Don't Miss!
- Finance ಆಕ್ಸಿಸ್ ಬ್ಯಾಂಕ್ಗೆ ಭರ್ಜರಿ ಲಾಟರಿ, 7,129 ಕೋಟಿ ನಿವ್ವಳ ಲಾಭ!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ಪವನ್ ಒಡೆಯರ್ ಮುಂದಿನ ಚಿತ್ರ 'ನಟರಾಜ ಸರ್ವೀಸ್'
ಕನ್ನಡ ನಿರ್ದೇಶಕ ಪವನ್ ಒಡೆಯರ್ ಅದೃಷ್ಟ ಚೆನ್ನಾಗಿದೆ. 'ಗೋವಿಂದಾಯ ನಮಃ', 'ಗೂಗ್ಲಿ', 'ರಣವಿಕ್ರಮ' ಅಂತಹ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನ ನೀಡಿದ ಪವನ್ ಒಡೆಯರ್ ಇದೀಗ 'ಜೆಸ್ಸಿ' ಸಿನಿಮಾದಲ್ಲಿ ಬಿಜಿಯಾಗಿದ್ದಾರೆ.
'ಜೆಸ್ಸಿ' ಚಿತ್ರದ ಶೂಟಿಂಗ್ ಇನ್ನು 10 ದಿನ ಬಾಕಿ ಇದೆ. ಅಷ್ಟು ಬೇಗ ಪವನ್ ಒಡೆಯರ್ ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ಅದೇ 'ನಟರಾಜ ಸರ್ವೀಸ್'.
ಶೀರ್ಷಿಕೆ ಕೇಳಿದ ತಕ್ಷಣ ವಿಚಿತ್ರ ಅಂತ ನಿಮಗೆ ಅನಿಸಬಹುದು. 'ನಟರಾಜ ಸರ್ವೀಸ್' ಔಟ್ ಅಂಡ್ ಔಟ್ ಕಾಮಿಡಿ ಎಂಟರ್ ಟೈನರ್. ಸ್ಕ್ರಿಪ್ಟಿಂಗ್ ಕೆಲಸವೆಲ್ಲಾ ಫೈನಲ್ ಆಗಿದ್ದು, ಈ ಚಿತ್ರಕ್ಕೆ ಪುನೀತ್ ರಾಜ್ ಕುಮಾರ್ ಆಪ್ತ ಎನ್.ಎಸ್.ರಾಜ್ ಕುಮಾರ್ ಬಂಡವಾಳ ಹಾಕಲಿದ್ದಾರೆ. [ಪವನ್ ಒಡೆಯರ್ 'ಜೆಸ್ಸಿ' ಚಿತ್ರದ ಫಸ್ಟ್ ಲುಕ್ ಔಟ್]
'ಮೈನಾ', 'ಜಟ್ಟ' ಮತ್ತು 'ಮೈತ್ರಿ' ಸಿನಿಮಾಗಳನ್ನ ನಿರ್ಮಾಣ ಮಾಡಿದ್ದ ಎನ್.ಎಸ್.ರಾಜ್ ಕುಮಾರ್ ಇದೀಗ 'ನಟರಾಜ ಸರ್ವೀಸ್' ಗೆ ದುಡ್ಡು ಹಾಕುವುದಕ್ಕೆ ಮುಂದೆ ಬಂದಿದ್ದಾರೆ.
'ನಟರಾಜ ಸರ್ವೀಸ್' ಚಿತ್ರದ ನಾಯಕ ಯಾರಾಗಲಿದ್ದಾರೆ ಅನ್ನುವುದರ ಬಗ್ಗೆ ಮಾತುಕತೆ ನಡೆಯುತ್ತಿದೆ. 'ನಟರಾಜ ಸರ್ವೀಸ್' ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 'ಫಿಲ್ಮಿಬೀಟ್ ಕನ್ನಡ' ಓದುತ್ತಿರಿ.