Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪ್ಪಿ-ಕಿಚ್ಚನ ಸಿನಿಮಾ ಶೂಟಿಂಗ್ ದಿನಾಂಕ ಯಾವಾಗ ಗೊತ್ತಾ?
ಸ್ಯಾಂಡಲ್ ವುಡ್ ಮತ್ತೋರ್ವ ಸ್ಟಾರ್ ನಟರಾದ ರಿಯಲ್ ಸ್ಟಾರ್ ಉಪೇಂದ್ರ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಒಂದಾಗಿ ರಿಮೇಕ್ ಚಿತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಾವು ಇದೇ ಫಿಲ್ಮಿ ಬೀಟಲ್ಲಿ ಹೇಳಿದ್ವಿ ತಾನೇ.
ಇದೀಗ ಈ ಮಲ್ಟಿ ಸ್ಟಾರರ್ ಚಿತ್ರತಂಡದಿಂದ ಹೊರಬಿದ್ದಿರುವ ಖಾಸ್ ಖಬರ್ ಏನಪ್ಪಾ ಅಂದ್ರೆ ಹಿಂದಿ ಸಿನಿಮಾ 'ಓ ಮೈ ಗಾಡ್' ನ ರಿಮೇಕ್ ಆಗಿರುವ ಈ ಸಿನಿಮಾದ ಶೂಟಿಂಗ್ ಜನವರಿ 23 ರಿಂದ ಆರಂಭವಾಗಲಿದೆ.
ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಮತ್ತು ಉಪೇಂದ್ರ ಅವರು ಕಾಣಿಸಿಕೊಳ್ಳುತ್ತಿದ್ದು, 'ರನ್ನ' ಚಿತ್ರವನ್ನು ನಿರ್ದೇಶನ ಮಾಡಿದ್ದ ನಿರ್ದೇಶಕ ನಂದಕಿಶೋರ್ ಅವರು ಈ ಚಿತ್ರಕ್ಕೆ ಆಕ್ಷನ್-ಕಟ್ ಹೇಳುತ್ತಿದ್ದಾರೆ.[ಕಿಚ್ಚನ ನೋಡಿ 'ಓ ಮೈ ಗಾಡ್' ಅಂದ ಉಪ್ಪಿ.! ]
ಉಪೇಂದ್ರ ಅವರ ಜೊತೆ ಸುದೀಪ್ ಅವರಿಗೆ ಈ ಸಿನಿಮಾ ಮೊದಲನೇ ಮಲ್ಟಿ ಸ್ಟಾರರ್ ಸಿನಿಮಾ ಆದರೆ ಶಿವಣ್ಣ ಅವರ ಜೊತೆ 'ಕಲಿ' ಚಿತ್ರದಲ್ಲಿ ಕಾಣಿಸಿಕೊಳ್ಳುವುದರಿಂದ ಅದು ಕಿಚ್ಚ ಅವರಿಗೆ ಎರಡನೇ ಮಲ್ಟಿ ಸ್ಟಾರರ್ ಸಿನಿಮಾ. ಅಲ್ಲಿಗೆ ಸುದೀಪ್ ಅವರು ಎರಡು ಮಲ್ಟಿ ಸ್ಟಾರರ್ ಸಿನಿಮಾದಲ್ಲಿ ಮಿಂಚುತ್ತಿದ್ದಾರೆ ಎಂದಾಯ್ತು.
ಈ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪ್ಪಿ ಅವರು ಸಾಮಾನ್ಯ ಭಕ್ತನಾದರೆ, ಕಿಚ್ಚ ಸುದೀಪ್ ಅವರು ಶ್ರೀ ಕೃಷ್ಣ ಪರಮಾತ್ಮನ ಪಾತ್ರದಲ್ಲಿ ಮಿಂಚಲಿದ್ದಾರೆ. ಅಂದಹಾಗೆ ಕಿಚ್ಚ ಕ್ರಿಯೇಷನ್ಸ್, ಎನ್ ಕುಮಾರ್ ಮತ್ತು ಜಯಶ್ರೀ ದೇವಿ ಎಂಬ ಮೂರು ಪ್ರೊಡಕ್ಷನ್ಸ್ ಕಂಪೆನಿಗಳು ಈ ಚಿತ್ರಕ್ಕೆ ಬಂಡವಾಳ ಹೂಡಲಿದೆ.
ಮೂಲಗಳ ಪ್ರಕಾರ ಈ ತಿಂಗಳು ಪೂರ್ತಿ ಹಾಗೂ ಫಸ್ಟ್ ಶೆಡ್ಯೂಲ್ ಸುದೀಪ್ ಮತ್ತು ಉಪೇಂದ್ರ ಅವರ ಪಾತ್ರಗಳ ಚಿತ್ರೀಕರಣ ನಡೆಯಲಿದ್ದು, ಸೆಕೆಂಡ್ ಶೆಡ್ಯೂಲ್ ರಿಯಲ್ ಸ್ಟಾರ್ ಉಪೇಂದ್ರ ಅವರ ಪಾತ್ರಕ್ಕಾಗಿ ಶೂಟಿಂಗ್ ನಡೆಯಲಿದೆ.
ಒಟ್ನಲ್ಲಿ ಇತ್ತೀಚೆಗೆ ಗಾಂಧಿನಗರದಲ್ಲಿ ಮಲ್ಟಿಸ್ಟಾರರ್ ಸಿನಿಮಾ ಹವಾ ಜೋರಾಗಿರುವ ಈ ಸಂದರ್ಭದಲ್ಲಿ ದೊಡ್ಡ ದೊಡ್ಡ ಸ್ಟಾರ್ ನಟರು ಒಂದೇ ಸಿನಿಮಾದಲ್ಲಿ ಮಿಂಚುವುದರಿಂದ ಈ ಸ್ಟಾರ್ ವಾರ್ ಅನ್ನೋ ಭೂತ ಇಡೀ ಸ್ಯಾಂಡಲ್ ವುಡ್ ಕ್ಷೇತ್ರದಿಂದಲೇ ತೊಲಗಿದಂತಾಗುತ್ತದೆ.