Don't Miss!
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಕ್ ಸ್ಟಾರ್ ರೋಹಿತ್ 'ಕರ್ವ' ಹೀರೋ ಗುರು
ಸೂಪರ್ ಹಿಟ್ ಹಾರರ್ ಸಿನಿಮಾ 6-5=2 ಚಿತ್ರತಂಡದವರು 'ಕರ್ವ' ಎಂಬ ವಿಭಿನ್ನ ಹೊಸ ಸಿನಿಮಾ ಮಾಡುತ್ತಿದ್ದಾರೆ ಎಂದು ನಾವು ನಿಮಗೆ ಈಗಾಗಲೇ ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ ತಾನೇ.
ಇನ್ನು ಹೊಸಬರ ಚಿತ್ರತಂಡದಿಂದ ಸದ್ಯಕ್ಕೆ ಹೊರ ಬಿದ್ದಿರುವ ಖಾಸ್ ಖಬರ್ ಏನಪ್ಪಾ ಅಂದ್ರೆ. ಇಲ್ಲಿಯವರೆಗೆ ಚಿತ್ರದಲ್ಲಿ ಯಾರು ಯಾರು ಕಾಣಿಸಿಕೊಳ್ಳುತ್ತಾರೆ ಎಂದು ಚಿತ್ರದ ನಿರ್ದೇಶಕ ನವನೀತ್ ಅವರು ಅವರು ಬಾಯಿ ಬಿಟ್ಟಿರಲಿಲ್ಲ. ಇದೀಗ ಚಿತ್ರದ ನಾಯಕ ಯಾರು ಎಂಬ ಸೀಕ್ರೇಟ್ ಅನ್ನು ನವನೀತ್ ಬಿಚ್ಚಿಟ್ಟಿದ್ದಾರೆ.[6-5=2 ಚಿತ್ರ ತಂಡದಿಂದ ಮತ್ತೊಂದು ಹೊಸ ಕೊಡುಗೆ]
ಈ ಬಾರಿ 'ಕರ್ವ' ಚಿತ್ರಕ್ಕೆ ನಾಯಕನಾಗಿ ಆಯ್ಕೆ ಆಗಿರುವವರು ರಾಕ್ ಸ್ಟಾರ್ ಅಂತಾನೇ ಖ್ಯಾತಿ ಗಳಿಸಿರುವ ಆರ್ ಜೆ ರೋಹಿತ್ ಅವರು. ಬೆಂಗಳೂರು ರೇಡಿಯೋ ಸಿಟಿಯಲ್ಲಿ ಆರ್.ಜೆ ಆಗಿ ಜನರ ಮೆಚ್ಚುಗೆ ಗಳಿಸಿರುವ ರೋಹಿತ್ ಬಿಗ್ ಬಾಸ್ 2ನಲ್ಲೂ ಸ್ಪರ್ಧಿಯಾಗಿ ಆಕರ್ಷಣೆಯಾಗಿದ್ದರು. [ರಿಯಾಲಿಟಿ ಶೋ ನಿರೂಪಕರಾಗಿ ಆರ್ ಜೆ ರೋಹಿತ್]
ಮಾತ್ರವಲ್ಲದೇ 'ಬಾಂಬೆ ಮಿಠಾಯಿ' ಸಿನಿಮಾದಲ್ಲೂ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡು ಪ್ರೇಕ್ಷಕರನ್ನು ಮನರಂಜಿಸಿದ್ದರು. ಜೊತೆಗೆ ಜೀ ಕನ್ನಡ ವಾಹಿನಿಯಲ್ಲಿ 'ಡಿವೈಡೆಡ್' ಎಂಬ ರಿಯಾಲಿಟಿ ಶೋ ಒಂದನ್ನು ನಡೆಸಿಕೊಟ್ಟಿದ್ದರು. ಇದೀಗ 'ಕರ್ವ' ಚಿತ್ರದ ಮೂಲಕ ಮತ್ತೆ ಜನಮನ ಗೆಲ್ಲಲ್ಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
6-5=2 ಸಿನಿಮಾದ ನಿರ್ಮಾಪಕ ಕೃಷ್ಣ ಚೈತನ್ಯ ಅವರು ಬಂಡವಾಳ ಹಾಕಿ ಅದೇ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ನಿರ್ದೇಶಕ ನವನೀತ್ ಅವರು ಆಕ್ಷನ್-ಕಟ್ ಹೇಳಲಿರುವ 'ಕರ್ವ' ಸಿನಿಮಾ ಸದ್ಯದಲ್ಲೇ ಸೆಟ್ಟೇರಲಿದೆ.