Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸದ್ಯಕ್ಕೆ ಮದುವೆ ಆಲೋಚನೆ ಕೈಬಿಟ್ಟ ಪೂಜಾಗಾಂಧಿ
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ನಲ್ಲಿ ಪತ್ರಕರ್ತರೊಂದಿಗೆ ಮಾತಿಗೆ ಇಳಿದ ಅವರು, ಆಗಿದ್ದಾಗಿದೆ ಇನ್ನು ಮುಂದೆ ಇಲ್ಲಿಯೇ ನೆಲೆಸುತ್ತೇನೆ ಎಂದರು. ತಮಗೆ ಯಾರು ಓಟು ಹಾಕಲಿ ಬಿಟ್ಟಿರಲಿ ತಮಗೇನು ಬೇಜಾರಾಗಿಲ್ಲ. ಇದೂ ಒಂದು ಎಕ್ಸ್ ಪೀರಿಯನ್ಸ್ ಎಂದು ತಿಳಿಯುತ್ತೇನೆ ಎಂದರು.
ನನ್ನ ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ಇನ್ನು ಮುಂದೆಯೂ ರಾಯಚೂರಿನಲ್ಲೇ ಉಳಿಯುತ್ತೇನೆ. ಇಲ್ಲಿನ ಜನರ ಸೇವೆ ಮುಂದುವರಿಸುತ್ತೇನೆ. ತಮ್ಮ ರಾಜಕೀಯ ಪಯಣವನ್ನು ಇಲ್ಲಿಗೆ ನಿಲ್ಲಿಸುವುದಿಲ್ಲ, ಮುಂದಿನ ವಿಧಾನಸಭೆ ಚುನಾವಣೆಗೂ ಸ್ಪರ್ಧಿಸುತ್ತೇನೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಅದೆಲ್ಲಾ ಸರಿ ಮೇಡಂ ಮದುವೆ ಯಾವಾಗ? ಎಂಬ ಪ್ರಶ್ನೆಗೆ ಅವರು ಕೈಜೋಡಿಸಿ ಪತ್ರಕರ್ತರಿಗೆ ಮುಗಿದರು. ಬಳಿಕ ಮಾತನಾಡುತ್ತಾ ಸದ್ಯಕ್ಕೆ ನನ್ನ ತಲೆಯಲ್ಲಿ ಮದುವೆ ವಿಚಾರ ಇಲ್ಲ. ಇನ್ನೂ ನಾಲ್ಕು ವರ್ಷ ಮದುವೆಯಾಗಲ್ಲ ಎಂದರು.
ಜನ ಸೇವೆಗಾಗಿ ತಾವು ಚಿತ್ರರಂಗವನ್ನೂ ತೊರೆಯಲು ಸಿದ್ಧ ಎಂಬ ಮಾತನ್ನು ಇಲ್ಲಿ ಮತ್ತೆ ಪುನರುಚ್ಚರಿಸಿದರು. ಚಿತ್ರರಂಗದಲ್ಲಿ ತಾನು ಸಾಕಷ್ಟು ಹಣ ಗಳಿಸಿದ್ದೇನೆ. ಉತ್ತಮ ಜೀವನವನ್ನೂ ನಡೆಸುತ್ತಿದ್ದೇನೆ. ಹಣ ಅಥವಾ ಹೆಸರುಗಳಿಸುವ ಉದ್ದೇಶದಿಂದ ನಾನು ರಾಜಕೀಯಕ್ಕೆ ಬರಲಿಲ್ಲ ಎಂದು ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. (ಒನ್ಇಂಡಿಯಾ ಕನ್ನಡ)