Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೈಂಗಿಕ ದೌರ್ಜನ್ಯದ ವಿರುದ್ಧ ಜಾಗೃತಿ ಮೂಡಿಸುವ ನಿರ್ಭಯ
ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಜಾಗೃತಿ ಮೂಡಿಸುವ ಕಿರುಚಿತ್ರ 'ನಿರ್ಭಯ'ವನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಹೆಚ್.ಡಿ. ಗಂಗರಾಜು ಅವರು ರಾಜ್ಯ ಸರ್ಕಾರಕ್ಕೆ ಹಸ್ತಾಂತರಿಸಿದರು.
ಸರ್ಕಾರದ ಪರವಾಗಿ ಇದನ್ನು ಸ್ವೀಕರಿಸಿದ ನಂತರ ಗೃಹ ಸಚಿವ ಕೆ. ಜೆ. ಜಾರ್ಜ್ ಅವರು ಮಾತನಾಡಿ ಈ ಕಿರುಚಿತ್ರ ಅತ್ಯುತ್ತಮವಾಗಿ ಮೂಡಿ ಬಂದಿದೆ. ಖ್ಯಾತ ನಟ ನಟಿಯರು ಈ ಚಿತ್ರದಲ್ಲಿ ಸಾರ್ವಜನಿಕರಿಗೆ ಸಂದೇಶ ನೀಡಿದ್ದಾರೆ. [ಖ್ಯಾತ ನಿರ್ದೇಶಕ ದೊರೈ ಭಗವಾನ್ ಮುಡಿಗೆ ಹೊಸ ಗರಿ]
ಸಮಾಜದಲ್ಲಿ ಅಪರಾಧಿಗಳು ವಿಕೃತ ಕಾಮಿಗಳು, ಮೃಗೀಯ ಮನಸ್ಸುಳ್ಳವರು, ತಲೆಯೆತ್ತಿ ನಡೆಯದಂತಹ ವಾತಾವರಣವನ್ನು ಸೃಷ್ಟಿಸಬೇಕು. ಅಪರಾಧವಾಗದಂತೆ ತಡೆಯಬೇಕು ಇದು ಎಲ್ಲರ ಕರ್ತವ್ಯ. ಈ ಕಿರುಚಿತ್ರವನ್ನು ಎಲ್ಲ ಚಿತ್ರಮಂದಿರಗಳಲ್ಲಿ ಪ್ರದರ್ಶಿಸುವ ನಿಟ್ಟಿನಲ್ಲಿ ವಾರ್ತಾ ಸಚಿವರು ಕ್ರಮ ಕೈಗೊಳ್ಳುವರು ಎಂದು ತಿಳಿಸಿದರು.
ಈ ಚಿತ್ರದಲ್ಲಿ ಖ್ಯಾತ ತಾರೆಯರಾದ ಶಿವರಾಜ್ಕುಮಾರ್, ಪುನೀತ್ ರಾಜ್ಕುಮಾರ್, ಉಪೇಂದ್ರ, ಯಶ್, ಗಣೇಶ್, ಸಾಧು ಕೋಕಿಲ, ರಾಧಿಕಾ ಪಂಡಿತ್, ರಾಗಿಣಿ ದ್ವಿವೇದಿ, ಭವ್ಯಾ, ಅಮೂಲ್ಯಾ, ಪೂಜಾ ಗಾಂಧಿ ಮತ್ತಿತರರು ಈ ಕಿರುಚಿತ್ರದಲ್ಲಿ ಭಾಗವಹಿಸಿ ಜಾಗೃತಿಯ ಸಂದೇಶ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಗೃಹ ಇಲಾಖೆ ಕೈಗೊಂಡಿರುವ ಕ್ರಮಗಳ ಮಾಹಿತಿಯೊಂದಿಗೆ ವಾಣಿಜ್ಯ ಮಂಡಳಿಯ ವತಿಯಿಮದ ಪ್ರತ್ಯೇಕ ಚಿತ್ರ ನಿರ್ಮಿಸಲಾಗುವುದು ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷರು ಪ್ರಕಟಿಸಿದರು. ಹತ್ತು ನಿಮಿಷಗಳ ಕಾಲಾವಧಿಯ ಈ ಕಿರುಚಿತ್ರದಲ್ಲಿ 30 ಮಂದಿ ತಾರೆಗಳು "ಸಿಡಿದೇಳಿ, ಭಯ ಬಿಡಿ" ಎನ್ನುತ್ತಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ವತಿಯಿಂದ ನಿರ್ಮಿಸಲಾದ ಮಹಿಳೆಯರು ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಜಾಗೃತಿ ಮೂಡಿಸುವ ಕಿರುಚಿತ್ರ 'ನಿರ್ಭಯ'ವನ್ನು ವಾಣಿಜ್ಯ ಮಂಡಳಿ ಅಧ್ಯಕ್ಷ ಗಂಗರಾಜ್ ಅವರು ಗೃಹ ಸಚಿವ ಕೆ.ಜೆ. ಜಾರ್ಜ್ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಆರ್. ರೋಷನ್ ಬೇಗ್ ಅವರಿಗೆ ಶುಕ್ರವಾರ ಹಸ್ತಾಂತರಿಸಿದರು. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ. ರಾಜೇಂದ್ರಸಿಂಗ್ ಬಾಬು, ಚಿತ್ರದ ನಿರ್ದೇಶಕ ದೊರೆ-ಭಗವಾನ್ ಉಪಸ್ಥಿತರಿದ್ದರು. (ಫಿಲ್ಮಿಬೀಟ್ ಕನ್ನಡ)