Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫೆ.12 ಕ್ಕೆ ಕೊನೆಯಾಗಬೇಕಿದ್ದ 'ಜಾಗ್ವಾರ್' ಶೂಟಿಂಗ್ ಮುಂದೂಡಿದ್ದೇಕೆ?
ಇಲ್ಲಿಯವರೆಗೆ ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ನಿಖಿಲ್ ಕುಮಾರಸ್ವಾಮಿ ಅಭಿನಯದ ಚೊಚ್ಚಲ ಚಿತ್ರ 'ಜಾಗ್ವಾರ್' ಶೂಟಿಂಗ್ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಶುಕ್ರವಾರ (ಫೆಬ್ರವರಿ 12) ದಂದು ಕೊನೆಯಾಗಬೇಕಿತ್ತು. ಆದರೆ ಸದ್ಯದ ಮಟ್ಟಿಗೆ ನಿಖಿಲ್ ಕುಮಾರ್ ಅವರ 'ಜಾಗ್ವಾರ್' ಶೂಟಿಂಗ್ ಮುಂದಕ್ಕೆ ಹಾಕಲಾಗಿದೆ.
ಕಳೆದ ತಿಂಗಳು ಜನವರಿ 4 ರಿಂದಲೂ ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರ್ ಅಭಿನಯದ 'ಜಾಗ್ವಾರ್' ಚಿತ್ರೀಕರಣ ನಡೆಯುತ್ತಿದೆ.[ಮೈಸೂರಿನಲ್ಲಿ ಸರಳವಾಗಿ ಬರ್ತ್ ಡೇ ಆಚರಿಸಿಕೊಂಡ ನಿಖಿಲ್ ಕುಮಾರ್]
ಆದರೆ ಚಿತ್ರತಂಡ ಅಂದುಕೊಂಡಂತೆ ಎಲ್ಲಾ ನಡೆದಿದ್ದರೆ, ಈಗಾಗಲೇ ಮೈಸೂರಿನಲ್ಲಿ ಶೂಟಿಂಗ್ ಕಂಪ್ಲೀಟ್ ಮಾಡಿ ಹಾಂಕಾಂಗ್ ಗೆ ಚಿತ್ರದ ಹಾಡಿನ ಚಿತ್ರೀಕರಣ ನಡೆಸಲು ಪ್ರಯಾಣ ಬೆಳೆಸಬೇಕಿತ್ತು.[ನಿಖಿಲ್ ಕುಮಾರ್ ಜೊತೆ ಡ್ಯುಯೆಟ್ ಹಾಡುವ ಬೆಡಗಿ ಯಾರು?]
ಅಂದಹಾಗೆ ಶೂಟಿಂಗ್ ಮಧ್ಯದಲ್ಲೇ ಸ್ಥಗಿತಗೊಳ್ಳಲು ಮುಖ್ಯ ಕಾರಣ ಚಿತ್ರದ ನಾಯಕ ನಿಖಿಲ್ ಗೌಡ ಅವರ ಆರೋಗ್ಯದಲ್ಲಿ ದಿಢೀರ್ ಉಂಟಾದ ಸಮಸ್ಯೆ.
ಕಳೆದ 35 ದಿನಗಳಿಂದ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ನಡೆಯುತ್ತಿದ್ದ ಚಿತ್ರೀಕರಣದ ಮಧ್ಯೆ ನಟ ನಿಖಿಲ್ ಕುಮಾರ್ ಅವರ ಆರೋಗ್ಯದಲ್ಲಿ ಏರು-ಪೇರಾದ ಕಾರಣ ನಾಲ್ಕೈದು ದಿನದ ಚಿತ್ರೀಕರಣ ನಿಲ್ಲಿಸಲಾಗಿತ್ತು.
ಈ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರು ಇನ್ಫೋಸಿಸ್ ಕ್ಯಾಂಪಸ್ ಗೆ ಆಗಮಿಸಿ ಮುಂದಿನ ನಾಲ್ಕೈದು ದಿನ ಕ್ಯಾಂಪಸ್ ನಲ್ಲಿ ಚಿತ್ರೀಕರಣ ನಡೆಸಲು ಅನುಮತಿ ಕೇಳಲಿದ್ದಾರೆ.[ನಿಖಿಲ್ ಕುಮಾರ್ 'ಜಾಗ್ವಾರ್' ಸ್ಪೆಷಾಲಿಟೀಸ್ ಏನು ಗೊತ್ತಾ?]
ಒಟ್ನಲ್ಲಿ ಅದ್ಧೂರಿಯಾಗಿ ಸ್ಯಾಂಡಲ್ ವುಡ್ ಕ್ಷೇತ್ರಕ್ಕೆ ಎಂಟ್ರಿ ಪಡೆದುಕೊಂಡ ನವ ನಟ ನಿಖಿಲ್ ಕುಮಾರ್ ಅವರ 60 ಕೋಟಿಯ ಭರ್ಜರಿ ಬಜೆಟ್ ನ ಸಿನಿಮಾದ ಬಗ್ಗೆ ಗಾಂಧಿನಗರದಲ್ಲಿ ಸಾಕಷ್ಟು ಕುತೂಹಲವಿದ್ದು, ಅದನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.