Don't Miss!
- Automobiles Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಡೆಗೂ ಲಹರಿ ವೇಲು ಜತೆ ರಾಜಿಯಾದ 'ರಣವಿಕ್ರಮ'
ಇದೀಗತಾನೆ ಬಂದ ಸುದ್ದಿ ಇದು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಅದ್ದೂರಿ 'ರಣವಿಕ್ರಮ' ಚಿತ್ರ ಹಾಗೂ ಲಹರಿ ವೇಲು ನಡುವಿನ ವಿವಾದ ಸುಖಾಂತ್ಯ ಕಂಡಿದೆ. ರಣವಿಕ್ರಮ ಚಿತ್ರ ಕಾಪಿರೈಟ್ ಸಮಸ್ಯೆಗೆ ಸಿಲುಕಿದ್ದು ಗೊತ್ತೇ ಇದೆ. ಈ ಸಂಬಂಧ ಲಹರಿ ವೇಲು ಅವರು ಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದರು.
ಈ ಹಿನ್ನೆಲೆಯಲ್ಲಿ 'ರಣವಿಕ್ರಮ' ಚಿತ್ರ ಬಿಡುಗಡೆಗೆ ದೊಡ್ಡ ತೊಡಕುಂಟಾಗಿತ್ತು. ಚಿತ್ರದ ನಿರ್ಮಾಪಕರಾದ ಜಯಣ್ಣ ಮತ್ತು ಭೋಗೇಂದ್ರ ಅವರು ಕಾನೂನು ಸಮರವನ್ನು ಎದುರಿಸಬೇಕಾಗಿತ್ತು. ಆದರೆ ಈ ಬೆಟ್ಟದಂತಹ ಸಮಸ್ಯೆ ಇಂದು (ಮಾ.31) ಸಂಜೆ ಮಂಜಿನಂತೆ ಕರಗಿಹೋಗಿದೆ. ['ರಣವಿಕ್ರಮ'ನ ವಿರುದ್ಧ ಕೋರ್ಟ್ ಬಾಗಿಲು ತಟ್ಟಿದ ಲಹರಿ ವೇಲು]
'ರಣವಿಕ್ರಮ' ಚಿತ್ರದ ನಿರ್ಮಾಪರಾದ ಜಯಣ್ಣ ಮತ್ತು ಭೋಗೇಂದ್ರ ಅವರು ಇಂದು ವೇಲು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕಡೆಗೂ ಇಬ್ಬರ ನಡುವಿನ ವಿವಾದ ಬಗೆಹರಿದಿದ್ದು ಸಂಧಾನ ಸಫಲವಾಗಿದೆ. ಪವನ್ ಒಡೆಯರ್ ನಿರ್ದೇಶನದ 'ರಣವಿಕ್ರಮ' ಚಿತ್ರ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.
ರಣವಿಕ್ರಮ' ಚಿತ್ರದ ಎರಡು ಹಾಡುಗಳಲ್ಲಿ ಕಾಪಿರೈಟ್ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಲಹರಿ ವೇಲು ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದರು. ಆದರೆ ಈಗ ಸಂಧಾನದ ಮೂಲಕ ವಿವಾದ ಸುಖಾಂತ್ಯ ಕಂಡಿದೆ.
ಈ ಕುರಿತು ಫಿಲ್ಮಿಬೀಟ್ ಕನ್ನಡ ಜೊತೆ ಮಾತನಾಡಿದ ಲಹರಿ ವೇಲು, ನಮ್ಮ ಮತ್ತು 'ರಣವಿಕ್ರಮ' ಚಿತ್ರದ ಜೊತೆಗಿನ ವಿವಾದ ಬಗೆಹರಿದಿದೆ. ಇಂದು ಚಿತ್ರದ ನಿರ್ಮಾಪಕರು ತಮ್ಮನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿದರು. ರು.20 ಕೋಟಿ ವೆಚ್ಚದಲ್ಲಿ ಚಿತ್ರವನ್ನು ನಿರ್ಮಿಸಿದ್ದೇವೆ. ಈಗ ಕೋರ್ಟ್ ಗೆ ಹೋದರೆ ಚಿತ್ರ ಬಿಡುಗಡೆಗೆ ತೊಂದರೆಯಾಗುತ್ತದೆ ಎಂದು ವಿನಂತಿಸಿಕೊಂಡರು. ಹಾಗಾಗಿ ತಾವು ರಾಜಿಯಾಗಿದ್ದೇವೆ ಎಂದು ತಿಳಿಸಿದರು. [ಫಿಲ್ಮಿಬೀಟ್ ಕನ್ನಡ ಉಚಿತ ಸುದ್ದಿಸಾರಂಗ]
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 'ರಣರಂಗ' ಚಿತ್ರದಲ್ಲಿನ ''ಜಗವೇ ಒಂದು ರಣರಂಗ..'' ಹಾಡಿನ ಸಾಲುಗಳನ್ನ 'ರಣವಿಕ್ರಮ' ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಅಲ್ಲದೇ, ತೆಲುಗಿನ ಹಾಡೊಂದನ್ನ ನಕಲು ಮಾಡಿರುವ ಆರೋಪವನ್ನ 'ರಣವಿಕ್ರಮ' ಎದುರಿಸುತ್ತಿದೆ.
ಎರಡೂ ಹಾಡುಗಳ ಕಾಪಿರೈಟ್ಸ್ ಲಹರಿ ಆಡಿಯೋ ಸಂಸ್ಥೆ ಬಳಿಯಿದೆ. ಆದ್ರೆ, ಅನುಮತಿ ಪಡೆಯದೆ ಕಾನೂನುಬಾಹಿರವಾಗಿ ಸಾಲುಗಳನ್ನ ಬಳಿಸಿಕೊಂಡಿರುವುದರಿಂದ ಲಹರಿ ವೇಲು ಅಸಮಾಧಾನಗೊಂಡು ಕೋರ್ಟ್ ಮೆಟ್ಟಿಲೇರಲು ಚಿಂತಿಸಿದ್ದರು. (ಫಿಲ್ಮಿಬೀಟ್ ಕನ್ನಡ)