Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಂಬರೀಶ' ಬಳಿಕ ಮರಳಿ ಬಂದ ಮಹೇಶ್ ಸುಖಧರೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆಗೆ 'ಅಂಬರೀಶ' ಚಿತ್ರ ನಿರ್ದೇಶಿಸಿದ ಬಳಿಕ ಮಹೇಶ್ ಸುಖಧರೆ ಮತ್ತೊಂದು ಭರ್ಜರಿ ಚಿತ್ರದ ಮೂಲಕ ಮರಳಿದ್ದಾರೆ. ಈ ಭಾರಿ ಅವರು ಎರಡು ಚಿತ್ರಗಳನ್ನು ಕೈಗೆತ್ತಿಕೊಂಡಿರುವುದು ವಿಶೇಷ.
ಸುಖಧರೆ ನಿರ್ದೇಶನದ ಅಂಬರೀಶ ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಲಿಲ್ಲ. ಆದರೂ ಫೀನಿಕ್ಸ್ ಪಕ್ಷಿಯಂತೆ ಎದ್ದುಬರುವ ಉತ್ಸಾಹದಲ್ಲಿದ್ದಾರೆ ಸುಖಧರೆ. ತಮ್ಮ ಹೊಸ ಚಿತ್ರಕ್ಕೆ ಅವರು 'ಶಕ್ತಿ ಐಎಎಸ್' ಎಂದು ಹೆಸರಿಟ್ಟಿದ್ದಾರೆ. [ಅಂಬರೀಶ ಚಿತ್ರ ವಿಮರ್ಶೆ]
ಇದು ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ಕುರಿತಾದ ಕಥೆಯೇ ಎಂಬ ಅನುಮಾನ ಬರುವುದು ಸಹಜ. ಆದರೆ ತಮ್ಮ ಚಿತ್ರದ ಕಥೆ ಡಿಕೆ ರವಿ ಅವರಿಗೆ ಸಂಬಂಧಿಸಿದ್ದಲ್ಲ ಎಂದು ಸುಖಧರೆ ಸ್ಪಷ್ಟೀಕರಣ ನೀಡುತ್ತಾರೆ.
ಸೆಪ್ಟಂಬರ್ ನಲ್ಲಿ ಸೆಟ್ಟೇರಲಿರುವ ಶಕ್ತಿ ಐಎಎಸ್ ಚಿತ್ರ ಚರ್ತುಭಾಷಾ ಚಿತ್ರ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಸೆಟ್ಟೇರಲಿದೆ. ಹಾಲಿವುಡ್ ಮಾದರಿಯಲ್ಲಿರುವ ಈ ಚಿತ್ರದ ಕಾಲಾವಧಿ ಕೇವಲ ಒಂದು ಗಂಟೆ ಹದಿನೆಂಟು ನಿಮಿಷಗಳಂತೆ.
ಇದಕ್ಕೂ ಮುನ್ನ 'ಜಸ್ಟ್ ಮದುವೇಲಿ' ಚಿತ್ರದ ವಿತರಣಾ ಹಕ್ಕುಗಳನ್ನು ಪಡೆದಿದ್ದಾರೆ ಸುಖಧರೆ. ಹರೀಶ್ ಕುಮಾರ್ ನಾಯಕನಟನಾಗಿರುವ ಈ ಚಿತ್ರ ಏಪ್ರಿಲ್ 3ರಂದು ತೆರೆಗೆ ಅಪ್ಪಳಿಸುತ್ತಿದೆ. ಭಜರಂಗಿ ಹಾಗೂ ಅಂಬರೀಶ ಚಿತ್ರಗಳಲ್ಲಿ ಖಳನಟನಾಗಿ ಕಾಣಿಸಿಕೊಂಡಿದ್ದ ಲೋಕಿ ಈ ಚಿತ್ರದಲ್ಲಿ ಪೂರ್ಣಪ್ರಮಾಣದ ವಿಲನ್ ಆಗಿ ಕಾಣಿಸುತ್ತಿದ್ದಾರೆ. (ಏಜೆನ್ಸೀಸ್)