Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಲ್ಟಿಫ್ಲೆಕ್ಸ್'ಗಳಿಗೆ ಸಿದ್ದು ಸರ್ಕಾರ ಶಾಕ್: ಚಿತ್ರಪ್ರೇಮಿಗಳಿಗೆ 'ಸಿನಿಮಾ ಭಾಗ್ಯ'
'ಮಲ್ಟಿಫ್ಲೆಕ್ಸ್'ಗಳ ಅಟ್ಟಹಾಸಕ್ಕೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬ್ರೇಕ್ ಹಾಕಿದೆ. 2017ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ಚಿತ್ರಗಳ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದ್ದಾರೆ.[ಕನ್ನಡ ಚಲನಚಿತ್ರ ನೋಡಬಯಸುವವರ ಶ್ಯಾವಿಗೆ ಪಾಯಸ]
ರಾಜ್ಯದ 'ಮಲ್ಟಿಫ್ಲೆಕ್ಸ್'ಗಳಲ್ಲಿ ಏಕ ನೀತಿಯ ಪ್ರವೇಶ ದರ ನೀತಿಯನ್ನ ಜಾರಿಗೊಳಿಸಿದ್ದು, ಇನ್ಮುಂದೆ ತಮಗಿಷ್ಟ ಬಂದಂತೆ ಹಣ ವಸೂಲಿ ಮಾಡುವಂತಿಲ್ಲ. ಹೀಗಾಗಿ, ನಿರಾಳವಾಗಿ ಚಿತ್ರಪ್ರೇಮಿಗಳು ಮಲ್ಟಿಫ್ಲೆಕ್ಸ್ ನಲ್ಲಿ ಕೂತು ಸಿನಿಮಾ ನೋಡಬಹುದು. ಇವುಗಳ ಜೊತೆಗೆ ರಾಜ್ಯ ಬಜೆಟ್ ಮಂಡನೆಯಲ್ಲಿ ಕನ್ನಡ ಚಿತ್ರರಂಗಕ್ಕೆ ನೀಡಿರುವ ಮತ್ತಷ್ಟು ಉಡುಗೊರೆಯನ್ನ ಮುಂದೆ ಓದಿ....
'ಮಲ್ಟಿಫ್ಲೆಕ್ಸ್'ಗಳಲ್ಲಿ ಟಿಕೆಟ್ ದರ 200 ರೂ ಫಿಕ್ಸ್!
ರಾಜ್ಯದ ಎಲ್ಲ 'ಮಲ್ಟಿಪ್ಲೆಕ್ಸ್'ಗಳಲ್ಲೂ ಏಕರೀತಿಯ ಪ್ರವೇಶದರ ನೀತಿಗೆ ರಾಜ್ಯ ಸರ್ಕಾರ ಬಜೆಟ್ ಮಂಡನೆಯಲ್ಲಿ ಆದೇಶ ನೀಡಿದೆ. ಹೀಗಾಗಿ, ಇನ್ಮುಂದೆ ಯಾವುದೇ ಚಿತ್ರಕ್ಕಾಗಲಿ, ಯಾವುದೇ ಚಿತ್ರಮಂದಿರದಲ್ಲಾಗಲಿ 200 ರೂಗಳಿಗಿಂತ ಹೆಚ್ಚು ಹಣವನ್ನ ಪಡೆಯುವಂತಿಲ್ಲ ಎಂದು ಸರ್ಕಾರ ಸೂಚಿಸಿದೆ.
ಕನ್ನಡ ಚಿತ್ರ ಪ್ರದರ್ಶನ ಕಡ್ಡಾಯ!
'ಮಲ್ಟಿಫ್ಲೆಕ್ಸ್'ಗಳಲ್ಲಿ ಕನ್ನಡ ಚಿತ್ರಗಳಿಗೆ ಪ್ರದರ್ಶನವಾಗುತ್ತಿಲ್ಲ ಎಂಬ ಆರೋಪ ಹಿನ್ನಲೆ, ಕನ್ನಡ ಚಿತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿ ದಿನ ಒಂದು ಪರದೆಯಲ್ಲಿ ಮಧ್ಯಾಹ್ನ 1.30 ರಿಂದ 7.30 ರವರೆಗಿನ ಪ್ರಮುಖ ಅವಧಿಯಲ್ಲಿ ಕನ್ನಡ ಚಲನಚಿತ್ರ ಪ್ರದರ್ಶನ ಕಡ್ಡಾಯ ಎಂದು ಸರ್ಕಾರ ಸೂಚಿಸಿದೆ.
ಕಾರ್ಮಿಕ ನಿಧಿಗೆ ಒತ್ತು!
ಚಲನಚಿತ್ರೋದ್ಯಮದ ಕಾರ್ಮಿಕರು, ತಂತ್ರಜ್ಞರು ಹಾಗೂ ಕಲಾವಿದರ ಆರೋಗ್ಯ ಸೇವೆಗಾಗಿ ಸ್ಥಾಪಿಸಿರುವ ದತ್ತಿ ನಿಧಿಯ ಮೊತ್ತ 1 ಕೋಟಿ ರು.ಗಳಿಂದ 10 ಕೋಟಿ ರು.ಗಳಿಗೆ ಹೆಚ್ಚಳ ಮಾಡಲಾಗಿದೆ.
ಫಿಲ್ಮ್ ಸಿಟಿ ಆರಂಭಕ್ಕೆ ಸಿದ್ದತೆ!
ಇನ್ನೂ ಮೈಸೂರು ಬಳಿಯ ಹಿಮ್ಮಾವಿನಲ್ಲಿ ಕನ್ನಡ ಚಿತ್ರೋದ್ಯಮದ ಅಭಿವೃದ್ಧಿಗಾಗಿ ಫಿಲ್ಮ್ ಸಿಟಿ ನಿರ್ಮಿಸುವುದಾಗಿ ಸಿದ್ದರಾಮಯ್ಯ ರಾಜ್ಯ ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ.