twitter
    For Quick Alerts
    ALLOW NOTIFICATIONS  
    For Daily Alerts

    ಮಂಡ್ಯದಲ್ಲಿ ಅಂಬರೀಶ್, ಯಶ್ ಮಿಂಚಿನ ಸಂಚಾರ

    By Rajendra
    |

    Ambarish
    ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ವಿರೋಧಿಸಿ ರೈತರು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ಹೋರಾಟ ಮಂಡ್ಯದಲ್ಲಿ ಭುಗಿಲೆದ್ದಿದೆ. ಈ ಹೋರಾಟಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೋಮವಾರ (ಅ.1) ಸಾಥ್ ನೀಡುವ ಮೂಲಕ ಮಿಂಚಿನ ಸಂಚಾರ ಮೂಡಿಸಿದರು.

    ಮಂಡ್ಯದಲ್ಲಿ ರೈತ ಹಿತ ರಕ್ಷಣಾ ಸಮಿತಿಯನ್ನು ಉದ್ದೇಶಿಸಿ ಮಾತನಾಡಿದ ಅಂಬರೀಶ್, ವಾಸ್ತವಾಂಶ ಅರಿಯದೆ ಪ್ರಧಾನಿ ಅವರು ತೆಗೆದುಕೊಂಡ ನಿರ್ಧಾರದಿಂದ ನಮಗೆ ಅನ್ಯಾಯವಾಗಿದೆ. ನಾವೆಲ್ಲರೂ ಶಾಂತಿಯುತವಾಗಿ ಹೋರಾಟ ಮುಂದುವರಿಸುತ್ತೇವೆ ಎಂದರು.

    ಬರಗಾಲದಿಂದ ಕಾವೇರಿ ಅಣೆಕಟ್ಟು ತುಂಬಿಲ್ಲ. ಇರುವ ನೀರಿನಲ್ಲಿ ಅಲ್ಪಸ್ವಲ್ಪ ವ್ಯವಸಾಯ ಮಾಡಿರುವ ಜಮೀನುಗಳ ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಸಮಯದಲ್ಲಿ ರೈತರ ಬೆನ್ನಿಗೆ ನಿಲ್ಲಬೇಕಾದ ಸರ್ಕಾರ ಈಗ ತಮಿಳುನಾಡಿಗೆ ನೀರು ಹರಿಸುವ ಮೂಲಕ ರೈತರ ಬೆನ್ನಿಗೆ ಚೂರಿ ಹಾಕಿದೆ.

    ಪಕ್ಷಾತೀತವಾಗಿ ನಡೆಯುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಅಂಬರೀಶ್ ತಿಳಿಸಿದರು. ರೈತರ ಜೀವನಾಡಿ ರಕ್ಷಿಸಲು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಅವರು ಘೋಷಿಸಿದರು. ಕಾವೇರಿ ಹೋರಾಟಕ್ಕೆ ಅಂಬರೀಶ್ ಬೆಂಬಲ ವ್ಯಕ್ತಪಡಿಸಿರುವುದು ಮಂಡ್ಯ ಜಿಲ್ಲೆಯ ರೈತರಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.

    ಶಾಂತಿಯುತವಾಗಿ ನಡೆಯುತ್ತಿರುವ ಹೋರಾಟ ಶಾಂತಿಯುತವಾಗಿಯೇ ಇರಲಿ. ಇದರಲ್ಲಿ ನಮಗೆ ಜಯ ಖಂಡಿತ ಸಿಗುತ್ತದೆ ಎಂದು ಅಂಬರೀಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾವೇರಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಯಶ್ ಸಹ ಈ ಸಂದರ್ಭದಲ್ಲಿ ಹೋರಾಟಗಾರರಲ್ಲಿ ಹೊಸ ಉತ್ಸಾಹ ತುಂಬಿದರು. (ಒನ್ಇಂಡಿಯಾ ಕನ್ನಡ)

    English summary
    Rebel Star Amabarish and Rocking Star Yash supports Mandya district farmers ongoing agitation against the centre’s directive to State to release 9,000 cusec of water to Tamil Nadu. He wants peaceful protest against central govt.
    Monday, October 1, 2012, 19:05
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X