Don't Miss!
- News ‘ಭಯೋತ್ಪಾದಕರನ್ನು ಬೆಂಬಲಿಸುವ ಕಾಂಗ್ರೆಸ್ಗೆ ಮತ ಕೊಟ್ಟರೆ ಅದು ವ್ಯರ್ಥ’
- Lifestyle ಇಹಲೋಕ ತ್ಯಜಿಸಿದ ಸೂಪರ್ ಕಳ್ಳ: ಕಳ್ಳನಾಗಿದ್ದಾಗಲೇ ಜಡ್ಜ್ ಆದ, 2000 ಖೈದಿಗಳನ್ನು ಬಿಡುಗಡೆ ಮಾಡಿದ!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಹೊಸ ನವೀಕರಣಗಳೊಂದಿಗೆ ಬಿಡುಗಡೆಗೆ ಸಜ್ಜು
- Sports KKR vs RCB: ವಿರಾಟ್ ಕೊಹ್ಲಿ ಔಟಾಗಿದ್ದು ಏಕೆ 'ನೋ ಬಾಲ್' ಕೊಡಲಿಲ್ಲ?; ಐಸಿಸಿ ರೂಲ್ಸ್ ಬುಕ್ ಹೇಳೋದೇನು?
- Technology OPPO: ಒಪ್ಪೋ K12 ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಏನಿವೆ?
- Finance Namma metro: ಬಿಎಂಆರ್ಸಿಎಲ್ಗೆ ಬಂತು ಹರಿದು ಬಂದು ಐತಿಹಾಸಿಕ ಆದಾಯ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮಲ್ಟಿಪ್ಲೆಕ್ಸ್' ಇತಿಹಾಸದಲ್ಲಿ ಯಾರು ಮಾಡಿರದ ದಾಖಲೆ ಬರೆದ 'ಚಕ್ರವರ್ತಿ'
'ಮಲ್ಟಿಪ್ಲೆಕ್ಸ್'ಗಳಲ್ಲಿ ಕನ್ನಡ ಸಿನಿಮಾಗಳಿಗೆ ಅನ್ಯಾಯವಾಗುತ್ತಿದೆ. ಕನ್ನಡ ಚಿತ್ರಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಕೊಡುತ್ತಿಲ್ಲ. ಕನ್ನಡ ಸಿನಿಮಾಗಳನ್ನ ಕಡೆಗಣಿಸುತ್ತಿದೆ ಎಂಬ ಆರೋಪಗಳ ಮಧ್ಯೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಚಕ್ರವರ್ತಿ' ಹೊಸ ದಾಖಲೆ ಬರೆದಿದೆ.['ಚಕ್ರವರ್ತಿ' ಬಗ್ಗೆ ಇದ್ದ ಡೌಟ್ ಕ್ಲಿಯರ್! ]
ರಾಜ್ಯಾದ್ಯಂತ ದಾಖಲೆಯ ಚಿತ್ರಮಂದಿರಗಳಲ್ಲಿ ರಿಲೀಸ್ ಆಗುತ್ತಿರುವ 'ಚಕ್ರವರ್ತಿ' ಮೈಸೂರಿನಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ. ಅದೇನದು ಅಂತ ಮುಂದೆ ಓದಿ....
'ಮಲ್ಟಿಪ್ಲೆಕ್ಸ್'ನಲ್ಲಿ ಮಧ್ಯರಾತ್ರಿ ಶೋ!
ಮೈಸೂರಿನಲ್ಲಿ 'ಡಿಆರ್ ಎಸ್ ಸಿನಿಮಾಸ್' ಚಿತ್ರಮಂದಿರದಲ್ಲಿ ದರ್ಶನ್ ಅವರ 'ಚಕ್ರವರ್ತಿ' ಸಿನಿಮಾ 13ನೇ ತಾರೀಖು ಮಧ್ಯರಾತ್ರಿ ಬಿಡುಗಡೆಯಾಗುತ್ತಿದೆಯಂತೆ.['ಬಾಹುಬಲಿ' ಮೀರಿಸಿದ ದರ್ಶನ್ 'ಚಕ್ರವರ್ತಿ' ]
ಕನ್ನಡ ಇತಿಹಾಸದಲ್ಲಿ ಇದು ಮೊದಲು
ಮಲ್ಟಿಪ್ಲೆಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಮಧ್ಯರಾತ್ರಿ ಪ್ರದರ್ಶನವಾಗುತ್ತಿರುವುದು. ದಾಖಲೆಗಳ ಪ್ರಕಾರ ಇದುವರೆಗೂ ಮಲ್ಟಿಪ್ಲೆಕ್ಸ್ ಗಳಲ್ಲಿ ಯಾವುದೇ ಚಿತ್ರ ಮಧ್ಯರಾತ್ರಿ ಬಿಡುಗಡೆಯಾಗಿಲ್ಲ.[ದಿನಕರ್ 'ಕೇಡಿ' ಆಗಲು ಕಾರಣ 'ಆ' ಒಬ್ಬ ವ್ಯಕ್ತಿ! ಯಾರದು? ]
ಮಧ್ಯರಾತ್ರಿ 'ಚಕ್ರವರ್ತಿ' ರಿಲೀಸ್
ಕೇವಲ ಮೈಸೂರಿನ ಮಲ್ಟಿಪ್ಲೆಕ್ಸ್'ಗಳಲ್ಲಿ ಮಾತ್ರವಲ್ಲ, ರಾಜ್ಯದ ಹಲವು ಚಿತ್ರಮಂದಿರಗಳಲ್ಲಿ ಚಕ್ರವರ್ತಿ ಮಧ್ಯರಾತ್ರಿ ರಿಲೀಸ್ ಆಗುತ್ತಿದ್ದು, ದಿನದ 24 ಗಂಟೆಯೂ ಸಿನಿಮಾ ಪ್ರದರ್ಶನವಾಗಲಿದೆ.[ಕನ್ನಡ ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ 'ಚಕ್ರವರ್ತಿ' ]
ಏಪ್ರಿಲ್ 14ಕ್ಕೆ 'ಚಕ್ರವರ್ತಿ' ಅಬ್ಬರ
'ಚಕ್ರವರ್ತಿ' ಇದೇ ತಿಂಗಳು 14ರಂದು ರಾಜ್ಯಾದ್ಯಂತ ದಾಖಲೆಯ ಚಿತ್ರಮಂದಿರದಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನ ಸಿದ್ದಾಂತ್ ನಿರ್ಮಾಣ ಮಾಡಿದ್ದಾರೆ. ದರ್ಶನ್, ದಿನಕರ್ ತೂಗುದೀಪ, ಸೃಜನ್ ಲೋಕೇಶ್, ಕುಮಾರ್ ಬಂಗಾರಪ್ಪ, ಚಾರುಲತಾ, ದೀಪಾ ಸನ್ನಿಧಿ, ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ.