Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಿಯಾಮಣಿ ಚಾರುಲತಾ ಬಾಕ್ಸಾಫೀಸ್ ರಿಪೋರ್ಟ್
ಪ್ರಿಯಾಮಣಿ ಅಭಿನಯದ 'ಚಾರುಲತಾ' ಚಿತ್ರ ಉತ್ತಮ ವಿಮರ್ಶೆಗೆ ಪಾತ್ರವಾಗಿದೆ. ಆದರೆ ಬಾಕ್ಸಾಫೀಸಲ್ಲಿ ಮಾತ್ರ ಚಿತ್ರ ನಿರೀಕ್ಷಿಸಿದಷ್ಟು ಸದ್ದು ಮಾಡುತ್ತಿಲ್ಲ. ಈ ಚಿತ್ರ ಕ್ಲಾಸ್ ಪ್ರೇಕ್ಷಕರನ್ನು ಸೆಳೆಯುತ್ತಿದ್ದರೂ ಮಾಸ್ ಪ್ರೇಕ್ಷಕರನ್ನು ಸೆಳೆಯುವಲ್ಲಿ ಎಡವಿದೆ ಎಂದೇ ಹೇಳಬೇಕು.
ಸರಿಸುಮಾರು 110 ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ 'ಚಾರುಲತಾ' ಚಿತ್ರಕ್ಕೆ ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ರೆಗ್ಯುಲರ್ ಚಿತ್ರಕ್ಕಿಂತ ಭಿನ್ನವಾಗಿದ್ದ ಈ ಚಿತ್ರ ಮಾಸ್ ಪ್ರೇಕ್ಷಕರನ್ನು ಆಕರ್ಷಿಸುವಲ್ಲಿ ವಿಫಲವಾಗಿರುವುದನ್ನು ಚಿತ್ರತಂಡವೇ ಒಪ್ಪುತ್ತದೆ.
ಒಟ್ಟು ರು. 6 ಕೋಟಿ ಬಜೆಟ್ ನಲ್ಲಿ ನಿರ್ಮಿಸಿರುವ ಈ ಚಿತ್ರ ಮೊದಲ ವಾರಾಂತ್ಯದಲ್ಲಿ ರು.1.10 ಕೋಟಿ ಕಲೆಕ್ಷನ್ ಮಾಡಿದೆ. ಸಸ್ಪೆನ್ಸ್ ಹಾರರ್ ಥ್ರಿಲ್ಲರ್ ಚಿತ್ರವಾದ ಇದನ್ನು ದ್ವಾರಕೀಶ್ ನಿರ್ಮಿಸಿದ್ದು, ಈ ಚಿತ್ರಕ್ಕೆ ಪಿ ಕುಮರ್ ಆಕ್ಷನ್ ಕಟ್ ಹೇಳಿದ್ದಾರೆ.
ಥಾಯ್' ಭಾಷೆಯ 'ಅಲೋನ್' ಚಿತ್ರದ ರೀಮೇಕ್ ಆಗಿರುವ ಈ ಕನ್ನಡದ 'ಚಾರುಲತಾ', ಥಾಯ್ ಮೂಲದ ಚಿತ್ರವಾಗಿದ್ದರೂ ಪ್ರಪಂಚದೆಲ್ಲಡೆ ಸಲ್ಲಬಲ್ಲ ವಿಶಿಷ್ಟ ಕಥೆ ಹೊಂದಿದೆ. ಸಯಾಮಿ ಅವಳಿಗಳು ಮಾತ್ರವಲ್ಲದೇ ದೇಹದ ಹೊಟ್ಟೆ ಭಾಗದಲ್ಲಿ ಒಬ್ಬರಿಗೊಬ್ಬರು ಬೆಸೆದುಕೊಂಡಿರುವ ಹೆಣ್ಣುಮಕ್ಕಳಿಬ್ಬರ ಜೀವನಕ್ಕೆ ಸಂಬಂಧಿಸಿದ ಕಥೆಯಿದು.
ದೇಹ ಎರಡಾಗಿದ್ದರೂ ಬೇರೆಬೇರೆಯಾಗಿ ಬಾಳಲಾರದ ಈ ಜೀವಗಳು ಪ್ರತಿಯೊಂದು ಚಟುವಟಿಕೆಗೂ ಒಬ್ಬರನೊಬ್ಬರು ಅವಲಂಬಿಸಿರುತ್ತಾರೆ. ಆದರೆ ಮನಸ್ಸು ಮಾತ್ರ ಒಂದೇ ರೀತಿ ಯೋಚಿಸುವುದಲ್ಲದೇ ಕಾರ್ಯವನ್ನೂ ಮಾಡುವುದರಿಂದ ಈ ಇಬ್ಬರ ಮಧ್ಯೆ ಹೋಲಿಸಲು ಅಸಾಧ್ಯವಾದ ಅನ್ಯೋನ್ಯತೆ ಕಂಡುಬರುತ್ತದೆ. (ಚಾರುಲತಾ ಚಿತ್ರ ವಿಮರ್ಶೆ ಓದಿ)
ಆದರೆ ಈ ಸಯಾಮಿ ಅವಳಿ ಮಕ್ಕಳು ಬೆಳೆದು 20 ವರ್ಷಕ್ಕೆ ಕಾಲಿಡುತ್ತಿದ್ದಂತೆ ಇಬ್ಬರೂ ಒಂದೇ ಹುಡುಗನ ಪ್ರೀತಿಯಲ್ಲಿ ಬೀಳುತ್ತಾರೆ. ಅಲ್ಲಿಂದ ಮುಂದಕ್ಕೆ ಈ ಅವಳಿಗಳ ಜೀವನ ಯಾವ ತಿರುವು ಪಡೆಯುತ್ತದೆ ಎಂಬುದೇ ಚಿತ್ರದ ಕಥೆಯ ತಿರುಳು. (ಒನ್ಇಂಡಿಯಾ ಕನ್ನಡ)