೆ ಪ್ರತಿಕ್ರಿಯಿಸಿರುವ ನಟ ದುನಿಯಾ ವಿಜಯ್, ''ಫಿಲ್ಮ್ ಚೇಂಬರ್ ಆದೇಶವನ್ನ ಗೌರವಿಸುತ್ತೇನೆ. ಅದು ನಮ್ಮ ಧರ್ಮ, ಅದನ್ನ ಪಾಲಿಸುತ್ತೇನೆ. ಯಾರೇ ಆಗಲಿ ಪಾಲಿಸಬೇಕು. ಸದ್ಯಕ್ಕೆ ತುಂಬಾ ನೋವಿನಲ್ಲಿದ್ದೇನೆ. ನಾನು ಈಗ ಶೂಟಿಂಗ್ ಮಾಡುವ ಮನಸ್ಥಿತಿಯಲಿಲ್ಲ'' ಎಂದು ಬೇಸರದಿಂದ ನುಡಿದಿದ್ದಾರೆ.['ಮಾಸ್ತಿ ಗುಡಿ' ಖಳನಟರ ದುರಂತ ಸಾವು: ದುರ್ಘಟನೆಯ ಸಂಪೂರ್ಣ ವಿವರ]