Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪತಿಯ ಹಾದಿಯಲ್ಲಿ ಪತ್ನಿ: ಅಂಧರ ಬಾಳಲ್ಲಿ ಹೊಸಬೆಳಕು ಮೂಡಿಸಲಿರುವ 'ದೊಡ್ಮನೆ' ಅಮ್ಮ
ಅಂಧತ್ವದ ಕತ್ತಲಿನಲ್ಲಿ ಇರುವ ಜನರ ಬದುಕಿನಲ್ಲಿ ಆಶಾಕಿರಣ ಮೂಡಿಸಲು ಕನ್ನಡ ಚಿತ್ರರಂಗದ ವರನಟ, ಪದ್ಮಭೂಷಣ ಡಾ.ರಾಜ್ ಕುಮಾರ್ ನೇತ್ರದಾನ ಮಾಡಿ ಸಮಾಜಕ್ಕೆ ಮಾದರಿ ಆದರು.
ಇದೀಗ ಪತಿಯ ಹಾದಿಯಲ್ಲೇ ಧರ್ಮಪತ್ನಿ ಪಾರ್ವತಮ್ಮ ರಾಜ್ ಕುಮಾರ್ ಕೂಡ ಸಾಗಿದ್ದಾರೆ. ಜೀವನದುದ್ದಕ್ಕೂ ಪತಿ ಡಾ.ರಾಜ್ ಆದರ್ಶ ಪಾಲಿಸಿದ್ದ ಪತ್ನಿ ಪಾರ್ವತಮ್ಮ, ಸಾವಿನ ನಂತರವೂ ಅದೇ ಮಾರ್ಗವನ್ನ ಅನುಸರಿಸಿದ್ದಾರೆ.[ಆರಿದ 'ದೊಡ್ಮನೆ' ದೀಪ: ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಇನ್ನಿಲ್ಲ]
'ನೇತ್ರದಾನ ಮಹಾದಾನ' ಎಂದು ನಂಬಿದ್ದ ರಾಜಣ್ಣ, ತಮ್ಮ ದೇಹಾಂತ್ಯದ ಬಳಿಕ ಕಣ್ಣುಗಳನ್ನು ದಾನ ಮಾಡಿದ್ದರು. ಅವರಂತೆಯೇ, ಅವರ ಪತ್ನಿ ಪಾರ್ವತಮ್ಮ ಕೂಡ ತಮ್ಮ ಕಣ್ಣುಗಳನ್ನು ದಾನ ನೀಡಿದ್ದಾರೆ. ಈ ವಿಚಾರವನ್ನ 'ನಾರಾಯಣ ನೇತ್ರಾಲಯ'ದ ಮುಖ್ಯಸ್ಥ ಡಾ.ಭುಜಂಗ ಶೆಟ್ಟಿ ತಿಳಿಸಿದ್ದಾರೆ.[ಪಾರ್ವತಮ್ಮ ರಾಜ್ ಕುಮಾರ್ ನಿಧನ: ಸದಾಶಿವನಗರದ ನಿವಾಸದಲ್ಲಿ ಅಂತಿಮ ದರ್ಶನ ]
ಡಾ.ಭುಜಂಗ ಶೆಟ್ಟಿ ರವರ ನೇತೃತ್ವದಲ್ಲಿಯೇ ನಾಳೆ ಇಬ್ಬರು ಅಂಧರಿಗೆ ಪಾರ್ವತಮ್ಮ ನವರ ಎರಡು ಕಣ್ಣುಗಳನ್ನ ಅಳವಡಿಸಲಾಗುತ್ತದೆ.
ಭೌತಿಕವಾಗಿ ಆರಿ ಹೋದ 'ದೊಡ್ಮನೆ' ದೀಪ ಅಂಧರ ಬಾಳಲ್ಲಿ ಹೊಸ ಬೆಳಕು ಮೂಡಿಸಲಿದೆ.