Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅನಿಲ್-ಉದಯ್' ಕುಟುಂಬಕ್ಕೆ ತಲಾ 1 ಲಕ್ಷ ನೀಡಿದ ಆರ್.ಚಂದ್ರು
'ಮಾಸ್ತಿಗುಡಿ' ಚಿತ್ರದ ದುರಂತದಲ್ಲಿ ಸಾವಿಗೀಡಾಗಿದ್ದ ಅನಿಲ್ ಹಾಗೂ ಉದಯ್ ಕುಟುಂಬಗಳಿಗೆ ನಿರ್ದೇಶಕ ಆರ್.ಚಂದ್ರು ಸಹಾಯ ಹಸ್ತ ನೀಡಿದ್ದಾರೆ. ಡಿಸೆಂಬರ್ 13, ಮಂಗಳವಾರ ಬೆಳಿಗ್ಗೆ ಉದಯ್ ಅವರ ಮನೆಗೆ ತೆರಳಿದ್ದ ಆರ್.ಚಂದ್ರು, ಅವರ ತಂದೆ-ತಾಯಿಗೆ 1 ಲಕ್ಷ ರೂಪಾಯಿಯ ಚೆಕ್ ನೀಡಿದ್ದಾರೆ.
ಇನ್ನೂ, ದುರಂತದಲ್ಲಿ ಸಾವುಗೀಡಾಗಿದ್ದ ಮತ್ತೊಬ್ಬ ಖಳನಟ ಅನಿಲ್ ಅವರ ಮನೆಗೂ ಭೇಟಿ ನೀಡಿ, ಅವರಿಗೂ ಒಂದು ಲಕ್ಷ ರೂಪಾಯಿ ಸಹಾಯ ಧನ ನೀಡುವ ಮೂಲಕ ನೆರವಾಗಿದ್ದಾರೆ.
ಸದ್ಯ, ಆರ್.ಚಂದ್ರು 'ಕನಕ' ಚಿತ್ರವನ್ನ ನಿರ್ದೇಶನ ಮಾಡುವ ತಯಾರಿಯಲ್ಲಿದ್ದಾರೆ. ಈ ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿದ್ದಾರೆ. ಇನ್ನೂ ಅನಿಲ್ ಹಾಗೂ ಉದಯ್ ಕೂಡ ಈ ಚಿತ್ರದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಈ ಇಬ್ಬರಿಗೂ ಆರ್.ಚಂದ್ರು ಪಾತ್ರಗಳನ್ನ ಫಿಕ್ಸ್ ಮಾಡಿದ್ರಂತೆ. ಆದ್ರೆ, ಈಗ ಆ ಪಾತ್ರಗಳನ್ನ ಬೇರೆಯವರು ಮಾಡಬೇಕಾಗಿದೆ.[ಆರ್ ಚಂದ್ರು ಅವರ 'ಕನಕ' ಚಿತ್ರದಲ್ಲಿ ಅನಿಲ್-ಉದಯ್.!]
ವಿಶೇಷ ಅಂದ್ರೆ, 'ಕನಕ' ಚಿತ್ರದಲ್ಲಿ ಅನಿಲ್ ಹಾಗೂ ಉದಯ್ ಅವರು ಮಾಡಬೇಕಿದ್ದ ಪಾತ್ರಗಳಿಗೆ, ಅವರ ಹೆಸರನ್ನೇ ಬಳಸಿಕೊಳ್ಳಲು ಆರ್.ಚಂದ್ರು ನಿರ್ಧಾರ ಮಾಡಿದ್ದಾರೆ.