Don't Miss!
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- News Mandya: ಏಪ್ರಿಲ್ 24 ರಿಂದ 26ರ ವರೆಗೆ ಮಂಡ್ಯದಲ್ಲಿ ಪ್ರತಿಬಂಧಕಾಜ್ಞೆ ಜಾರಿ
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ ಮಂಡಳಿಯ ಅಧಿಕಾರಿಗಳು ಮೆಚ್ಚಿದ 'ಮುಂಗಾರು ಮಳೆ-2'
'ಉಡ್ತಾ ಪಂಜಾಬ್' ಸೇರಿದಂತೆ ಇತ್ತೀಚೆಗೆ ತೆರೆಕಾಣುತ್ತಿರುವ ಹಲವು ಸಿನಿಮಾಗಳ ಕೆಲ ಸನ್ನಿವೇಶಗಳಿಗೆ ಕತ್ತರಿ ಪ್ರಯೋಗ ಮಾಡಿ ಸಿನಿಮಾ ತಂಡದ ಕೆಂಗಣ್ಣಿಗೆ ಸೆನ್ಸಾರ್ ಮಂಡಳಿ ಗುರಿ ಆಗಿದ್ದ ವಿಷಯ ನಿಮಗೆ ಗೊತ್ತಿದೆ. ಕನ್ನಡದ 'ಕಿರುಗೂರಿನ ಗಯ್ಯಾಳಿಗಳು' ಚಿತ್ರಕ್ಕೂ ಸೆನ್ಸಾರ್ ಕಾಟ ತಪ್ಪಲಿಲ್ಲ. [ಸೆನ್ಸಾರ್ ಮಂಡಳಿ ಕೆಂಗಣ್ಣಿಗೆ ಗುರಿಯಾದ ಕತ್ರಿನಾ ಕೈಫ್ 'ಬ್ರಾ']
ಸೆನ್ಸಾರ್ ಮಂಡಳಿ ಬಗ್ಗೆ ಅನೇಕರು ಅಸಮಾಧಾನ ವ್ಯಕ್ತಪಡಿಸುತ್ತಿರುವಾಗಲೇ, ಕನ್ನಡ 'ಮುಂಗಾರು ಮಳೆ-2' ಚಿತ್ರ ಸೆನ್ಸಾರ್ ಮಂಡಳಿಯ ಅಧಿಕಾರಿಗಳ ಮನ ಗೆದ್ದಿದೆ.
ಇ.ಕೆ ಪಿಕ್ಚರ್ಸ್ ಲಾಂಛನದಲ್ಲಿ ಜಿ.ಗಂಗಾಧರ್ ನಿರ್ಮಿಸಿರುವ ಶಶಾಂಕ್ ಆಕ್ಷನ್ ಕಟ್ ಹೇಳಿರುವ 'ಮುಂಗಾರು ಮಳೆ-2' ಚಿತ್ರವನ್ನ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ಸ್ ನೀಡದೆ, 'U' ಸರ್ಟಿಫಿಕೇಟ್ ಕೊಟ್ಟು, ಚಿತ್ರವನ್ನ ಮುಕ್ತಕಂಠದಿಂದ ಶ್ಲಾಘಿಸಿದೆ.
ಇದರಿಂದ ನಿರ್ದೇಶಕ ಶಶಾಂಕ್ ಮತ್ತು ಗೋಲ್ಡನ್ ಸ್ಟಾರ್ ಗಣೇಶ್ ಫುಲ್ ಖುಷ್ ಆಗಿದ್ದಾರೆ. [ಆಡಿಯೋ ವಿಮರ್ಶೆ: ಹಾಡುಗಳ ವರ್ಷಧಾರೆ 'ಮುಂಗಾರು ಮಳೆ']
ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿರುವ 'ಮುಂಗಾರು ಮಳೆ-2' ಚಿತ್ರದ ಹಾಡುಗಳು ಸೂಪರ್ ಡ್ಯೂಪರ್ ಹಿಟ್ ಆಗಿವೆ. ಸೆಪ್ಟೆಂಬರ್ 9 ರಂದು ಬಿಡುಗಡೆ ಆಗಲಿರುವ 'ಮುಂಗಾರು ಮಳೆ-2' ಚಿತ್ರದ ಟಿಕೆಟ್ ಗಳು ವಿದೇಶಗಳಲ್ಲಿ ಈಗಾಗಲೇ ಸೋಲ್ಡ್ ಔಟ್ ಆಗಿದೆ. [MM2 ಬುಕ್ಕಿಂಗ್ ಆರಂಭ: ಸಿಡ್ನಿಯಲ್ಲಿ ಬಹುತೇಕ ಸೀಟುಗಳು ಭರ್ತಿ]
ಕ್ರೇಜಿ ಸ್ಟಾರ್ ರವಿಚಂದ್ರನ್, ನೇಹಾ ಶೆಟ್ಟಿ, ಶಿಲ್ಪಾ ಮಂಜುನಾಥ್, ಐಂದ್ರಿತಾ ರೇ, ಸಾಧು ಕೋಕಿಲ, ರವಿಶಂಕರ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿರುವ 'ಮುಂಗಾರು ಮಳೆ-2' ಚಿತ್ರವನ್ನ ನೋಡಲು ನೀವು ರೆಡಿ ಇದ್ದೀರಾ.?