Don't Miss!
- News ಪಿಕ್ ಪಾಕೇಟ್ ಕಾಂಗ್ರೆಸ್, ಕನ್ನಡಿಗರ ಕೈಗೆ 'ಚಿಪ್ಪು' ಪೋಸ್ಟರ್ ಬಿಡುಗಡೆ: ಬಿಜೆಪಿ ತಿರುಗೇಟು
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಾಸ್ತಿಗುಡಿ' ವಿಲನ್ ಉದಯ್ ಗೆ ಧ್ವನಿ ನೀಡಿದ ಮಧು ಗುರುಸ್ವಾಮಿ
'ಮಾಸ್ತಿಗುಡಿ' ಚಿತ್ರದ ಖಳನಾಯಕ ಉದಯ್ ಅವರ ಪಾತ್ರಕ್ಕೆ ಕನ್ನಡದ ಮತ್ತೊಬ್ಬ ಖಳನಟ ಮಧು ಗುರುಸ್ವಾಮಿ ಡಬ್ಬಿಂಗ್ ಮಾಡಿದ್ದಾರೆ. ಕಳೆದ ಕೆಲದಿನಗಳ ಹಿಂದೆ 'ಮಾಸ್ತಿಗುಡಿ' ಚಿತ್ರದ ಮತ್ತೊಬ್ಬ ವಿಲನ್ ಅನಿಲ್ ಅವರ ಪಾತ್ರಕ್ಕೆ ನಟ ವಸಿಷ್ಠ ಸಿಂಹ ಧ್ವನಿ ನೀಡಿದ್ದರು. ಈಗ ಉದಯ್ ಅವರ ಪಾತ್ರಕ್ಕೆ ಡಬ್ಬಿಂಗ್ ಪೂರ್ಣಗೊಂಡಿದೆ.['ಮಾಸ್ತಿ ಗುಡಿ' ಶೂಟಿಂಗ್ ವೇಳೆ ಕೆರೆಗೆ ಹಾರಿದ ಖಳನಾಯಕ ಅನಿಲ್, ಉದಯ್ ಸಾವು]
'ಮಾಸ್ತಿಗುಡಿ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ನೀರಿಗೆ ಹಾರಿ ಖಳನಟ ಅನಿಲ್ ಮತ್ತು ಉದಯ್ ಇಬ್ಬರು ಸಾವಿಗೀಡಾಗಿದ್ದರು. ಹೀಗಾಗಿ, ದುರಂತ ಸಾವಿಗೀಡಾಗಿದ್ದ ಇಬ್ಬರು ಖಳ ನಟರಿಗೆ ಬೇರೆ ಕಲಾವಿದರಿಂದ ಧ್ವನಿ ಕೊಡಿಸಲಾಗುತ್ತಿದೆ.['ಮಾಸ್ತಿ ಗುಡಿ' ಖಳನಟರ ದುರಂತ ಸಾವು: ದುರ್ಘಟನೆಯ ಸಂಪೂರ್ಣ ವಿವರ]
ಉದಯ್ ಪಾತ್ರಕ್ಕೆ ಡಬ್ಬಿಂಗ್ ಮಾಡಿರುವ ಮಧು ಗುರುಸ್ವಾಮಿ, ಶಿವರಾಜ್ ಕುಮಾರ್ ಅಭಿನಯದ 'ಭಜರಂಗಿ', 'ವಜ್ರಕಾಯ', ಶರಣ್ ಅಭಿನಯದ 'ಜೈ ಮಾರುತಿ 800' ಚಿತ್ರಗಳು ಸೇರಿದಂತೆ ಕನ್ನಡದ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅದಕ್ಕೂ ಮಿಗಿಲಾಗಿ ಉದಯ್ ಅವರಿಗೆ ಸ್ನೇಹಿತನೂ ಕೂಡ ಆಗಿದ್ದರು.['ಮಾಸ್ತಿಗುಡಿ' ಚಿತ್ರದ ಅಸಲಿ ಕಥೆ ಮತ್ತು ಚಿತ್ರಕಥೆ ಏನು?]
ಸದ್ಯ, 'ಮಾಸ್ತಿಗುಡಿ' ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ್ದರು. ದುನಿಯಾ ವಿಜಯ್ ಈ ಚಿತ್ರದ ನಾಯಕನಾಗಿದ್ದು, ನಾಗಶೇಖರ್ ಆಕ್ಷನ್ ಕಟ್ ಹೇಳಿದ್ದಾರೆ. ಸುಂದರ್ ಪಿ ಗೌಡ ನಿರ್ಮಾಣ ಮಾಡಿದ್ದು, ಸಾಹಸ ನಿರ್ದೇಶಕ ರವಿವರ್ಮ ಸ್ಟಂಟ್ ಮಾಡಿದ್ದಾರೆ. ಉಳಿದಂತೆ ಅಮೂಲ್ಯ, ಕೃತಿಕರಬಂಧ, ಅನಿಲ್, ಉದಯ್, ರಂಗಾಯಣ ರಘು, ಸುಹಾಸಿನಿ ಸೇರಿದಂತೆ ಹಲವರು ಈ ಚಿತ್ರದಲ್ಲಿ ಅಭಿನಯಿಸಿದ್ದರು.