Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೈಕೊಟ್ಟ ಪ್ರಾಜೆಕ್ಟರ್,ಚಿತ್ರಮಂದಿರದಲ್ಲಿ ಪ್ರೇಕ್ಷಕರ ದಾಂಧಲೆ
ಜಿಪಿನಗರದ ಸಿದ್ದಲಿಂಗೇಶ್ವರ ಚಿತ್ರಮಂದಿರದಲ್ಲಿ ಉಪೇಂದ್ರ ಅಭಿನಯದ ಕಲ್ಪನ ಚಿತ್ರ ನೋಡಲು ಪ್ರೇಕ್ಷಕರು ಕಿಕ್ಕಿರಿದು ತುಂಬಿದ್ದರು. ಚಿತ್ರ ಕ್ಲೈಮ್ಯಾಕ್ಸ್ ಹತ್ತಿರ ಬರುತ್ತಿದ್ದಂತೆಯೇ ಪ್ರಾಜೆಕ್ಟರ್ ಕೈಕೊಟ್ಟಿತ್ತು. ಸಹನೆ ಕಳೆದುಕೊಂಡ ಅಭಿಮಾನಿಗಳು ಚಿತ್ರಮಂದಿರದ ಗ್ಲಾಸ್, ಕುರ್ಚಿಗಳಿಗೆ ಹಾನಿ ಮಾಡಿದ್ದಾರೆ.
ಚಿತ್ರಮಂದಿರದ ಆಡಳಿತ ಮಂಡಳಿ ಪರಿ ಪರಿಯಾಗಿ ವಿನಂತಿಸಿದ ನಂತರ ಪ್ರಾಜೆಕ್ಟರ್ ನಲ್ಲಾದ ತಾಂತ್ರಿಕ ತೊಂದರೆ ಸರಿಪಡಿಸಿ ಕೊನೆಯ ಹತ್ತು ನಿಮಿಷವನ್ನು ಮತ್ತೆ ಪ್ರಸಾರ ಮಾಡುವಷ್ಟರಲ್ಲಿ ಚಿತ್ರಮಂದಿರದ ಸಿಬ್ಬಂದಿಗಳು ಹೈರಾಣವಾಗಿ ಹೋಗಿದ್ದರು.
ಶನಿವಾರ (ಸೆ 29) ರಾತ್ರಿಯ ಪ್ರದರ್ಶನದ ವೇಳೆ ಈ ಘಟನೆ ನಡೆದಿದೆ.
ಈ ಮಧ್ಯೆ, ಮಾಧ್ಯಮಗಳ ಮಿಶ್ರ ಪ್ರತಿಕ್ರಿಯೆಯ ನಡುವೆ ಕಲ್ಪನ ಚಿತ್ರ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಎಂದಿನ ಉಪೇಂದ್ರ ಚಿತ್ರದಂತೆ ಈ ಚಿತ್ರದಲ್ಲೂ ಅವರ ಸಂಭಾಷಣೆಗೆ ಜನ ಮನಸೋತಿದ್ದಾರೆ.
ನಿರ್ದೇಶಕ ರಾಮ್ ನಾರಾಯಣ್ ಚಿತ್ರಕಥೆ, ನಿರ್ದೇಶನದ ಜೊತೆಗೆ ಚಿತ್ರದ ನಿರ್ಮಾಪಕರೂ ಆಗಿರುವುದು ವಿಶೇಷ. ಮೂಲ ಕಥೆಯನ್ನು ಕೆಡಿಸದೇ ರಿಮೇಕ್ ಮಾಡಿ ಕನ್ನಡದಲ್ಲಿ ರಾಮ್ ನಾರಾಯಣ್ ತೆರೆಗೆ ತಂದಿದ್ದಾರೆ.