Don't Miss!
- Technology Poco: ವಿಶೇಷ ಟ್ಯಾಬ್ಲೆಟ್ ಲಾಂಚ್ ಮಾಡಲು ಸಿದ್ಧವಾಗ್ತಿದೆ ಪೊಕೊ! ಸಖತ್ ಸ್ಟೈಲಿಶ್..
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಳ್ಳಿಪರದೆಗೆ ಮೀನುಗಾರಿಕೆ ಸಚಿವ ಅಭಯಚಂದ್ರ ಜೈನ್
ರಾಜಕಾರಣಿಗಳು ಆಗಾಗ ಬಣ್ಣಬದಲಾಯಿಸುವುದು ಗೊತ್ತೇ ಇದೆ. ಈಗಾಗಲೆ ಮಾಜಿ ಸಿಎಂ ಸದಾನಂದಗೌಡ, ಮಾಜಿ ಸಚಿವ ರೇಣುಕಾಚಾರ್ಯ ಸೇರಿದಂತೆ ಹಲವಾರು ರಾಜಕಾರಣಿಗಳು ಬಣ್ಣ ಹಚ್ಚಿದ್ದಾರೆ. ಸಿನಿಮಾದವರು ರಾಜಕೀಯಕ್ಕೂ, ರಾಜಕೀಯದವರು ಬಣ್ಣದ ಜಗತ್ತಿಗೆ ಅಡಿಯಿಡುವುದು ಸರ್ವೇಸಾಮಾನ್ಯವಾಗಿದೆ.
ಈಗ ರಾಜ್ಯ ಯುವಜನ ಸೇವೆ, ಕ್ರೀಡೆ ಮತ್ತು ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್ ಬೆಳ್ಳಿತೆರೆಗೆ ಅಡಿಯಿಡುತ್ತಿದ್ದಾರೆ. ಅವರು ನಟಿಸುತ್ತಿರುವುದು ಕನ್ನಡ ಚಿತ್ರದಲ್ಲಿ ಅಲ್ಲವೇ ಅಲ್ಲ. ತುಳು ಭಾಷೆಯ 'ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ' ಎಂಬ ಭಕ್ತಿಪ್ರಧಾನ ಚಿತ್ರದಲ್ಲಿ.
ಏಪ್ರಿಲ್, 2014ರಲ್ಲಿ ತೆರೆಕಾಣಲಿರುವ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವವರು ನಾಯಕನಟ ರಾಜೇಶ್ ಕೋಟ್ಯಾನ್. ಜೊತೆಗೆ ಚಿತ್ರದ ನಿರ್ಮಾಣ, ಸಾಹಸ ನಿರ್ದೇಶನದ ಜವಾಬ್ದಾರಿಯನ್ನೂ ರಾಜೇಶ್ ಹೊತ್ತಿದ್ದಾರೆ. ಈ ಚಿತ್ರವನ್ನು ಏಪ್ರಿಲ್ ನಲ್ಲಿ ತೆರೆಗೆ ತರುವ ಸಿದ್ಧತೆಗಳು ನಡೆಯುತ್ತಿವೆ.
ಕಿರುತೆರೆ ನಟ ವೆಂಕಟಾದ್ರಿ ಅಚರು ಬ್ರಹ್ಮಶ್ರೀ ನಾರಾಯಣ ಗುರುಗಳಾಗಿ ಅಭಿನಯಿಸಲಿದ್ದಾರೆ. ಉಳಿದ ಪಾತ್ರವರ್ಗದಲ್ಲಿ ಚಿನ್ನಾಮುತ್ತ ವಿಜಯ್, ಭೂಮಿಕಾ, ಸಂಗೀತಾ ಶೆಟ್ಟಿ, ಭೂಜರಾಜ್ ವಾಮಂಜೂರು, ಅರವಿಂದ ಬೋಳಾರ್ ಸೇರಿದಂತೆ ಮುಂತಾದವರಿದ್ದಾರೆ. (ಏಜೆನ್ಸೀಸ್)