Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿಗೆ ಬಿಜೆಪಿಯ ಹೊಸ ಸಂಗಾತಿಯನ್ನ ಕೇಳಿ ಎಂದು ಟಾಂಗ್ ಕೊಟ್ಟ ಸಿದ್ದರಾಮಯ್ಯ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Finance ಲೋಕಸಭಾ ಚುನಾವಣೆ 2024: ಟಾಪ್ 10 ಶ್ರೀಮಂತ ಅಭ್ಯರ್ಥಿಗಳು ಇವರು
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಮುಂಡೇಶ್ವರಿಗೆ ನಮಿಸಿ ಬಿಡುಗಡೆಗೆ ಸಿದ್ಧವಾದ ಮಿ. ಐರಾವತ
ಬಾಕ್ಸಾಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕಾಯುತ್ತಿರುವ ಘಳಿಗೆ ಹತ್ತಿರವಾಗುತ್ತಿದೆ.
ಯಾಕಂತೀರಾ?, ಯಾಕೆಂದರೆ 'ಅದ್ದೂರಿ' ನಿರ್ದೇಶಕ ಎ.ಪಿ ಅರ್ಜುನ್ ಆಕ್ಷನ್-ಕಟ್ ಹೇಳಿರುವ ಈ ವರ್ಷದ ಬಹು ನಿರೀಕ್ಷಿತ ಚಿತ್ರ 'ಮಿಸ್ಟರ್ ಐರಾವತ' ಅಕ್ಟೋಬರ್ 1 ರಂದು ತೆರೆ ಮೇಲೆ ಅಪ್ಪಳಿಸಲು ಸಜ್ಜಾಗಿದ್ದು, ಅಭಿಮಾನಿಗಳು ಕೌಂಟ್ ಡೌನ್ ಶುರು ಹಚ್ಚಿಕೊಂಡಿದ್ದಾರೆ.
ಇನ್ನು ದರ್ಶನ್ ಅವರು ಖಾಕಿ ಬಟ್ಟೆಯಲ್ಲಿ ಕಾಣಿಸಿಕೊಂಡರೆ ಒಂಥರಾ ಖದರೇ ಬೇರೆ ಇರುತ್ತೆ ಅಂತ ಅಭಿಮಾನಿಗಳ ಅಭಿಪ್ರಾಯ. 'ಅಯ್ಯ', 'ಸ್ವಾಮಿ', ಹಾಗೂ 'ಅರ್ಜುನ್' ಚಿತ್ರದ ನಂತರ ಇದೀಗ ಮತ್ತೊಮ್ಮೆ ಪ್ರೇಕ್ಷಕರ ಎದುರು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಜಬರ್ದಸ್ತ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.[ದರ್ಶನ್ ಅಭಿನಯದ 'ಐರಾವತ' ಆಡಿಯೋ ವಿಮರ್ಶೆ]
ನಿರ್ದೇಶಕ ಎ.ಪಿ ಅರ್ಜುನ್ ಅವರು ಆಕ್ಷನ್-ಕಟ್ ಹೇಳಿರುವ 'ಮಿಸ್ಟರ್ ಐರಾವತ' ಚಿತ್ರದಲ್ಲಿ ಪರಭಾಷಾ ನಟಿ ಊರ್ವಶಿ ರೌಟೇಲ ಅವರು ದರ್ಶನ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ. ಈಗಾಗಲೇ ಅಭಿಮಾನಿಗಳ ಮನಗೆದ್ದಿರುವ ಟೀಸರ್, ಟ್ರೈಲರ್ ಗಳು ಸಾಮಾಜಿಕ ಜಾಲಾತಾಣಗಳಲ್ಲಿ ಸಖತ್ ರೆಸ್ಪಾನ್ಸ್ ಗಳಿಸುತ್ತಿದೆ.[ದರ್ಶನ್ ಕುತ್ತಿಗೆಗೆ ಕೈಹಾಕಿ ಆಚೆ ದಬ್ಬಿದವರು ಯಾರು?]
ಇದೀಗ ಚಿತ್ರಕ್ಕೆ ಪೈನಲ್ ಟಚ್ ನೀಡಿರುವ ಎ.ಪಿ ಅರ್ಜುನ್ ಅವರು ಅಕ್ಟೋಬರ್ 1 ರಂದು ಚಿತ್ರವನ್ನು ತೆರೆ ಮೇಲೆ ತರುವುದಾಗಿ ತಿಳಿಸಿದ್ದಾರೆ. ಮುಂದೆ ಓದಿ..
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಿತ್ರತಂಡ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದರ್ಶನ್ ಅಭಿನಯದ 'ಮಿಸ್ಟರ್ ಐರಾವತ' ನಿಗೆ ಫೈನಲ್ ಟಚ್ ನೀಡಿ ಚಿತ್ರದ ಶೂಟಿಂಗ್ ಪೂರ್ತಿಗೊಳಿಸಿದ ಚಿತ್ರತಂಡ
'ಐರಾವತ'ನ ನಿರ್ದೇಶಕ ಎ.ಪಿ ಅರ್ಜುನ್
ಚಿತ್ರದ ಚಿತ್ರೀಕರಣ ಯಾವುದೇ ಅಡ್ಡಿ, ಆತಂಕಗಳಿಲ್ಲದೇ ಸರಾಗವಾಗಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಕ್ಯಾಮರಕ್ಕೆ ಆರತಿ ಬೆಳಗುವ ಮೂಲಕ ಪೂಜೆ ಸಲ್ಲಿಸಿದ ಚಿತ್ರದ ನಿರ್ದೇಶಕ ಎ.ಪಿ ಅರ್ಜುನ್
ಐರಾವತ ತಂಡದಿಂದ ವಿಕ್ಟರಿ
ಚಿತ್ರದ ಕೊನೆಯ ಒಂದು ಸೀನ್ ನ ಶಾಟ್ ತೆಗೆಯಲು ಮೈಸೂರಿನ ಚಾಮುಂಡಿ ತಾಯಿಯ ಸನ್ನಿಧಾನಕ್ಕೆ ಬಂದ ಚಿತ್ರತಂಡ ವಿಕ್ಟರಿ ತೋರಿಸಿ ಸಂಭ್ರಮಿಸಿದ ಪರಿ.
'ಮಿಸ್ಟರ್ ಐರಾವತ' ಅಕ್ಟೋಬರ್ 1 ಕ್ಕೆ ತೆರೆಗೆ
ಬಹುನಿರೀಕ್ಷೆಯ ಚಿತ್ರ 'ಐರಾವತ' ಅಕ್ಟೋಬರ್ 1 ರಂದು ಇಡೀ ಕರ್ನಾಟಕದಾದ್ಯಂತ ಎಲ್ಲೆಡೆ ತೆರೆಗೆ ಭರ್ಜರಿಯಾಗಿ ಅಪ್ಪಳಿಸುತ್ತಿದೆ. ಇದೇ ಖುಷಿಯಲ್ಲಿ ಚಿತ್ರತಂಡದ ಸಡಗರ
ನಿರ್ದೇಶಕ ಅರ್ಜುನನಿಂದ ದೇವಿಗೆ ಪ್ರಾರ್ಥನೆ
ತಾಯಿ ಚಾಮುಂಡಿ ದೇವಿಯ ಸನ್ನಿಧಾನದಲ್ಲಿ ನಿರ್ದೇಶಕರು ಹಾಗು ಇಡೀ ಚಿತ್ರದ ಬಳಗ ಚಾಮುಂಡಿ ತಾಯಿಗೆ ಪ್ರಾರ್ಥನೆ ಸಲ್ಲಿಸಿದರು
'ಐರಾವತ'ನಿಗೆ ಫೈನಲ್ ಟಚ್
ಚಿತ್ರಕ್ಕೆ ಫೈನಲ್ ಟಚ್ ನೀಡಿ ಯಶಸ್ವಿಯಾಗಿ ಚಿತ್ರದ ಶೂಟಿಂಗ್ ಮುಗಿಸಿದ ಖುಷಿಯಲ್ಲಿ ಮೈಸೂರಿನಲ್ಲಿ ಸಂಭ್ರಮಪಟ್ಟ 'ಐರಾವತ' ತಂಡ