Don't Miss!
- Automobiles ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ ಓದಿದ ಕನ್ನಡ ಮಾಧ್ಯಮ ಶಾಲೆ ನವೀಕರಣ
ಶಾಲೆಯ ನವೀಕರಣ ಕೆಲಸ ಮುಗಿಗಲು ಆರು ತಿಂಗಳ ಸಮಯ ಹಿಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಮೂಲಗಳ ಪ್ರಕಾರ, ಶಿಕ್ಷಣ ಇಲಾಖೆ ರು.81.5 ಲಕ್ಷ, ಸಂಸದ ಅನಂತಕುಮಾರ್ ಹಾಗೂ ಶಾಸಕ ರವಿ ಸುಬ್ರಹ್ಮಣ್ಯ ಅವರು ಕ್ರಮವಾಗಿ ರು. 25 ಲಕ್ಷ ಹಾಗೂ ರು. 20 ಲಕ್ಷ ನಿಧಿಯನ್ನು ಶಾಲೆಯ ನವೆಕರಣಕ್ಕೆ ನೀಡಿದ್ದಾರೆ.
1954ರಿಂದ 1959ರ ಅವಧಿಯಲ್ಲಿ ರಜನಿಕಾಂತ್ ಅವರು ಈ ಶಾಲೆಯಲ್ಲಿ 5ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದಾರೆ. ಏಳನೇ ತರಗತಿವರೆಗೂ ಶಿಕ್ಷಣ ನೀಡುತ್ತಿದ್ದ ಈ ಶಾಲೆಯನ್ನು ಈಗ 10ನೇ ತರಗತಿವರೆಗೂ ವಿಸ್ತರಿಸಲಾಗುತ್ತಿದೆ.
ಶಾಲೆಯ ಕಟ್ಟಡ ಹಾಳಾಗಿದ್ದು ಇಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೆ ಕನಿಷ್ಠ ಸೌಲಭ್ಯಗಳು ಇರಲಿಲ್ಲ. ಐದು ವರ್ಷಗಳ ಹಿಂದೆಯೇ ಈ ಶಾಲೆಯ ನವೀಕರಣಕ್ಕಾಗಿ ಬೇಡಿಕೆ ಇಡಲಾಗಿತ್ತು. ಸರ್ಕಾರ ಈಗ ಗ್ರೀನ್ ಸಿಗ್ನಲ್ ಕೊಟ್ಟಿದೆ. ತಾನು ಓದಿದ ಶಾಲೆಗೆ ತಾವು ರು.25 ಲಕ್ಷಗಳನ್ನು ಉದಾರವಾಗಿ ನೀಡುವುದಾಗಿ ರಜನಿಕಾಂತ್ ಭರವಸೆ ನೀಡಿದ್ದರು.
ಈ ಶಾಲೆಗೆ ನೂರು ವರ್ಷಗಳ ಇತಿಹಾಸವಿದೆ. ಆದರೆ ಈ ಶಾಲೆಗೆ ಮೂಲ ಸೌಲಭ್ಯಗಳಿಲ್ಲದೆ ಬಾಗಿಲು ಮುಚ್ಚುವ ಹಂತ ತಲುಪಿತ್ತು. ಈ ಪಾಠಶಾಲೆಯನ್ನು ಅಭಿವೃದ್ಧಿ ಮಾಡಲು ರಜನಿ ಅಭಿಮಾನಿಗಳು ಕೈಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ರಜನಿಜೀ ಸೇವಾ ಸಮಿತಿ ಸಹ ಮನವಿ ಮಾಡಿಕೊಂಡಿತ್ತು.
ಶಿಥಿಲಾವಸ್ಥೆಯಲ್ಲಿರುವ ಈ ಶಾಲೆಯ ಕೊಠಡಿಗಳು ವಿದ್ಯಾರ್ಥಿಗಳು ಕುಳಿತುಕೊಳ್ಳಲಾಗದಂತಹ ಸ್ಥಿತಿಯಲ್ಲಿವೆ. ರಜನಿಕಾಂತ್ ಈ ಶಾಲೆಯಲ್ಲಿ ಓದಿದ ಕಾರಣ ಈ ಶಾಲೆಗೆ ಒಂದು ಗೌರವ, ಘನತೆ ಬಂದಿತ್ತು. (ಏಜೆನ್ಸೀಸ್)