Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿ. ನಾಗೇಂದ್ರ ಪ್ರಸಾದ್ ಚುನಾವಣಾ ಅಖಾಡಕ್ಕೆ
ಶನಿವಾರ ಕಜೆಪಿ ಕಚೇರಿಯಲ್ಲಿ ಪಕ್ಷದ 31 ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಲಾಯಿತು. ಅದರಲ್ಲಿ ದೊಡ್ಡ ಬಳ್ಳಾಪುರ ಕ್ಷೇತ್ರದಿಂದ ವಿ.ನಾಗೇಂದ್ರ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ. ನಾಗೇಂದ್ರ ಪ್ರಸಾದ್ ಸ್ಪರ್ಧಿಸುವುದು ಖಚಿತವಾಗಿದೆ.(ಕೆಜೆಪಿ 4 ನೇ ಪಟ್ಟಿ)
ನಟ, ನಿರ್ದೇಶಕ, ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ಕನ್ನಡಿಗರಿಗೆ ಚಿರ ಪರಿಚಿತರು. 'ಮೇಘವೆ ಮೇಘವೆ', ವಿನಾಯಕರ ಗೆಳೆಯರ ಬಳಗ' ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ನಾಗೇಂದ್ರ ಪ್ರಸಾದ್, ಗೀತ ರಚನೆಕಾರರಾಗಿ ಕನ್ನಡಿಗರ ಮನ ಗೆದಿದ್ದಾರೆ.
ಗಜ ಚಿತ್ರದ ಜಲ ಜಲ ಜಲ ಜಲಜಾಕ್ಷಿ, ಹುಡುಗರು ಚಿತ್ರದ ಶಂಭೋ ಶಿವ ಶಂಭೋ, ಸಾರಥಿ ಚಿತ್ರದ ಅತಿರಥ ಮಹಾರಥ ಸಾರಥಿ, ಕರಿಯ ಚಿತ್ರದ ಹೃದಯದ ಒಳಗೆ ಹೃದಯವಿದೆ ಮುಂತಾದ ಗೀತೆಗಳನ್ನು ನೀವು ನೆನೆಪು ಮಾಡಿಕೊಂಡರೆ ನಾಗೇಂದ್ರ ಪ್ರಸಾದ್ ಅವರನ್ನು ಮರೆಯುವಂತಿಲ್ಲ.
ಹೀಗೆ ಹಿಟ್ ಗೀತೆಗಳ ಮೂಲಕ ಕನ್ನಡಿಗರ ಮನೆ ಗೆದ್ದಿರುವ ನಾಗೇಂದ್ರ ಪ್ರಸಾದ್, ಚುನಾವಣೆ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಅವರ ಜನಪ್ರಿಯತೆ ಚುನಾವಣೆಯಲ್ಲಿ ಗೆಲುವು ತಂದು ಕೊಡಲಿದೆಯೋ ಕಾದು ನೋಡಬೇಕು.
ರಕ್ಷಿತಾಗೆ ಟಿಕೆಟ್ ಡೌಟು : ಬಿಎಸ್ಆರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಉತ್ಸಾಹದಲ್ಲಿರುವ ನಟಿ ರಕ್ಷಿತಾ ಅವರಿಗೆ ಟಿಕೆಟ್ ನೀಡಲು ಪಕ್ಷ ಹಿಂದೇಟು ಹಾಕುತ್ತಿದೆ. ಬೆಂಗಳೂರಿನ ಯಾವ ಕ್ಷೇತ್ರದಿಂದಲೂ ಟಿಕೆಟ್ ನೀಡಲು ನಾಯಕರು ಸಿದ್ಧರಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈಗಾಗಲೇ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿಯಾಗಿ ರಕ್ಷಿತಾ ಟಿಕೆಟ್ ಪಡೆದಿದ್ದಾರೆ. ಆದರೆ, ಪಕ್ಷ ಬಿಟ್ಟು ಬಿಜೆಪಿಯಿಂದ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಆದರೆ, ಆ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸುತ್ತಿದೆ. ಆದ್ದರಿಂದ ರಕ್ಷಿತಾಗೆ ಟಿಕೆಟ್ ದೊರೆಯುವುದು ಅನುಮಾನವಾಗಿದೆ ಎಂದು ತಿಳಿದು ಬಂದಿದೆ.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ