Don't Miss!
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- News ಚಿತ್ರದುರ್ಗದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಅಭ್ಯರ್ಥಿ ಬದಲಿಸದಿದ್ದರೆ ಪಕ್ಷೇತರ ಸ್ಪರ್ಧೆ, ಏ.3ಕ್ಕೆ ನಾಮಪತ್ರ ಸಲ್ಲಿಕೆ?
- Automobiles 20 ವರ್ಷದ ಬಳಿಕ ಲ್ಯಾಂಬೋರ್ಗಿನಿ ಲೋಗೋಗೆ ಹೊಸ ಟಚ್: ಈ ಕಂಪನಿಯ ಕಾರುಗಳು ಯಾಕೆ ಫೇಮಸ್?
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಜನಿಕಾಂತ್ ಆಪ್ತಮಿತ್ರ, ಕನ್ನಡ ನಟ ದಿಲೀಪ್ ವಿಧಿವಶ
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೂಲತಃ ಬೆಂಗಳೂರಿನವರಾದ ಅವರು ಮೈಸೂರಿನ ಶಾಂತಿನಗರದಲ್ಲಿ ನೆಲೆಸಿದ್ದರು.
ಕನ್ನಡದಲ್ಲಿ ಶೃತಿ, ಇಂದಿನ ರಾಮಾಯಣ ಹಾಗೂ ತೂಗುವೆಕೃಷ್ಣನಾ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಬಳಿಕ ಅವರು ತಮಿಳು ಚಿತ್ರಗಳಲ್ಲಿ ತಮ್ಮ ತೊಡಗಿಸಿಕೊಂಡಿದ್ದರು. ಸರಿಸುಮಾರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಪೋಷಕ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ದಿಲೀಪ್ ಅವರಿಗೆ ಗಂಭೀರ ಪಾತ್ರಗಳು ಸಿಗದೆ ಇದ್ದ ಕಾರಣ ಅವರು ತಮಿಳು ಚಿತ್ರಗಳಿಗೆ ಮೊರೆಹೋಗಿದ್ದರು. ತಮಿಳು ಚಿತ್ರಗಳಲ್ಲಿ ಅವರಿಗೆ ಗಂಭೀರ ಪಾತ್ರಗಳ ಜೊತೆಗೆ ಹೆಚ್ಚು ಹೆಚ್ಚು ಅವಕಾಶಗಳು ಸಿಕ್ಕಿದವು.
ದಿಲೀಪ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಅವರ ಅಂತ್ಯಕ್ರಿಯೆಯಲ್ಲಿ ಕನ್ನಡ, ತಮಿಳು ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದರು. ಪತ್ನಿ ಹೇಮಾ ಹಾಗೂ ಮಕ್ಕಳಾದ ಮೌರ್ಯ, ಭವ್ಯಾ ಅವರನ್ನು ದಿಲೀಪ್ ಅಗಲಿದ್ದಾರೆ.
ರಜನಿಕಾಂತ್ ಮಾಲೀಕತ್ವದ ಸ್ಟುಡಿಯೋ ಉಸ್ತುವಾರಿಯನ್ನು ನೋಡಿಕೊಳ್ಳುತ್ತಿದ್ದರು. ಅನಾರೋಗ್ಯದ ನಿಮಿತ್ತ ಇತ್ತೀಚೆಗೆ ಸ್ಟುಡಿಯೋಗೆ ಹೋಗುತ್ತಿರಲಿಲ್ಲ. ಸ್ಫುರದ್ರೂಪಿಯಾಗಿದ್ದ ಅವರು ಸರಳ, ಸೌಜನ್ಯದ ವ್ಯಕ್ತಿತ್ವ ಹೊಂದಿದ್ದರು. ಮೈಸೂರು ವಿದ್ಯಾರಣ್ಯಪುರದ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. (ಏಜೆನ್ಸೀಸ್)