Don't Miss!
- News Shivamogga: ದೇಶದಲ್ಲಿ ಕಾಂಗ್ರೆಸ್ನ ಸ್ಪರ್ಧೆಯ ಕ್ಷೇತ್ರ, ಟಾರ್ಗೆಟ್ ಕ್ಷೇತ್ರಗಳ ಲೆಕ್ಕ ಕೊಟ್ಟ ಮಾಜಿ ಸಿಎಂ
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ತೆರೆಯ ಮೇಲೆ ಒಂದಾಗ್ತಾರಾ ಕುಚಿಕು ಗೆಳೆಯರು.?
ಬಾಕ್ಸಾಫೀಸ್ ಸುಲ್ತಾನ ದರ್ಶನ್ ಅವರು 'ಚಕ್ರವರ್ತಿ' ಎಂಬ ಸಿನಿಮಾದಲ್ಲಿ ಮಿಂಚುತ್ತಿದ್ದಾರೆ ಎಂಬ ವಿಷಯ ಎಲ್ಲರಿಗೂ ಗೊತ್ತೇ ಇದೆ. ಈ ಚಿತ್ರದಲ್ಲಿ ದರ್ಶನ್ ಅವರಿಗೆ ನಾಯಕಿಯಾಗಿ ದಕ್ಷಿಣ ಭಾರತದ ಖ್ಯಾತ ನಟಿ ಅಂಜಲಿ ಅವರು ಕಾಣಿಸಿಕೊಳ್ಳುತ್ತಾರೆ ಎಂಬ ವಿಚಾರವನ್ನು ನಾವು ನಿಮಗೆ ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ.
ಇದೀಗ ಈ ಚಿತ್ರತಂಡದಿಂದ ಹೊರಬಿದ್ದಿರುವ ಖಾಸ್ ಖಬರ್ ಏನಪ್ಪಾ ಅಂದ್ರೆ ಈ ಚಿತ್ರದಲ್ಲಿ ದರ್ಶನ್ ಅವರ ಜೊತೆ ಅವರ ಖಾಸ ದೋಸ್ತ್ ನಟ 'ಡೆಡ್ಲಿ' ಆದಿತ್ಯ ಅವರು ಮಿಂಚಲಿದ್ದಾರೆ ಅನ್ನೋ ಮಾಹಿತಿ ಹೊರಬಿದ್ದಿದೆ. ಮಾತ್ರವಲ್ಲದೇ ಇದೇ ತಿಂಗಳು 24 ರಂದು ಸಿನಿಮಾ ಸೆಟ್ಟೇರಿ ಶೂಟಿಂಗ್ ಆರಂಭವಾಗಲಿದೆ.[ದರ್ಶನ್ ಅವರ 'ಚಕ್ರವರ್ತಿ' ಚಿತ್ರದ ನಾಯಕಿ ಇವರೇ]
ಅಂದಹಾಗೆ ಈ ಚಿತ್ರಕ್ಕೆ ನಿರ್ಮಾಪಕ ಅನಜಿ ನಾಗರಾಜ್ ಅವರು ಬಂಡವಾಳ ಹೂಡಲಿದ್ದಾರೆ. ಈ ಮೊದಲು ನಿರ್ಮಾಪಕ ಸತ್ಯ (ಸತ್ಯಪ್ರಕಾಶ್) ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ ಎಂದಾಗಿತ್ತು. ಇದೀಗ ಕೆಲವು ಬದಲಾವಣೆಗಳಿಂದ ಹಾಗೂ ಕೆಲವು ಕಾರಣಗಳಿಂದ ಚಿತ್ರಕ್ಕೆ 'ಸ್ನೇಹನಾ ಪ್ರೀತಿನಾ' ಖ್ಯಾತಿಯ ನಿರ್ಮಾಪಕ ಅನಜಿ ನಾಗರಾಜ್ ಬಂಡವಾಳ ಹೂಡುತ್ತಿದ್ದಾರೆ.[ಹೊಸ ಅವತಾರ ಎತ್ತಿದ ಚಾಲೆಂಜಿಂಗ್ ಸ್ಟಾರ್ ದರ್ಶನ್]
ದರ್ಶನ್ ಮತ್ತು ಆದಿತ್ಯ ಅವರು ಈ ಮೊದಲು 'ಸ್ನೇಹನಾ ಪ್ರೀತಿನಾ' ಚಿತ್ರದಲ್ಲಿ ಒಂದಾಗಿ ತೆರೆ ಹಂಚಿಕೊಂಡಿದ್ದರು. ಇದೀಗ ನವ ನಿರ್ದೇಶಕ ಚಿಂತನ್ ಅವರು ಆಕ್ಷನ್-ಕಟ್ ಹೇಳುತ್ತಿರುವ 'ಚಕ್ರವರ್ತಿ' ಚಿತ್ರದಲ್ಲಿ ಕೂಡ ದರ್ಶನ್ ಮತ್ತು ಆದಿತ್ಯ ಕಮಾಲ್ ಮಾಡುತ್ತಾರ ಅಂತ ಕಾದು ನೋಡಬೇಕಿದೆ.['ಡೆಡ್ಲಿ' ಆದಿತ್ಯರ 'ಬೆಂಗಳೂರು ಅಂಡರ್ ವರ್ಲ್ಡ್'ಗೆ ದರ್ಶನ್ ಸಾಥ್]
ಈಗಾಗಲೇ 'ಚಕ್ರವರ್ತಿ' ಚಿತ್ರದ ಫಸ್ಟ್ ಲುಕ್ ಬಿಡುಗಡೆ ಆಗಿದ್ದು, ಭಾರಿ ರೆಸ್ಪಾನ್ಸ್ ಕೂಡ ಗಿಟ್ಟಿಸಿಕೊಂಡಿದೆ. ಈ ಚಿತ್ರದಲ್ಲಿ ದರ್ಶನ್ ಅವರು ವಿಭಿನ್ನ ಲುಕ್ ನಲ್ಲಿ ಮಿಂಚಲಿದ್ದು, ಭೂಗತ ಲೋಕದ ಕಥೆಯನ್ನು ಈ ಸಿನಿಮಾದಲ್ಲಿ ಎಳೆ-ಎಳೆಯಾಗಿ ಬಿಚ್ಚಿಡಲು ನಿರ್ದೇಶಕ ಚಿಂತನ್ ಅವರು ಪ್ಲ್ಯಾನ್ ಮಾಡುತ್ತಿದ್ದಾರೆ.