Don't Miss!
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- News DV Sadananda Gowda: ಕಾಂಗ್ರೆಸ್ ನತ್ತ ಡಿ ವಿ ಸದಾನಂದಗೌಡ? ನಾಲ್ಕು ಕ್ಷೇತ್ರಗಳ ಆಫರ್ ಕೊಟ್ಟ ಕೈ ನಾಯಕರು?
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರಪೀಡಿತ ಜನರ ದಾಹ ತೀರಿಸಲು ಮುಂದಾದ 'ಚಕ್ರವ್ಯೂಹ' ಚಿತ್ರತಂಡ
ಮೊನ್ನೆ ಮೊನ್ನೆ ರಾಕಿಂಗ್ ಸ್ಟಾರ್ ಯಶ್ ಅವರು ಉತ್ತರ ಕರ್ನಾಟಕದ 25 ಬರಪೀಡಿತ ಪ್ರದೇಶಗಳ ಹಳ್ಳಿಗಳಿಗೆ ಯಶೋಮಾರ್ಗ ಫೌಂಡೇಶನ್ ನಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ ಎಲ್ಲರಿಗೂ ಮಾದರಿಯಾದ ಬೆನ್ನಲ್ಲೇ ಇದೀಗ 'ಚಕ್ರವ್ಯೂಹ' [ವಿಮರ್ಶೆ; 'ಚಕ್ರವ್ಯೂಹ'ದೊಳ್ ಜನನಾಯಕ ಪುನೀತ್ ಗೆ ಜೈ.!] ಚಿತ್ರತಂಡ ಬರಪೀಡಿತ ಜನರ ಸಹಾಯಕ್ಕೆ ಮುಂದಾಗಿದೆ.
ಹೌದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮತ್ತು ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ಮಿಂಚಿರುವ 'ಚಕ್ರವ್ಯೂಹ' ಚಿತ್ರತಂಡ ಉತ್ತರ ಕರ್ನಾಟಕದ ಬರಪೀಡಿತ ಹಳ್ಳಿಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಭಾನುವಾರದ ಎಲ್ಲಾ ಪ್ರದರ್ಶನಗಳ ಟಿಕೆಟ್ ಬೆಲೆಯಲ್ಲಿ 10 ರೂಪಾಯಿ ಹೆಚ್ಚಳ ಮಾಡಿ ಕಲೆಕ್ಷನ್ ಆದ ಹಣವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲು ನಿರ್ಧಾರ ಮಾಡಿದ್ದಾರೆ.[ದಾಹ ತೀರಿಸಿ ಉತ್ತರ ಕರ್ನಾಟಕ ಜನತೆಯ ಹೃದಯ ಗೆದ್ದ ಯಶ್]
ಈ ಮೂಲಕ ಸುಮಾರು 50 ಲಕ್ಷ ಹಣ ಹೂಡಿಕೆಯಾಗಬಹುದು ಎಂದು ಚಿತ್ರತಂಡದವರು ಅಂದಾಜಿಸಿದ್ದು, ಆ ಪೂರ್ತಿ ಹಣವನ್ನು ಪರಿಹಾರ ನಿಧಿಗೆ ನೀಡಲಿದ್ದಾರೆ. ಮಾತ್ರವಲ್ಲದೇ 'ಚಕ್ರವ್ಯೂಹ' ಚಿತ್ರದ ನಿರ್ಮಾಪಕರಾದ ಎನ್.ಕೆ ಲೋಹಿತ್ ಅವರು ಪ್ರತ್ಯೇಕವಾಗಿ ಸುಮಾರು 3 ಲಕ್ಷ ರೂಪಾಯಿಯನ್ನು ಬರಪೀಡಿತ ಹಳ್ಳಿಗಳಿಗೆ ದೇಣಿಗೆಯಾಗಿ ನೀಡಿದ್ದಾರೆ.[ಅಬ್ಬಬ್ಬಾ.! 'ಚಕ್ರವ್ಯೂಹ' ಮೊದಲ ದಿನದ ಕಲೆಕ್ಷನ್ ಇಷ್ಟಾ.?]
ತಮಿಳು ನಿರ್ದೇಶಕ ಎಮ್.ಸರವಣನ್ ಆಕ್ಷನ್-ಕಟ್ ಹೇಳಿರುವ 'ಚಕ್ರವ್ಯೂಹ' ಚಿತ್ರ ಎಲ್ಲಾ ಕಡೆ ಅದ್ಭುತ ಓಪನಿಂಗ್ ಪಡೆದುಕೊಂಡು ಕೇವಲ ಒಂದು ದಿನದಲ್ಲಿ ಸುಮಾರು 11 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು.