Don't Miss!
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- News Narendra Modi: ಕರ್ನಾಟಕಕ್ಕೆ ಏಪ್ರಿಲ್ 29, 29ಕ್ಕೆ ಪ್ರಧಾನಿ ಮೋದಿ ಆಗಮನ
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ನೂರು ಚಿತ್ರಮಂದಿರಗಳಿಗೆ ಪ್ರೇಮ್ ಅಡ್ಡ ಲಗ್ಗೆ
ತಮಿಳಿನ ಯಶಸ್ವಿ ಸುಬ್ರಹ್ಮಣ್ಯಪುರಂ ರೀಮೇಕ್ ಚಿತ್ರವಿದು. ಬೇರೆಯವರ ನಿರ್ದೇಶನದಲ್ಲಿ ಪ್ರೇಮ್ ಅಭಿನಯಿಸುತ್ತಿರುವ ಮೊಟ್ಟ ಮೊದಲ ಚಿತ್ರ. ಕೃತಿ ಖರಬಂಧ ಚಿತ್ರದ ನಾಯಕಿ. ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಅಭಿನಯಿಸಿರುವ ಬಂಗಾರದ ಜಿಂಕೆ ಐಂದ್ರಿತಾ ರೇ ತಮ್ಮ ಸೊಂಟ ಕುಣಿಸಿದ್ದಾರೆ.
"ಮೇಲುಕೋಟೆ ಹುಡುಗಿ ಒಬ್ಳು ಪಡುವಾರಳ್ಳಿ ಜಾತ್ರೇನಾಗ ಇಣುಕಿ ಇಣುಕಿ ನೋಡುತ್ತಾಳೆ ಏನ್ ಸಿಂಗಾರ.." ಎಂಬ ಹಾಡು ಈಗಾಗಲೆ ಮೊಬೈಲ್ ಗಳಲ್ಲಿ, ಎಫ್ಎಂ ರೇಡಿಯೋಗಳಲ್ಲಿ ಎಲ್ಲೆಂದರಲ್ಲಿ ಸದ್ದು ಮಾಡುತ್ತಿದೆ. ಈ ಹಾಡನಲ್ಲಿನ ಮೇಲುಕೋಟೆ ಬದಲಾಗಿ ಏಳುಕೋಟೆ ಬಳಸುವುದಾಗಿ ಪ್ರೇಮ್ ಹೇಳಿದ್ದಾರೆ.
ಪ್ರೇಮ್ ನಟನೆಯ 'ಪ್ರೀತಿ ಏಕೆ ಭೂಮಿ ಮೇಲಿದೆ' ಚಿತ್ರ ಸೋತಮೇಲೆ ಪ್ರೇಮ್ ನಟನಾಗುವುದಕ್ಕೆ ಲಾಯಕ್ಕೇ ಎಂಬ ಪ್ರಶ್ನೆ ಉದ್ಯಮದಲ್ಲಿ ಹಾಗೂ ಕನ್ನಡ ಸಿನಿಪ್ರೇಕ್ಷಕ ವಲಯದಲ್ಲಿ ಕೇಳಿಬಂದಿತ್ತು. ನಂತರ ಶಿವರಾಜ್ ಕುಮಾರ್ ಅಭಿನಯ ಹಾಗೂ ಪ್ರೇಮ್ ನಿರ್ದೇಶನದ 'ಜೋಗಯ್ಯ' ಚಿತ್ರ ಸೋತ ಮೇಲೆ ಪ್ರೇಮ್ ನಿರ್ದೇಶನದ ಬಗ್ಗೆಯೂ ಅಪಸ್ವರ ಕೇಳಿಬಂತು. ಆದರೆ ಇದೀಗ ಬಿಡುಗಡೆಯಾಗುತ್ತಿರುವ 'ಪ್ರೇಮ್ ಅಡ್ಡ' ಎಲ್ಲ ಪ್ರಶ್ನೆ, ಅಪಸ್ವರಗಳಿಗೂ ಉತ್ತರ ನೀಡಿದರೆ ಅಚ್ಚರಿಯಿಲ್ಲ. (ಏಜೆನ್ಸೀಸ್)