Don't Miss!
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೆಂಕಟೇಶ್ ಕುಟುಂಬಕ್ಕೆ ಪವರ್ ಸ್ಟಾರ್ ಧನ ಸಹಾಯ
ಮಹಬೂಬ್ ನಗರ ಜಿಲ್ಲೆಯ ಪಾಲೇಂ ಬಳಿ ನಡೆದ ವೋಲ್ವೋ ಬಸ್ ಅಪಘಾತದಲ್ಲಿ ಅಖಿಲ ಕರ್ನಾಟಕ ಮೆಗಾಸ್ಟಾರ್ ಚಿರಂಜೀವಿ ಅಭಿಮಾನಿಗಳ ಸಂಘದ ಅಧ್ಯಕ್ಷ ವೆಂಕಟೇಶ್ ದುರಂತ ಸಾವಪ್ಪಿದ್ದು ಗೊತ್ತೇ ಇದೆ. ಅವರ ಕುಟುಂಬಕ್ಕೆ ಇತ್ತೀಚೆಗೆ ನಟ ಚಿರಂಜೀವಿ ಸಹಾಯ ಹಸ್ತ ಚಾಚಿದ ಬೆನ್ನಲ್ಲೇ ಈಗ ಅವರ ಸಹೋದರ ಪವನ್ ಕಲ್ಯಾಣ್ ಕೂಡ ಧನ ಸಹಾಯ ಮಾಡಿದ್ದಾರೆ.
ಚಿರಂಜೀವಿ ಅವರು ರು.5 ಲಕ್ಷದ ಚೆಕ್ ಕೊಟ್ಟಿದ್ದರು. ವೆಂಕಟೇಶ್ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿಯನ್ನೂ ತಾವು ವಹಿಸಿಕೊಂಡಿರುವುದಾಗಿ ತಿಳಿಸಿದ್ದರು. ಬಳಿಕ ಚಿರಂಜೀವ ಅವರ ಅಣ್ಣ ನಾಗಬಾಬು ಅವರು ರು.5 ಲಕ್ಷ ಸಹಾಯ ಮಾಡಿದರು. [ಬಸ್ ದುರಂತದ ಚಿತ್ರಗಳು]
ಮದುವೆಯ ಆಹ್ವಾನ ಪತ್ರಿಕೆ ಹಂಚಲು ಹೈದರಾಬಾದ್ಗೆ ತೆರಳಿದ್ದ ನಟ ಚಿರಂಜೀವಿ ಅಭಿಮಾನಿ ಸಂಘದ ಅಧ್ಯಕ್ಷ ಎಸ್.ವೆಂಕಟೇಶ್ ಯಾದವ್ (ಕೋಟೆ) ಹಾಗೂ ಸಹೋದರಿ ಅನಿತಾ ಬಸ್ ದುರಂತದಲ್ಲಿ ಸಾವಪ್ಪಿದ್ದರು.
ಮಕ್ಕಳ ಜತೆ ಮಾತನಾಡಿ ಕಲಾಸಿಪಾಳ್ಯದಲ್ಲಿರುವ ಜಬ್ಬಾರ್ ಟ್ರಾವೆಲ್ಸ್ಗೆ ತೆರಳಿದ ವೆಂಕಟೇಶ್ ಮಂಗಳವಾರ (ಅ.29) ರಾತ್ರಿ 10 ಗಂಟೆ ಸುಮಾರಿಗೆ ಬಸ್ ಹತ್ತಿದ ಬಳಿಕ ಮಕ್ಕಳ ಮೊಬೈಲ್ಗೆ ಕರೆ ಮಾಡಿ, ಬಸ್ ಹತ್ತಿರುವ ವಿಷಯ ತಿಳಿಸಿ ಊಟ ಮಾಡಿ ಮಲಗುವಂತೆ ಹೇಳಿದ್ದರು. ಅದೇ ಅವರ ಕೊನೆಯ ಮಾತು. ಬೆಳಗಾಗುವುದರೊಳಗೆ ಮೊಬೈಲ್ ಸಮೇತ ಅವರು ಜೀವಂತ ಸುಟ್ಟು ಕರಕಲಾಗಿದ್ದರು. (ಏಜೆನ್ಸೀಸ್)