Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕ್ರಾಂತಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಕನಸು ನನಸು
ಕ್ರೇಜಿಸ್ಟಾರ್ ರವಿಚಂದ್ರನ್ ಅಭಿಮಾನಿಗಳು ಕಾದುಕಾದು ಸುಸ್ತಾಗಿದ್ದಾರೆ. ತೆರೆಯ ಮೇಲೆ ದ್ರಾಕ್ಷಿ, ಹೂವು, ಹಣ್ಣು ಕಾಯಿ ನೋಡದೆ ತತ್ತರಿಸಿಹೋಗಿದ್ದಾರೆ. ಅವೆಲ್ಲವನ್ನೂ ರೊಮ್ಯಾಂಟಿಕ್ ಆಗಿ ತೋರಿಸುವ ಕಲೆ ರವಿಚಂದ್ರನ್ ಅವರಿಗೆ ಬಿಟ್ಟರೆ ಇನ್ಯಾರಿಗೆ ಗೊತ್ತು. 'ಕ್ರೇಜಿಲೋಕ' ಚಿತ್ರದ ಬಳಿಕ ಅವರ ಒಂದೇ ಒಂದು ಚಿತ್ರವೂ ಬಿಡುಗಡೆಯಾಗಿಲ್ಲ. 'ಮಂಜಿನಹನಿ' ಧ್ಯಾನದಲ್ಲೇ ರವಿಮಾಮ ಕಳೆದು ಹೋದರು. ಈಗ ಸುದೀಪ್ ಜೊತೆಗೆ 'ಮಾಣಿಕ್ಯ' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಅವರ ಮತ್ತೊಂದು ಬಹುನಿರೀಕ್ಷಿತ ಚಿತ್ರ ಕ್ರೇಜಿಸ್ಟಾರ್ ಸಹ ಸಿದ್ಧವಾಗುತ್ತಿದೆ. ಈ ಚಿತ್ರವನ್ನು ಸಂಕ್ರಾಂತಿಗೆ ಪ್ರೇಕ್ಷಕರ ಮುಂದೆ ತರಲು ರವಿಚಂದ್ರನ್ ಪ್ರಯತ್ನಿಸುತ್ತಿದ್ದಾರೆ. ಸದ್ಯಕ್ಕೆ ಚಿತ್ರದ ಎಡಿಟಿಂಗ್ ಕಾರ್ಯ ಭರದಿಂದ ಸಾಗುತ್ತಿದೆ. ಚಿತ್ರಕ್ಕೆ ಸಂಗೀತ ಹಾಗೂ ನಿರ್ದೇಶನ ರವಿಚಂದ್ರನ್ ಅವರದು.
ರವಿಚಂದ್ರನ್ ಅವರು ಕಳೆದೆರಡು ವರ್ಷಗಳಿಂದ ಹುಟ್ಟುಹಬ್ಬ ಸಂಭ್ರಮವನ್ನೂ ಅಭಿಮಾನಿಗಳ ಜೊತೆ ಆಚರಿಸಿಕೊಳ್ಳಲಿಲ್ಲ. ಒಟ್ಟಾರೆಯಾಗಿ ಕ್ರೇಜಿಸ್ಟಾರ್ ಅಭಿಮಾನಿಗಳು ಸಾಕಷ್ಟು ಕಾದಿದ್ದಾರೆ. ಸಂಕ್ರಾಂತಿಗೆ ಅವರಿಗೆ ಎಳ್ಳುಬೆಲ್ಲ ಗ್ಯಾರಂಟಿ ಸಿಗಲಿದೆ. ಅದು ಕ್ರೇಜಿಸ್ಟಾರ್ ಚಿತ್ರದ ಮೂಲಕವಾಗಲಿ ಎಂಬುದು ನಮ್ಮ ಆಶಯ. (ಒನ್ಇಂಡಿಯಾ ಕನ್ನಡ)