Don't Miss!
- Automobiles KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಶ್ 'ಮಾಸ್ಟರ್ ಪೀಸ್' ಬಿಡುಗಡೆಗೆ ನೋ ಪ್ರಾಬ್ಲಂ!!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ವರ್ಷದ ಬಹುನಿರೀಕ್ಷಿತ ಚಿತ್ರ 'ಮಾಸ್ಟರ್ ಪೀಸ್' ಬಿಡುಗಡೆಗೆ ಎರಡೇ ದಿನ ಬಾಕಿ. ಅಷ್ಟರಲ್ಲೇ, ಸಿನಿಮಾ ಬಗ್ಗೆ ಅಪಸ್ವರ ಕೇಳಿ ಬಂದಿತ್ತು.
ಸಂತೋಷ್ ಚಿತ್ರಮಂದಿರದಲ್ಲಿ ಹಾಕಲಾದ ಕಟೌಟ್ ಸಲುವಾಗಿ 'ಮಾಸ್ಟರ್ ಪೀಸ್' ಚಿತ್ರದ ವಿರುದ್ಧ 'ಜಾತ್ರೆ' ಸಿನಿಮಾ ನಾಯಕ ಚೇತನ್ ಚಂದ್ರ ಬೇಸರಗೊಂಡಿದ್ದರು. ['ಮಾಸ್ಟರ್ ಪೀಸ್' ಬಿಡುಗಡೆಗೆ ಮುನ್ನ ಏನಿದು ಅಪಸ್ವರ.?]
ಆದ್ರೀಗ, ಎಲ್ಲಾ ಗೊಂದಲ-ಗದ್ದಲಕ್ಕೆ ಫುಲ್ ಸ್ಟಾಪ್ ಬಿದ್ದಿದೆ. 'ಜಾತ್ರೆ' ಹಾಗೂ 'ಮಾಸ್ಟರ್ ಪೀಸ್' ಚಿತ್ರ ನಡುವೆ ಎದ್ದಿದ್ದ ಅಸಮಾಧಾನ ಶಮನವಾಗಿದೆ. ನಟ ಚೇತನ್ ಚಂದ್ರ ಜೊತೆ ಯಶ್ ಮಾತುಕತೆ ನಡೆಸಿ ವಿವಾದಕ್ಕೆ ಶುಭಂ ಹಾಡಿದ್ದಾರೆ. [ಮುಯ್ಯಿಗೆ ಮುಯ್ಯಿ; ಯಶ್ 'ಮಾಸ್ಟರ್ ಪೀಸ್' ಕಟೌಟ್ ಪೀಸ್ ಪೀಸ್!]
ಅಂದ್ಹಾಗೆ, 'ಮಾಸ್ಟರ್ ಪೀಸ್' ಸಿನಿಮಾ ಇದೇ ಗುರುವಾರ (ಡಿಸೆಂಬರ್ 24) ಭಾರತದಾದ್ಯಂತ ಬಿಡುಗಡೆ ಆಗಲಿದೆ. 'ಕೇಡಿ ನಂ.1' ಆಗಿ ಯಶ್ ಸಿನಿಮಾದಲ್ಲಿ ಮಿಂಚಿದ್ದಾರೆ. ಯಶ್ ಜೊತೆ ಶಾನ್ವಿ ಡ್ಯುಯೆಟ್ ಹಾಡಿದ್ದಾರೆ.
'ಮಾಸ್ಟರ್ ಪೀಸ್' ಚಿತ್ರದ ಮೂಲಕ ಸಂಭಾಷಣೆಕಾರ ಮಂಜು ಮಾಂಡವ್ಯ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಮೊದಲ ಪ್ರಯತ್ನದಲ್ಲೇ ಯಶಸ್ಸು ಗಳಿಸುವ ಹುಮ್ಮಸ್ಸು ಮಂಜು ಮಾಂಡವ್ಯಗಿದೆ. ಅವರ ಕೈಹಿಡಿದು ಸಾಥ್ ಕೊಡುವ ಜವಾಬ್ದಾರಿ ನಿಮ್ಮದು...