Don't Miss!
- News 21 ರಾಜ್ಯ, 102 ಲೋಕಸಭಾ ಸ್ಥಾನ, 1625 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲು ಮತದಾರ ಪ್ರಭು ಸಿದ್ಧ!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭೂಕಂಪ ಸಂತ್ರಸ್ತರಿಗೆ ಶಿವಣ್ಣ, ವಿನಯ್ ನೆರವಿನ ಹಸ್ತ
ನೇಪಾಳ ಭೂಕಂಪ ಸಂತ್ರಸ್ತರ ಬದುಕು ಅಕ್ಷರಶಃ ಅತಂತ್ರವಾಗಿದೆ. ಜಗತ್ತಿನ ನಾನಾ ಮೂಲೆಗಳಿಂದ ಪರಿಹಾರ ನಿಧಿ, ಸಾಮಗ್ರಿ ಹರಿದುಬರುತ್ತಿದೆ. ಅಲ್ಲಿನ ಅತಂತ್ರ ಬದುಕನ್ನು ಮತ್ತೆ ಕಟ್ಟುವ ಕೆಲಸ ನಡೆಯುತ್ತಿದೆ. ಇದಕ್ಕಾಗಿ ಸಿನಿಮಾ ತಾರೆಗಳು ಮುಂದಾಗಿರುವುದು ಗೊತ್ತೇ ಇದೆ.
ಸಮರೋಪಾದಿಯಲ್ಲಿ ಪರಿಹಾರ ಕಾರ್ಯಕ್ರಗಳು ಸಾಗುತ್ತಿವೆ. ಸಿನಿಮಾ ತಾರೆಗಳು ತಮ್ಮ ಕೈಲಾದ ಸಹಾಯ ಮಾಡುತ್ತ ತಮ್ಮ ಅಭಿಮಾನಿಗಳ ನೆರವಿನೊಂದಿಗೆ ಪರಿಹಾರ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. ಇಂದು ಅಣ್ಣಾವ್ರ ಕುಟುಂಬ ನೇಪಾಳ ಭೂಕಂಪ ಸಂತ್ರಸ್ತರ ನೆರವಿಗೆ ಧಾವಿಸಿ ದೇಣಿಗೆ ನೀಡಿತು. [ಭೂಕಂಪ ಸಂತ್ರಸ್ತರ ನೆರವಿಗೆ ಧಾವಿಸಿ ಬಂದ 'ವಿಭಾ' ಟ್ರಸ್ಟ್]
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಅವರ ಪುತ್ರ ವಿನಯ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ (ಮೇ.7) ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದರು.
ಈ ಸಂದರ್ಭದಲ್ಲಿ ಪ್ರಧಾನಮಂತ್ರಿಗಳ ಪರಿಹಾರ ನಿಧಿ ಹೆಸರಿಗೆ ಬರೆದ ರು.10 ಲಕ್ಷದ ಚೆಕ್ (ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ವಿನಯ್ ರಾಜ್ ಕುಮಾರ್ ಅವರು ತಲಾ ರು.5 ಲಕ್ಷ) ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸಿದರು. ಅಂದಹಾಗೆ ಇಂದು (ಮೇ.7) ವಿನಯ್ ರಾಜ್ ಕುಮಾರ್ ಅವರ 25ನೇ ಹುಟ್ಟುಹಬ್ಬ. [ನೇಪಾಳದ ಸಂತ್ರಸ್ತರಿಗೆ ಮಾಗಡಿ ರೈತ ತೋರಿದ ಮಾನವೀಯತೆ]
ಭೂಕಂಪ, ನೆರೆ ಹಾವಳಿಯಂತಹ ವಿಕೋಪ ಪರಿಸ್ಥಿತಿಗಳಲ್ಲಿ ಸಹಾಯ ಹಸ್ತ ಚಾಚಲು ಅಣ್ಣಾವ್ರ ಕುಟುಂಬ ಸದಾ ಮುಂದಿದೆ. ಈ ಹಿಂದೆ ಉತ್ತರಾಖಂಡ ನೆರೆ ಹಾವಳಿಗೆ ತುತ್ತಾದಾಗಲೂ ಶಿವಣ್ಣ ಪರಿಹಾರ ನೀಡಿದ್ದರು. ಆಗಲೂ ಅಭಿಮಾನಿಗಳಿಗೂ ಶಿವಣ್ಣನ ಬೆನ್ನಿಗಿದ್ದರು. ಈಗಲೂ ಅಷ್ಟೇ. (ಫಿಲ್ಮಿಬೀಟ್ ಕನ್ನಡ)