Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯದಾದ್ಯಂತ 'ರಾಜಾಹುಲಿ' ಘರ್ಜನೆ ಆರಂಭ
ಕನ್ನಡಿಗರ ಅಭಿರುಚಿಯನ್ನು ಗಮನದಲ್ಲಿಟ್ಟುಕೊಂಡು ತೆರೆಗೆ ತಂದಿರುವ ಚಿತ್ರ ರಾಜಾಹುಲಿ. ಈ ಚಿತ್ರ ತಮಿಳಿನ ಸುಂದರಪಾಂಡ್ಯನ್ ರೀಮೇಕ್ ಆದರೂ ಕನ್ನಡಿಗರ ನೇಟಿವಿಟಿಗೆ ತಕ್ಕಂತೆ ಇದೆ ಎಂದು ಚಿತ್ರದ ನಾಯಕ ನಟ ರಾಕಿಂಗ್ ಸ್ಟಾರ್ ಯಶ್ ಒನ್ಇಂಡಿಯಾ ಕನ್ನಡಕ್ಕೆ ತಿಳಿಸಿದರು.
ಈ ಚಿತ್ರಕ್ಕೆ ಹಂಸಲೇಖ ಅವರ ಸಂಗೀತ ಇರುವುದು ಇನ್ನೊಂದು ಹೈಲೈಟ್. ಈ ಚಿತ್ರಕ್ಕೆ ಯಶ್ ಹುಲಿಯಾದರೆ ನಾನು ರಾಜ ಎಂದು ಚಿತ್ರದ ನಿರ್ಮಾಪಕ ಕೆ ಮಂಜು ಅವರು ಹೇಳಿಕೊಂಡಿದ್ದಾರೆ. ಈ ಚಿತ್ರಕ್ಕೆ ಮಂಜು ಮಾಂಡವ್ಯ ಸಂಭಾಷಣೆ ಬರೆದಿದ್ದು ಮಂಡ್ಯ ಭಾಷೆಯನ್ನು ಬಳಸಿಕೊಳ್ಳಲಾಗಿದೆ.
ಯಶ್ ಅವರ ಹುಲಿಯಂತಹ ಕಲ್ಲಿಮೀಸೆ, ವಿಭಿನ್ನ ಗೆಟಪ್ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಅವರು ಇಲ್ಲಿಯವರೆಗೂ ಮಾಡದೇ ಇರುವಂತಹ ಪಾತ್ರ ಇದು ಎನ್ನುತ್ತಾರೆ ನಿರ್ದೇಶಕರು. ಚಿತ್ರಕ್ಕೆ ಹಂಸಲೇಖ ಅವರ ಸಂಗೀತ ಇರುವುದು ಚಿತ್ರದ ಬಗ್ಗೆ ಮತ್ತಷ್ಟು ನಿರೀಕ್ಷಿಸುವಂತಾಗಿದೆ.
ಇದೇ ಮೊದಲ ಸಲ ಯಶ್ ಗೆ ಸುಂದರ್ ರಾಜ್ ಹಾಗೂ ಪ್ರಮಿಳ ಜೋಸೈ ಅವರ ಪುತ್ರಿ ಮೇಘನ ರಾಜ್ ನಾಯಕಿ ಆಗಿದ್ದಾರೆ. ತಾರಾಗಣದಲ್ಲಿ ಚಿಕ್ಕಣ್ಣ, ಅಶ್ವಿನಿ ಚರಣ್ ರಾಜ್ ಮುಂತಾದವರು ಇದ್ದಾರೆ. (ಒನ್ಇಂಡಿಯಾ ಕನ್ನಡ)