Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಷ್ಟ್ರ ಪ್ರಶಸ್ತಿ ಪುರಸ್ಕೃತ 'ತಿಥಿ' ಸಿನಿಮಾ ಈ ವಾರ ತೆರೆಗೆ
ನಿನ್ನೆಯಷ್ಟೇ (ಮೇ 3) ನವದೆಹಲಿಯ ವಿಜ್ಞಾನ ಭವನದಲ್ಲಿ 2015ನೇ ಸಾಲಿನ ಪ್ರತಿಷ್ಟಿತ 63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
'ತಿಥಿ' ಸಿನಿಮಾಗೆ ಪ್ರಾದೇಶಿಕ ವಿಭಾಗದಲ್ಲಿ ಕನ್ನಡದ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಲಭಿಸಿತ್ತು. 'ತಿಥಿ' ಚಿತ್ರದ ನಿರ್ದೇಶಕ ರಾಮ್ ರೆಡ್ಡಿ ರವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರಶಸ್ತಿ ಪ್ರದಾನ ಮಾಡಿದರು. [63ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರಗಳು]
ಪ್ರಶಸ್ತಿ ಸ್ವೀಕರಿಸಿದ ಖುಷಿಯಲ್ಲಿರುವ 'ತಿಥಿ' ಚಿತ್ರತಂಡ ಈ ವಾರ ನಿಮ್ಮ ಮುಂದೆ ಬರುತ್ತಿದೆ. ಅರ್ಥಾತ್ 'ತಿಥಿ' ಸಿನಿಮಾ ಈ ವಾರ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.
ಈರೇಗೌಡ ರಚಿಸಿರುವ ಕಥೆಗೆ ರಾಮ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ಚನ್ನೇಗೌಡ, ತಮ್ಮೇಗೌಡ, ಅಭಿಷೇಕ್ ಸೇರಿದಂತೆ ಹೊಸಬರ ದಂಡೇ ತುಂಬಿ ತುಳುಕುವ 'ತಿಥಿ' ಚಿತ್ರಕ್ಕೆ ಬಂಡವಾಳ ಹಾಕಿರುವವರು ಪ್ರತಾಪ್ ರೆಡ್ಡಿ.
ಈಗಾಗಲೇ ಸ್ವಿಟ್ಜರ್ಲ್ಯಾಂಡ್ ನಲ್ಲಿ ನಡೆದ ಲೋಕಾರ್ನೋ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 'ತಿಥಿ' ಚಿತ್ರಕ್ಕೆ 2 ಪ್ರಶಸ್ತಿ ಸಿಕ್ಕಿದೆ. ಜೊತೆಗೆ ರಾಷ್ಟ್ರ ಪ್ರಶಸ್ತಿಯ ಹೆಮ್ಮೆ. [ಸೆಂಚುರಿ ಗೌಡರ 'ತಿಥಿ'ಯಲ್ಲಿ ಪವರ್ ಸ್ಟಾರ್ ಪುನೀತ್]
ಇವೆಲ್ಲದರ ಜೊತೆ 'ತಿಥಿ' ಚಿತ್ರವನ್ನ ವೀಕ್ಷಿಸಿ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಇನ್ಯಾಕೆ ತಡ, ಸಮಾಜಕ್ಕೆ ಉತ್ತಮ ಸಂದೇಶ ಇರುವ 'ತಿಥಿ' ಚಿತ್ರವನ್ನ ಇದೇ ಶುಕ್ರವಾರ (ಮೇ 6) ನೋಡಲು ಈಗಲೇ ಟಿಕೆಟ್ ಕಾಯ್ದಿರಿಸಿ....