Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ ಅಭಿಮಾನಿಗಳ ಮೇಲೆ ರಾಜ್ ಅಭಿಮಾನಿಗಳು ಬೇಸರವಾಗಿದ್ದೇಕೆ?
ಡಾ.ರಾಜ್ ಹುಟ್ಟುಹಬ್ಬವನ್ನ ಅಭಿಮಾನಿಗಳು ತುಂಬಾ ವಿಶೇಷವಾಗಿ ಆಚರಿಸುತ್ತಿದ್ದಾರೆ. ಅಣ್ಣಾವ್ರ ಹುಟ್ಟುಹಬ್ಬವನ್ನ ಕೇವಲ ಒಂದು ದಿನ ಮಾತ್ರವಲ್ಲದೇ, ಮೂರು ದಿನಗಳ ಕಾಲ ಅದ್ದೂರಿ ಸೆಲೆಬ್ರೇಟ್ ಮಾಡಲಾಗುತ್ತಿದೆ. ಆದ್ರೆ, ಶಿವರಾಜ್ ಕುಮಾರ್ ಅಭಿಮಾನಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಂಭ್ರಮದ ಬಗ್ಗೆ ಕೆಲವು ಡಾ.ರಾಜ್ ಕುಮಾರ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
'ರಾಜ್ ಕುಮಾರ್ ಹಬ್ಬ' ಎಂಬ ಹೆಸರಿನಡಿ 'ಅಖಿಲ ಕರ್ನಾಟಕ ಡಾ.ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ' ರಾಜ್ ಹುಟ್ಟುಹಬ್ಬವನ್ನ ಮೂರು ದಿನ ಆಚರಿಸುವುದಕ್ಕೆ ನಿರ್ಧಾರ ಮಾಡಿದ್ದಾರೆ. ರಾಜ್ ಕುಮಾರ್ ಅವರ 6 ಅಡಿ ಎತ್ತರದ ಮಣ್ಣಿನ ಮೂರ್ತಿಯನ್ನ ಮಾಡಿ, 3 ದಿನಗಳ ಪೂಜಿಸಿ ಬಳಿಕ ಬೆಂಗಳೂರಿನ ಕೆಲ ನಗರಗಳಲ್ಲಿ ಮೆರವಣಿಗೆ ಮಾಡಿ ಆ ಮೂರ್ತಿಯನ್ನ ನದಿಗೆ ವಿಸರ್ಜನೆ ಮಾಡುವ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ.
ಆದ್ರೆ, ಈ ರೀತಿಯ ಆಚರಣೆ ರಾಜ್ ಅಭಿಮಾನಿಗಳಿಗೆ ಬೇಸರ ತರಿಸಿದ್ದು, ಅಭಿಮಾನಿಗಳನ್ನ ದೇವರೆಂದ ನಟನ ಮೂರ್ತಿಯನ್ನ ವಿಸರ್ಜನೆ ಮಾಡುವುದು ಸೂಕ್ತವಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆಯೂ 'ರಾಜ್ ಕುಮಾರ್ ಹಬ್ಬ' ಇದೇ ತಿಂಗಳು ಏಪ್ರಿಲ್ 28 ರಿಂದ ಏಪ್ರಿಲ್ 30ರ ವರೆಗೆ ನಡೆಯಲಿದೆ.