Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯಾದ್ಯಂತ ರವಿಚಂದ್ರನ್ 'ಪರಮಶಿವ'ನ ಅಬ್ಬರ ಶುರು
ಕನಸುಗಳ ಕಲಾ ಚಕ್ರವರ್ತಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಮತ್ತೊಂದು ಭಿನ್ನ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಅವರ ಅಭಿನಯದ 'ಪರಮಶಿವ' ಚಿತ್ರ ಇದೇ ಸೆಪ್ಟೆಂಬರ್ 12ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ.
ಮಾಣಿಕ್ಯ ಹಾಗೂ ದೃಶ್ಯ ಚಿತ್ರಗಳ ಬಳಿಕ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ವೃತ್ತಿ ಬದುಕು ಸಾಕಷ್ಟು ಜಿಗಿತ ಕಂಡಿದೆ. ಇದೀಗ ಅವರ ಪರಮಶಿವ ಚಿತ್ರವೂ ತಮಿಳಿನ 'ಸಮುದ್ರಂ' ಚಿತ್ರದ ರೀಮೇಕ್. ಕನ್ನಡದಲ್ಲಿ ರೀಮೇಕ್ ಮಾಡಿ ಗೆಲ್ಲುವುದು ಹೇಗೆ ಎಂಬ ವಿದ್ಯೆ ರವಿಚಂದ್ರನ್ ಅವರಿಗೆ ಚೆನ್ನಾಗಿ ಗೊತ್ತು.
2001ರಲ್ಲಿ ತೆರೆಕಂಡ ತಮಿಳಿನ ಸಮುದ್ರಂ ಚಿತ್ರ ಬಳಿಕ ತೆಲುಗಿನಲ್ಲಿ ಶಿವ ರಾಮ ರಾಜು ಎಂದು ರೀಮೇಕ್ ಆಗಿತ್ತು. ಇದೀಗ ಕನ್ನಡಕ್ಕೆ ಪರಮಶಿವನಾಗಿ ಬರುತ್ತಿದೆ. ರವಿಚಂದ್ರನ್ ಜೊತೆಯಾಗಿ ಸಾಕ್ಷಿ ಶಿವಾನಂದ್, ತಂಗಿಯಾಗಿ ಶರಣ್ಯ, ವಿಜಯ ರಾಘವೇಂದ್ರ, ಯಶಸ್, ರೇಖ, ಸಾಧು ಕೋಕಿಲ, ರಮೇಶ್ ಭಟ್ ಹಾಗೂ ಇನ್ನಿತರರು ತಾರಾಗಣದಲ್ಲಿ ಇದ್ದಾರೆ.
ಅರ್ಜುನ್ ಜನ್ಯ ಅವರ ಸಂಗೀತ, ಅಣಜಿ ನಾಗರಾಜ್ ಅವರ ಛಾಯಾಗ್ರಹಣ, ವಿ ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ವಿನೋದ್ ಮನೋಹರ್ ಅವರ ಸಂಕಲನ, ಕೆ ಡಿ ವೆಂಕಟೇಶ್ ಹಾಗೂ ಪಳನಿರಾಜ್ ಅವರ ಸಾಹಸ, ಎಂ ಎಸ್ ರಮೇಶ್ ಅವರ ಸಂಭಾಷಣೆ, ಹರ್ಷ ಅವರ ನೃತ್ಯ ನಿರ್ದೇಶನ ಒದಗಿಸಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ರವಿಚಂದ್ರನ್ ಅವರು ತಮ್ಮದೇ ಆದ ಬೇಡಿಕೆಯನ್ನು ಉಳಿಸಿಕೊಂಡಿದ್ದು ಚಿತ್ರದ ಬಗ್ಗೆ ಕುತೂಹಲ ಮೂಡುವಂತೆ ಮಾಡಿದೆ. (ಫಿಲ್ಮಿಬೀಟ್)