Don't Miss!
- News Bank Holidays in April: ಏಪ್ರಿಲ್ನಲ್ಲಿ 14 ದಿನಗಳ ಕಾಲ ಬ್ಯಾಂಕ್ ರಜೆ, ಪಟ್ಟಿ ಇಲ್ಲಿದೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಪ್ಪದೆ ಓಟ್ ಮಾಡಿ ಎಂದಿದ್ದ ಪುನೀತೇ ಓಟಾಕಿರಲಿಲ್ಲ!
ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚುನಾವಣಾ ಆಯೋಗದ ರಾಯಭಾರಿಯಾಗಿ ಕೆಲಸ ಮಾಡಿದ್ದರು. "ನಾನು ಓಟ್ ಮಾಡುತ್ತೇನೆ, ನೀವೂ? ತಪ್ಪದೆ ಓಟ್ ಮಾಡಿ" ಎಂದು ಜಾಹೀರಾತಿನಲ್ಲಿ ಕಾಣಿಸಿಕೊಂಡು ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದರು.
ವಿಚಿತ್ರ ಎಂದರೆ ಎಲ್ಲರಿಗೂ ಓಟ್ ಮಾಡಿ ಎಂದಿದ್ದ ಪುನೀತ್ ಅವರೇ ಮತದಾನ ಮಾಡಿರಲಿಲ್ಲ. 2013ರ ವಿಧಾನಸಭಾ ಚುನಾವಣೆ ವೇಳೆ ಮತದಾರರನ್ನು ಮತಗಟ್ಟೆಗೆ ಆಕರ್ಷಿಸುವ ಸಲುವಾಗಿ ಪುನೀತ್, ರಮೇಶ್ ಅರವಿಂದ್ ಹಾಗೂ ಐಂದ್ರಿತಾ ರೇ ಅವರನ್ನು ಚುನಾವಣಾ ರಾಯಭಾರಿಗಳನ್ನಾಗಿ ಆಯ್ಕೆ ಮಾಡಿಕೊಂಡಿದ್ದು ಗೊತ್ತೇ ಇದೆ. ['ರಣ ವಿಕ್ರಮ' ಥ್ರಿಲ್ಲಿಂಗ್ ಡೀಟೇಲ್ಸ್]
ಇನ್ನೊಂದು ಕಡೆ ಪುನೀತ್ ಅವರ ಅತ್ತಿಗೆ ಹಾಗೂ ಶಿವಣ್ಣ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಜೆಡಿಎಸ್ ಪಕ್ಷದಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲೂ ಪುನೀತ್ ಅವರನ್ನು ಚುನಾವಣಾ ರಾಯಭಾರಿ ಜವಾಬ್ದಾರಿಯಿಂದ ಕೈಬಿಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ.
ಈ ಬಗ್ಗೆ ಮಾತನಾಡಿರುವ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಅನಿಲ್ ಕುಮಾರ್ ಝಾ, ಸದ್ಯಕ್ಕೆ ನಾವು ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯದಲ್ಲಿ ಬಿಜಿಯಾಗಿದ್ದೇವೆ. ಯಾವ ಸಿನಿಮಾ ತಾರೆಗಳನ್ನು ಚುನಾವಣಾ ರಾಯಭಾರಿಗಳನ್ನಾಗಿ ಆಯ್ಕೆ ಮಾಡಿಕೊಳ್ಳಬೇಕು ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದಿದ್ದಾರೆ.