Don't Miss!
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ ಪ್ರಚಾರ ಮಾಡಿದ್ದು ಏಕೆ? ಇದಕ್ಕೂ ಸುಮಲತಾಗೂ ಸಂಬಂಧ ಇದೆಯಾ?
- Automobiles ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- Lifestyle ರಸ್ತೆ ಬದಿಯ ಮರಗಳಿಗೆ ಬಣ್ಣ ಏಕೆ ಬಳಿದಿರುತ್ತಾರೆ..? ಕೆವಿನ್ ಪೀಟರ್ಸನ್ಗೆ ಈ ಪ್ರಶ್ನೆ ಕಾಡಿದ್ದೇಕೆ..?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ದಾಸ್ವಾಳ' ಕಣ್ಣಿಗೊತ್ತಿ ಕಿವಿಗಿಟ್ಟುಕೊಳ್ಳುವ ಸಮಯ
ದಸರಾ ಹಬ್ಬಕ್ಕೆ ಜೋಗಯ್ಯ ಪ್ರೇಮ್ ಎಲ್ಲರಿಗೂ 'ದಾಸ್ವಾಳ' ಕೊಡಲು ಬರುತ್ತಿದ್ದಾರೆ. ಈ ದಾಸ್ವಾಳ ಗಿಡಕ್ಕೆ ನೀರೆದು ಗೊಬ್ಬರ ಹಾಕಿ ಪೋಷಿಸಿರುವವರು ರಕ್ಷಿತಾ ಪ್ರೇಮ್ ಹಾಗೂ ಅಣಜಿ ನಾಗರಾಜ್. ಈಗದು ಅರಳಿ ನಿಂತಿದೆ. ಇದೇ ಅಕ್ಟೋಬರ್ 11ರಂದು ಪ್ರೇಕ್ಷಕರ ಮುಂದೆ ಬರುತ್ತಿದೆ.
ಈಗಾಗಲೆ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದೆ. ಪ್ರೇಮ್ ಅಡ್ಡ ಚಿತ್ರದ ಬಳಿಕ ಪ್ರೇಮ್ ಮತ್ತೆ ಬಣ್ಣ ಹಚ್ಚಿರುವ ಚಿತ್ರ. ದಾಸ್ವಾಳ ಚಿತ್ರಕ್ಕೆ ಎಂ.ಎಸ್.ರಮೇಶ್ ಆಕ್ಷನ್ ಕಟ್ ಹೇಳಿದ್ದಾರೆ.
ಈ ಬಾರಿ ಪ್ರೇಮ್ ಗೆ ಜೊತೆಯಾಗಿರುವವರು ಹೇಮಾ ಚೌದರಿ. ರಂಗಾಯಣ ರಘು, ಅವಿನಾಶ್ ಚಿತ್ರದ ಪಾತ್ರವರ್ಗದಲ್ಲಿದ್ದಾರೆ. ಗುರುಕಿರಣ್ ಅವರ ಸಂಗೀತ, ದಾಸರಿ ಸೀನು ಅವರ ಛಾಯಾಗ್ರಹಣ ಚಿತ್ರಕ್ಕಿದೆ.
ಪ್ರೇಮ್ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಇದೊಂದು ಸಂಬಂಧಗಳ ಸುತ್ತುವ ಕಥೆ. ನಾಲ್ಕು ಮಂದಿಯ ಕಥೆ ಎನ್ನುತ್ತದೆ ಚಿತ್ರತಂಡ. ಪ್ರೇಮ್ ಮತ್ತು ರಂಗಾಯಣ ರಘು ಕಾಂಬಿನೇಷನ್ ಚೆನ್ನಾಗಿ ಮೂಡಿಬಂದಿದೆ. ಚಿತ್ರದ ಹಾಡುಗಳಿಗೂ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ ಎನ್ನುತ್ತಾರೆ ನಿರ್ದೇಶಕರು. (ಏಜೆನ್ಸೀಸ್)