Don't Miss!
- Finance ಲಕ್ಷ ಲಕ್ಷ ಕೋಟಿ ಇದ್ದರೂ ಇದೊಂದು ಕೊರತೆ ಈ ಶ್ರೀಮಂತನಿಗೆ ಕಾಡಿತ್ತು!
- Automobiles 28 ಲಕ್ಷದ ಬೈಕನ್ನು ಲೀಲಾಜಾಲವಾಗಿ ಓಡಿಸಿದ ಲೇಡಿ ಸೂಪರ್ಸ್ಟಾರ್: ಇಂತಹ ಗರ್ಲ್ಫ್ರೆಂಡ್ ಬೇಕೆಂದ ನೆಟ್ಟಿಗರು!
- Technology Samsung: ಸ್ಯಾಮ್ಸಂಗ್ನ ಮುಂಬರುವ ಫೋಲ್ಡಬಲ್ ಫೋನ್ ನೀವು ಊಹಿಸಲಾಗದ ಅಗ್ಗದ ಬೆಲೆಗೆ?
- News ಹನುಮಾನ್ ಚಾಲೀಸಾ ಗಲಾಟೆ: ತೇಜಸ್ವಿ ಸೂರ್ಯನಿಂದ ದ್ವೇಷ ಹರಡುವ ಯತ್ನ- ದಿನೇಶ್ ಗುಂಡೂರಾವ್
- Sports BCCI Central Contract: ಶ್ರೇಯಸ್, ಇಶಾನ್ ಕಡೆಗಣನೆ: ಯುವ ಆಟಗಾರರಿಗೆ ಮಣೆ
- Lifestyle ಬಾಯಲ್ಲಿ ನೀರು ತರಿಸುವ ಮಸಾಲೆ ಮೊಟ್ಟೆ ಬುರ್ಜಿ ಮಾಡೋದು ಹೇಗೆ.? ತುಂಬಾ ಸಿಂಪಲ್ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಲ್ಲು ಅರ್ಜುನ್ ಜೊತೆ ರಿಯಲ್ ಸ್ಟಾರ್ ಉಪೇಂದ್ರ
ಟಾಲಿವುಡ್ ನಲ್ಲಿ ಹೊಸ ಅಲೆ ಹುಟ್ಟಿಸಿದಂತಹ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್. ಸಾಕಷ್ಟು ಕೌಟುಂಬಿಕ ಕಥಾಹಂದರದ ಸಿನಿಮಾಗಳನ್ನು ಕೊಟ್ಟಂತಹ ಟಾಲಿವುಡ್ ಡೈರೆಕ್ಟರ್ ಇವರು. ಇದೀಗ ಹೊಸ ಕಥಾವಸ್ತುವಿನೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗಿದ್ದಾರೆ.
ತ್ರಿವಿಕ್ರಮ್ ಚಿತ್ರಗಳ ವಿಶೇಷತೆ ಎಂದರೆ, ಹೀರೋಗಳನ್ನು ಪ್ರೆಸೆಂಟ್ ಮಾಡೋ ರೀತಿ, ಕತ್ತಿಯ ಅಂಚಿನಂತಹ ಡೈಲಾಗ್ಸ್, ಭಿನ್ನ ಕಥೆ. ಅವರ ಸಿನಿಮಾಗಳನ್ನು ಕಾತುರದಿಂದ ಎದುರುನೋಡುವ ಪ್ರೇಕ್ಷಕ ವರ್ಗವೂ ಇದೆ. [ಉಪೇಂದ್ರ ಮಾನವೀಯತೆಯ ಮತ್ತೊಂದು ಮುಖ]
ವಿಶೇಷ ಎಂದರೆ ರಿಯಲ್ ಸ್ಟಾರ್ ಉಪೇಂದ್ರ ಅವರು ವಿಶೇಷ ಪಾತ್ರದಲ್ಲಿ ಈ ತೆಲುಗು ಚಿತ್ರದಲ್ಲಿ ಕಾಣಿಸಲಿದ್ದಾರೆ ಎಂಬುದು. ಉಪ್ಪಿ ಅವರದು ಯಾವ ರೀತಿಯ ಪಾತ್ರ ಎಂಬುದು ಇನ್ನಷ್ಟೇ ಗೊತ್ತಾಗಬೇಕು. ಈ ಚಿತ್ರದಲ್ಲಿ ಅರ್ಜುನ್ ಅವರಿಗೆ ತಂದೆಯಾಗಿ ಬಿಗ್ ಬಿ ಅಭಿನಯಿಸಲಿದ್ದಾರೆ ಎಂಬುದು ಇನ್ನೊಂದು ವಿಶೇಷ.
ಇದಕ್ಕೂ ಮುನ್ನ ಮೋಹನ್ ಲಾಲ್ ಹಾಗೂ ಮಮ್ಮುಟ್ಟಿ ಅವರಿಗೂ ಬುಲಾವ್ ಹೋಗಿದೆ. ಅಲ್ಲು ಅರ್ಜುನ್ ಅವರಿಗೆ ಯಾರು ತಂದೆಯಾಗಿ ಕಾಣಿಸಲಿದ್ದಾರೆ ಎಂಬುದು ಇನ್ನೂ ಫೈನಲ್ ಆಗಿಲ್ಲ. ಈ ಚಿತ್ರಕ್ಕೆ ನಿತ್ಯಾ ಮೆನನ್, ಸ್ನೇಹಾ ಹಾಗೂ ಸಮಂತಾ ನಾಯಕಿಯರು. (ಏಜೆನ್ಸೀಸ್)