For Quick Alerts
For Daily Alerts
Don't Miss!
- News ಮೋದಿ ಕಾರ್ಯಕ್ರಮಕ್ಕೆ ಚಕ್ಕರ್, ಮಠಗಳಿಗೆ ಭೇಟಿ ಕೊಟ್ಟು ಪ್ರಚಾರ ಆರಂಭಿಸಿದ ಕೆಎಸ್ ಈಶ್ವರಪ್ಪ!
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿಯಾಗಿಲ್ಲ: ಸಾ.ರಾ.ಗೋವಿಂದು
News
oi-Suneel
By Suneel
|
ತಮಿಳು ನಟ ಸತ್ಯರಾಜ್ ಕನ್ನಡಿಗರಿಗೆ ವಿಷಾದ ವ್ಯಕ್ತಪಡಿಸಿದ ನಂತರ ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳ ಪ್ರದರ್ಶನ ರದ್ದುಗೊಳಿಸಲಾಗಿದೆ ಎಂದು ವರದಿಯಾಗಿತ್ತು. ಆದರೆ ಇದು ವದಂತಿ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಸಾ.ರಾ.ಗೋವಿಂದು ರವರು ಸ್ಪಷ್ಟ ಪಡಿಸಿದ್ದಾರೆ.[ಮುಂದುವರೆದ 'ಕಟ್ಟಪ್ಪ'ನ ವಿವಾದ: ತಮಿಳುನಾಡಿನಲ್ಲಿ ಕನ್ನಡ ಚಿತ್ರಗಳು ಬ್ಯಾನ್!]
'ಬಾಹುಬಲಿ 2' ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಾ.ರಾ.ಗೋವಿಂದ್ ರವರು, "ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಎಲ್ಲಾ ಪದಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿ ಆಗಿಲ್ಲ. ಯಾವುದೇ ಕಾರಣಕ್ಕೂ ಕನ್ನಡ ಚಿತ್ರಗಳ ಪ್ರದರ್ಶನ ನಿಲ್ಲಿಸುವುದಿಲ್ಲ. ಅಲ್ಲದೇ ಪ್ರದರ್ಶನ ತಡೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದಿದ್ದಾರೆ" ಎಂದು ತಿಳಿಸಿದ್ದಾರೆ.
"ಒಂದು ವೇಳೆ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿ ಉಂಟಾದಲ್ಲಿ ಅದರ ಸಂಪೂರ್ಣ ಹೊಣೆಯನ್ನು ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ನಾವು ಹೊರುತ್ತೇವೆ ಎಂದಿದ್ದಾರೆ. ಆದ್ದರಿಂದ ದಯಮಾಡಿ ಯಾವುದೇ ಉಹಾಪೋಹಗಳಿಗೆ ಅವಕಾಶ ಮಾಡಿಕೊಡಬೇಡಿ. ಕನ್ನಡ ಚಿತ್ರಗಳು ತಮಿಳುನಾಡಿನಲ್ಲಿ ಪ್ರದರ್ಶನ ಕಾಣುತ್ತಿವೆ. ಒಂದು ವೇಳೆ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಮಾಡಿದ್ದೇ ಆದಲ್ಲಿ ಕರ್ನಾಟಕದಲ್ಲಿ ತಮಿಳು ಚಿತ್ರಗಳನ್ನ ನಿಲ್ಲಿಸಬೇಕಾಗುತ್ತದೆ ಎಂದು ನೇರವಾಗಿ ಹೇಳಿದ್ದೇನೆ. ಹಾಗಾಗಿ ಸತ್ಯವನ್ನು ತಿಳಿದುಕೊಂಡು ಮುಂದಿನ ಹೆಜ್ಜೆ ಇಡುತ್ತೇವೆ" ಎಂದು ಸಾ.ರಾ.ಗೋವಿಂದು ರವರು ಮಾಧ್ಯಮಗಳಿಕೆ ಹೇಳಿಕೆ ನೀಡಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: sa ra govindu controversy ss rajamouli ಸಾರಾ ಗೋವಿಂದು ಕನ್ನಡ ಚಿತ್ರಗಳು ಎಸ್ ಎಸ್ ರಾಜಮೌಳಿ ತಮಿಳುನಾಡು ಟಾಲಿವುಡ್ ವಿವಾದ ಸ್ಯಾಂಡಲ್ ವುಡ್
English summary
KFCC Precident Sa.Ra.Govind clarified no problems for Kannada Films Screening in Tamilnadu