Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅವಂತಿಕಾ ಶೆಟ್ಟಿ ವಿರುದ್ಧ ವಾಣಿಜ್ಯ ಮಂಡಳಿಗೆ ಸುರೇಶ್ ದೂರು
'ರಾಜು ಕನ್ನಡ ಮೀಡಿಯಂ' ನಾಯಕ ನಟಿ ಅವಂತಿಕಾ ಶೆಟ್ಟಿ ವಿರುದ್ಧ ನಿರ್ಮಾಪಕ ಕೆ.ಎ.ಸುರೇಶ್ ಕರ್ನಾಟಕದ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ಸಲ್ಲಿಸಿದ್ದಾರೆ. ಅವಂತಿಕಾ ಶೆಟ್ಟಿ ರವರನ್ನು ಚಿತ್ರದಲ್ಲಿ ಮುಂದುವರೆಸುವುದಿಲ್ಲ, ಅವರನ್ನು ಬಿಟ್ಟು ಸಿನಿಮಾ ಚಿತ್ರೀಕರಣ ಮುಂದುವರೆಸಲು ಅನುಮತಿ ನೀಡಬೇಕು ಎಂದು ಕೆ.ಎ.ಸುರೇಶ್ ದೂರಿನಲ್ಲಿ ಮನವಿ ಮಾಡಿದ್ದಾರೆ.[ಸುರೇಶ್ ಮೇಲೆ ಅವಂತಿಕಾ ಆರೋಪ: ನಟ ಗುರುನಂದನ್ ಹೇಳಿದ್ದೇನು?]
ಇದಕ್ಕೂ ಮುನ್ನ 'ರಾಜು ಕನ್ನಡ ಮೀಡಿಯಂ' ಚಿತ್ರೀಕರಣಕ್ಕೆ ಸರಿಯಾದ ಸಮಯಕ್ಕೆ ಬರುತ್ತಿಲ್ಲ. ಅಲ್ಲದೇ ನಾವು ಅಬ್ರಾಡ್ ಗೆ ಚಿತ್ರೀಕರಣಕ್ಕೆ ಕರೆದರು ಬಂದಿರಲಿಲ್ಲ ಎಂದು ಚಿತ್ರ ನಿರ್ಮಾಪಕ ಕೆ.ಎ.ಸುರೇಶ್ ರವರು ಅವಂತಿಕಾ ಶೆಟ್ಟಿ ವಿರುದ್ಧ ಆರೋಪ ಮಾಡಿದ್ದರು. ಇದಕ್ಕೆ ಪ್ರತ್ಯಾರೋಪ ಮಾಡಿದ್ದ ಅವಂತಿಕಾ ಶೆಟ್ಟಿ ನಿರ್ಮಾಪಕರು ಮಾಡಿರುವ ಆರೋಪ ಸುಳ್ಳು ಎಂದು ಹೇಳಿದ್ದರು. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿ ದೊಡ್ಡ ಮಟ್ಟದಲ್ಲಿ ವಿವಾದ ಸೃಷ್ಟಿಯಾಗಿತ್ತು.
ನಟ ಗುರುನಂದನ್ ಅಭಿನಯದ 'ರಾಜು ಕನ್ನಡ ಮೀಡಿಯಂ' ಚಿತ್ರದಲ್ಲಿ ನಟಿಸುತ್ತಿದ್ದ ನಟಿ ಅವಂತಿಕಾ ಶೆಟ್ಟಿ ರವರನ್ನು ಇತ್ತೀಚೆಗೆ ಸರಿಯಾಗಿ ಚಿತ್ರೀಕರಣಕ್ಕೆ ಬರುತ್ತಿಲ್ಲ ಎಂಬ ಕಾರಣದಿಂದ ಚಿತ್ರದಿಂದ ಕೋಕ್ ನೀಡಲಾಗಿತ್ತು ಎಂದು ಸುದ್ದಿ ಕೇಳಿಬಂದಿತ್ತು. ನಂತರ ತಮ್ಮ ಬಗ್ಗೆ ಮಾಡಿದ ಆರೋಪಗಳನ್ನು ತಳ್ಳಿಹಾಕಿದ್ದ ಅವಂತಿಕಾ ನಿರ್ಮಾಪಕರು ಮಾಡಿರುವ ಆರೋಪಗಳೆಲ್ಲ ಸುಳ್ಳು ಎಂದು ಹೇಳಿದ್ದರು. ಅಲ್ಲದೇ ಸಾಮಾಜಿಕ ಜಾಲತಾಣ ಮೊರೆ ಹೋಗಿ ನಿರ್ಮಾಪಕರೇ ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಕಾಸ್ಟ್ಯೂಮರ್ ಸಹ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು.[ಅವಂತಿಕಾ V/S ಸುರೇಶ್: ನಿರ್ಮಾಪಕನ ಆರೋಪಕ್ಕೆ ತಿರುಗು ಬಾಣ ಬಿಟ್ಟ ನಟಿ]