Don't Miss!
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇರ್ ಆಫ್ ಫುಟ್ ಪಾತ್ ಚಿತ್ರಕ್ಕೆ ಸ್ಪೂರ್ತಿಯಾಗಿದ್ದ ಕಲಾಂ
ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ದೇಶಕ್ಕೆ ಮಾಡಿದ್ದು ನಿಸ್ವಾರ್ಥ ಸೇವೆ. ಇವರು ಎಲ್ಲರಿಗೂ ಸ್ಪೂರ್ತಿಯಾಗಿದ್ದರು. ನಾನಂತೂ ಕಲಾಂ ಅವರ ಯೋಜನೆ ಹಾಗೂ ಧ್ಯೇಯೋದ್ದೇಶಗಳಿಂದ ಸ್ಪೂರ್ತಿಯ ಚಿಲುಮೆಯಾಗಿದ್ದೇನೆ ಎಂದು ಸ್ಯಾಂಡಲ್ ವುಡ್ ನಲ್ಲಿ ಬಾಲ ನಟನಾಗಿ ಫೇಮಸ್ ಆಗಿರುವ ಮಾಸ್ಟರ್ ಕಿಶನ್ ಹೇಳಿಕೊಂಡಿದ್ದಾರೆ.
ನಾನು ಮೊದಲು ನಿರ್ದೇಶಿಸಿ ನಟಿಸಿದ ಚಿತ್ರ 'ಕೇರ್ ಆಫ್ ಪುಟ್ ಪಾತ್', ಹೆಸರೇ ಹೇಳುವಂತೆ ಈ ಚಿತ್ರದಲ್ಲಿ ಏನಿರಬಹುದು ಹಾಗು ಚಿತ್ರದ ಕಥೆ ಏನು ಎಂಬುದು 'ಕೇರ್ ಆಫ್ ಪುಟ್ ಪಾತ್' ನೋಡಿದ ಪ್ರೇಕ್ಷಕನಿಗೆ ಅರ್ಥವಾಗುತ್ತದೆ. [ಸ್ಫೂರ್ತಿ ತುಂಬುವ ಡಾ.ಕಲಾಂ ಸ್ಫೂರ್ತಿ ಹೇಳಿಕೆಗಳು]
ಕರ್ನಾಟಕದಾದ್ಯಂತ ಈ ಚಿತ್ರ ನೋಡಿದ ಪ್ರೇಕ್ಷಕರಿಗೆ 'ಕೇರ್ ಆಫ್ ಪುಟ್ ಪಾತ್' ಸ್ಪೂರ್ತಿ ನೀಡಿದೆ. ಎಂದು ಕಿಶನ್ ಹೇಳಿದ್ದಾರೆ.
ನಾನು ಎಲ್ಲೇ ಹೋದರು ಏನೇ ಭಾಷಣ ಮಾಡಿದರೂ ಕೂಡ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಕನಸು ಮತ್ತು ಧ್ಯೇಯ ವಾಕ್ಯಗಳನ್ನು ಹೇಳುತ್ತಿದ್ದೆ. ಹಾಗೂ ಯುವಜನತೆ ಭಾರತವನ್ನು ಉತ್ತಮವಾಗಿ ನಡೆಸಿಕೊಂಡು ಹೋಗಲಿದೆ ಎಂದು ಕಲಾಂ ಅವರು ಕನಸು ಕೂಡ ಕಂಡಿದ್ದರು, ಎಂದು ಕಿಶನ್ ಹೇಳಿಕೊಂಡಿದ್ದಾರೆ.
ಇದೀಗ ಒಬ್ಬ 'ಕ್ಷಿಪಣಿ ಮಾನವ' ಕಲಾಂ ಅವರು ನಮ್ಮನ್ನು ಅಗಲಿರುವುದು ಇಡೀ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಒಂದು ಬಾರಿಯಾದರೂ ನಾನು ಅವರನ್ನು ಭೇಟಿ ಮಾಡುತ್ತೇನೆ ಅಂದುಕೊಂಡಿದ್ದೆ ಆದರೆ ಅದು ನನ್ನಿಂದ ಸಾಧ್ಯವಾಗಲಿಲ್ಲ, ಎಂದು ಮಾಸ್ಟರ್ ಕಿಶನ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಭಾರತ ರತ್ನ ಕ್ಷಿಪಣಿ ಮಾನವ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರು ಸೋಮವಾರ ಸಂಜೆ ವಿಧಿವಶರಾಗಿದ್ದಾರೆ..84 ವರ್ಷ ವಯಸ್ಸಾಗಿದ್ದ ಕಲಾಂ ಅವರು ಶಿಲ್ಲಾಂಗ್ ನಲ್ಲಿ ಉಪನ್ಯಾಸ ನೀಡುವ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು.
ನಂತರ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದರು. ಭಾರತದ ಅತ್ಯಂತ ದೊಡ್ಡ ವ್ಯಕ್ತಿತ್ವದ ಒಬ್ಬ ನೇತಾರನನ್ನು ನಾವಿಂದು ಅಗಲಿದ್ದೇವೆ.