Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟದಿಂದ ಅಖಾಡಕ್ಕೆ ಪೂಜಾಗಾಂಧಿ, ರಕ್ಷಿತಾ
ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಇವರಿಬ್ಬರನ್ನು ಸಂಭಾಳಿಸುವುದೇ ದೊಡ್ಡ ತಲೆನೋವಾಗಿದೆ. ಈ ಬಾರಿಯ ವಿಧಾನಸಭೆ ಚುನಾವಣೆಗೆ ಸಿನಿಮಾ ತಾರೆಗಳಾದ ಪೂಜಾಗಾಂಧಿ ಹಾಗೂ ರಕ್ಷಿತಾ ಅವರನ್ನು ಕಣಕ್ಕಿಳಿಸಲು ಬಿಎಸ್ಆರ್ ಕಾಂಗ್ರೆಸ್ ಮುಂದಾಗಿದೆ.
ಇವರಿಬ್ಬರನ್ನೂ ಯಾವ ಕ್ಷೇತ್ರದಿಂದ ಕಣಕ್ಕಿಳಿಸಿದರೆ ಗೆಲ್ಲುವ ಚಾನ್ಸಸ್ ಹೆಚ್ಚಾಗಿ ಎಂಬ ಬಗ್ಗೆ ತಲೆಕೆಡಿಸಿಕೊಳ್ಳುತ್ತಿದೆ. ಇಬ್ಬರನ್ನೂ ಉತ್ತರ ಕರ್ನಾಟಕದಿಂದ ಚುನಾವಣಾ ಕಣಕ್ಕಿಳಿಸಲು ಪಕ್ಷದ ಮುಖಂಡರು ಚಿಂತಿಸಿದ್ದಾರೆ.
ಹಾಗಾಗಿ ರಕ್ಷಿತಾ ಅವರನ್ನು ಗದಗ ಜಿಲ್ಲೆಯ ನರಗುಂದ, ಬಾಗಲಕೋಟೆಯ ಬಾದಾಮಿ ಅಥವಾ ಹುನಗುಂದ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಗಳಿವೆ. ಇನ್ನು ಮಳೆ ಹುಡುಗಿ ಪೂಜಾಗಾಂಧಿ ಅವರನ್ನು ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿಸಲು ತೀರ್ಮಾನಿಸಿದ್ದಾರೆ.
ಒಂದು ವೇಳೆ ರಾಯಚೂರು ಒಲ್ಲೆ ಎಂದರೆ ಪೂಜಾಗಾಂಧಿ ಅವರನ್ನು ಬೆಂಗಳೂರಿನ ಯಶವಂತಪುರ, ರಾಜರಾಜೇಶ್ವರಿ ನಗರದಿಂದ ಅಖಾಡಕ್ಕಿಳಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಶೀಘ್ರದಲ್ಲೇ ಈ ಬಗ್ಗೆ ಪ್ರಕಟಣೆ ಹೊರಬೀಳುವ ಸಾಧ್ಯತೆಗಳಿವೆ. (ಏಜೆನ್ಸೀಸ್)