Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಿರಾಕಿ ಕಿರುಚಿತ್ರೋತ್ಸವದಲ್ಲಿ 'ನಾವು(We)'ಗೆ ಪ್ರೇಕ್ಷಕರ ಆಯ್ಕೆಯ ಪ್ರಶಸ್ತಿ
2017 ನೇ ಸಾಲಿನ 'ಮಿರಾಕಿ ಇಂಟರ್ ನ್ಯಾಷನಲ್ ಇಂಡಿಯನ್ ಶಾರ್ಟ್ ಫಿಲ್ಮ್ ಫೆಸ್ಟಿವಲ್'ನಲ್ಲಿ ಕನ್ನಡದ 'ನಾವು(We)' ಹೆಸರಿನ ಕಿರುಚಿತ್ರಕ್ಕೆ ಪ್ರೇಕ್ಷಕರ ಆಯ್ಕೆಯ ಉತ್ತಮ ಚಿತ್ರ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನಲ್ಲಿ ಇತ್ತೀಚೆಗಷ್ಟೆ ನಡೆದ ಮಿರಾಕಿ ಕಿರುಚಿತ್ರೋತ್ಸವಕ್ಕೆ ಪ್ರೇಕ್ಷಕರ ಆಯ್ಕೆಯ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದಿರುವ 'ನಾವು' ಚಿತ್ರವನ್ನು ಅಮೋಲ್ ಪಾಟೀಲ್ ಎಂಬುವವರು ನಿರ್ದೇಶನ ಮಾಡಿದ್ದಾರೆ. ಚಿತ್ರಕಥೆ-ಸಂಭಾಷಣೆಯನ್ನು ಕುಮುದವಲ್ಲಿ ಅರುಣಮೂರ್ತಿ ರವರು ಬರೆದಿದ್ದು, ಸಾಯಿ ಕಿರಣ್ ರವರ ಸಂಗೀತ, ಜೆರೋಮ್ ಜಾಯ್ ಥೊಪ್ಪಿಲ್ ಎಂಬುವರ ಛಾಯಾಗ್ರಹಣ ನಿರ್ವಹಣೆ ಮಾಡಿದ್ದಾರೆ.
ಚಿತ್ರಕ್ಕೆ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಚಿತ್ರಕಥೆ-ಸಂಭಾಷಣೆ ಬರೆದಿರುವ ಕುಮುದವಲ್ಲಿ ಅರುಣಮೂರ್ತಿ ರವರು ವೋಟ್ ಮಾಡಿದವರಿಗೆ ಫೇಸ್ ಬುಕ್ ನಲ್ಲಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಚಿತ್ರ ನೋಡಿದವರು ಒಳ್ಳೆಯ ಸಂದೇಶವಿದೆ, ಇಂತಹ ಸಂದೇಶದ ಅವಶ್ಯಕತೆ ಸಮಾಜಕ್ಕಿದೆ ಎಂದು ತುಂಬು ಮನದಿಂದ ಹೇಳಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಹಾಗಿದ್ರೆ ಪ್ರೇಕ್ಷಕರ ಆಯ್ಕೆಯ 'ನಾವು(We)' ಚಿತ್ರ ಹೇಗಿದೆ, ಯಾವ ಸಂದೇಶವನ್ನು ನೀಡಿದೆ ಎಂದು ನೀವು ಒಮ್ಮೆ ನೋಡಲು ಕ್ಲಿಕ್ ಮಾಡಿ