twitter
    For Quick Alerts
    ALLOW NOTIFICATIONS  
    For Daily Alerts

    ರಜನಿಕಾಂತ್ ಓದಿದ ಕನ್ನಡ ಮಾಧ್ಯಮ ಶಾಲೆ ನವೀಕರಣ

    By Rajendra
    |

    ಸೂಪರ್ ಸ್ಟಾರ್ ರಜನಿಕಾಂತ್ ವಿದ್ಯಾಭ್ಯಾಸ ಮಾಡಿದ ಬೆಂಗಳೂರಿನ ಗವಿಪುರಂನ ಪ್ರಾಥಮಿಕ ಶಾಲೆಯನ್ನು ನವೀಕರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಶಾಲೆಯ ನವೀಕರಣಕ್ಕಾಗಿ ರು.1.53 ಕೋಟಿಯನ್ನು ಖರ್ಚು ಮಾಡುತ್ತಿದೆ. ಈಗಾಗಲೆ ಉಪಮುಖ್ಯಮಂತ್ರಿ ಆರ್ ಅಶೋಕ್ ಅವರು ಹೊಸ ಕಟ್ಟಡಕ್ಕಾಗಿ ಶಂಕುಸ್ಥಾನಪನೆ ಮಾಡಿದ್ದಾರೆ.

    ಶಾಲೆಯ ನವೀಕರಣ ಕೆಲಸ ಮುಗಿಗಲು ಆರು ತಿಂಗಳ ಸಮಯ ಹಿಡಿಸುತ್ತದೆ ಎಂದು ನಿರೀಕ್ಷಿಸಲಾಗಿದೆ. ಮೂಲಗಳ ಪ್ರಕಾರ, ಶಿಕ್ಷಣ ಇಲಾಖೆ ರು.81.5 ಲಕ್ಷ, ಸಂಸದ ಅನಂತಕುಮಾರ್ ಹಾಗೂ ಶಾಸಕ ರವಿ ಸುಬ್ರಹ್ಮಣ್ಯ ಅವರು ಕ್ರಮವಾಗಿ ರು. 25 ಲಕ್ಷ ಹಾಗೂ ರು. 20 ಲಕ್ಷ ನಿಧಿಯನ್ನು ಶಾಲೆಯ ನವೆಕರಣಕ್ಕೆ ನೀಡಿದ್ದಾರೆ.

    1954ರಿಂದ 1959ರ ಅವಧಿಯಲ್ಲಿ ರಜನಿಕಾಂತ್ ಅವರು ಈ ಶಾಲೆಯಲ್ಲಿ 5ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದಾರೆ. ಏಳನೇ ತರಗತಿವರೆಗೂ ಶಿಕ್ಷಣ ನೀಡುತ್ತಿದ್ದ ಈ ಶಾಲೆಯನ್ನು ಈಗ 10ನೇ ತರಗತಿವರೆಗೂ ವಿಸ್ತರಿಸಲಾಗುತ್ತಿದೆ.

    ಶಾಲೆಯ ಕಟ್ಟಡ ಹಾಳಾಗಿದ್ದು ಇಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೆ ಕನಿಷ್ಠ ಸೌಲಭ್ಯಗಳು ಇರಲಿಲ್ಲ. ಐದು ವರ್ಷಗಳ ಹಿಂದೆಯೇ ಈ ಶಾಲೆಯ ನವೀಕರಣಕ್ಕಾಗಿ ಬೇಡಿಕೆ ಇಡಲಾಗಿತ್ತು. ಸರ್ಕಾರ ಈಗ ಗ್ರೀನ್ ಸಿಗ್ನಲ್ ಕೊಟ್ಟಿದೆ. ತಾನು ಓದಿದ ಶಾಲೆಗೆ ತಾವು ರು.25 ಲಕ್ಷಗಳನ್ನು ಉದಾರವಾಗಿ ನೀಡುವುದಾಗಿ ರಜನಿಕಾಂತ್ ಭರವಸೆ ನೀಡಿದ್ದರು.

    ಈ ಶಾಲೆಗೆ ನೂರು ವರ್ಷಗಳ ಇತಿಹಾಸವಿದೆ. ಆದರೆ ಈ ಶಾಲೆಗೆ ಮೂಲ ಸೌಲಭ್ಯಗಳಿಲ್ಲದೆ ಬಾಗಿಲು ಮುಚ್ಚುವ ಹಂತ ತಲುಪಿತ್ತು. ಈ ಪಾಠಶಾಲೆಯನ್ನು ಅಭಿವೃದ್ಧಿ ಮಾಡಲು ರಜನಿ ಅಭಿಮಾನಿಗಳು ಕೈಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ರಜನಿಜೀ ಸೇವಾ ಸಮಿತಿ ಸಹ ಮನವಿ ಮಾಡಿಕೊಂಡಿತ್ತು.

    ಶಿಥಿಲಾವಸ್ಥೆಯಲ್ಲಿರುವ ಈ ಶಾಲೆಯ ಕೊಠಡಿಗಳು ವಿದ್ಯಾರ್ಥಿಗಳು ಕುಳಿತುಕೊಳ್ಳಲಾಗದಂತಹ ಸ್ಥಿತಿಯಲ್ಲಿವೆ. ರಜನಿಕಾಂತ್ ಈ ಶಾಲೆಯಲ್ಲಿ ಓದಿದ ಕಾರಣ ಈ ಶಾಲೆಗೆ ಒಂದು ಗೌರವ, ಘನತೆ ಬಂದಿತ್ತು. (ಏಜೆನ್ಸೀಸ್)

    English summary
    Superstar Rajinikanth's childhood school in Gavipuram, Bangalore is finally ready for the makeover. A total of Rs 1.53 crore has been sanctioned and the government of Karnataka laid a foundation for the construction works.
    Thursday, September 6, 2012, 16:17
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X