Don't Miss!
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಉಪೇಂದ್ರ ಸಿಂಗಲ್ ಶಾಟ್ ಗೆ ರು.1 ಕೋಟಿ
ಕನ್ನಡ ಚಿತ್ರರಂಗದಲ್ಲಿ ಕೋಟಿ ಕೋಟಿ ಚೆಲ್ಲುವ ನಿರ್ಮಾಪಕ ಎಂದರೆ ರಾಮು ಮಾತ್ರ. ಈಗ ಅವರ ಜೊತೆ ಸರಿಸಮನಾಗಿ ನಿಲ್ಲುವ ಮತ್ತೊಬ್ಬ ನಿರ್ಮಾಪಕರು ಕನ್ನಡಕ್ಕೆ ಸಿಕ್ಕಿದ್ದಾರೆ. 'ಬ್ರಹ್ಮ' ಚಿತ್ರದ ನಿರ್ಮಾಪಕರಾದ ಮಂಜುನಾಥ ಬಾಬು (ಅಮೃತಹಳ್ಳಿ) ಅವರೇ ಈ ಧೀರ ನಿರ್ಮಾಪಕ.
ಇತ್ತೀಚೆಗೆ ಬ್ರಹ್ಮ ಚಿತ್ರದ ಸಾಹಸ ಸನ್ನಿವೇಶವನ್ನು ರಾಜಸ್ತಾನದಲ್ಲಿ ಚಿತ್ರೀಕರಿಸಲಾಯಿತು. ಅಲ್ಲಿ ಹಾಕಿರುವ ಭರ್ಜರಿ ಸೆಟ್ ಗಾಗಿ ಒಂದು ಕೋಟಿ ರುಪಾಯಿ ಖರ್ಚು ಮಾಡಿದ್ದಾರೆ. ಒಂದೇ ಶಾಟ್ ನಲ್ಲಿ ಅದನ್ನು ಚಿತ್ರೀಕರಿಸಿಕೊಂಡಿರುವುದು ಚಿತ್ರದ ವಿಶೇಷಗಳಲ್ಲಿ ಒಂದು.
ರಿಯಲ್ ಸ್ಟಾರ್ ಉಪೇಂದ್ರ, ಪ್ರಣೀತಾ ಮುಖಭೂಮಿಕೆಯಲ್ಲಿರುವ ಈ ಚಿತ್ರದ ಟಾಕಿ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಪಾತ್ರವರ್ಗದಲ್ಲಿ ರಂಗಾಯಣರಘು, ಸಾಧುಕೋಕಿಲ, ಶಯ್ಯಾಜಿ ಶಿಂಧೆ, ನಾಜರ್, ರಾಹುಲ್ ದೇವ್, ಸೋನು ಸೂಧ್, ಸುಭಾಷ್ ಶೆಟ್ಟಿ, ಗಿರೀಶ್ ಕಾರ್ನಾಡ್, ಕಾಟ್ ರಾಜು, ಬುಲೆಟ್ ಪ್ರಕಾಶ್, ಜಾನ್ ಕೊಕೇನ್, ಮಂಗಳೂರು ಸುರೇಶ್, ಲಕ್ಷ್ಮಣ್,ಶರಣ್, ಪದ್ಮಜಾರಾವ್, ಸುಚೇಂದ್ರಪ್ರಸಾದ್ ಮುಂತಾದವರಿದ್ದಾರೆ.
ಮೈಲಾರಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಮಂಜುನಾಥ ಬಾಬು ನಿರ್ಮಿಸುತ್ತಿರುವ ಚಿತ್ರಕ್ಕೆ ಆರ್.ಚಂದ್ರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿದ್ದಾರೆ. ಶೇಖರ್ ಚಂದ್ರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡುತ್ತಿದ್ದಾರೆ.
ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್, ಇಸ್ಮಾಯಿಲ್ ಕಲಾ ನಿರ್ದೇಶನ, ಥ್ರಿಲ್ಲರ್ ಮಂಜು, ವಿಜಯ್ ಸಾಹಸ ನಿರ್ದೇಶನ ಹಾಗೂ ಪ್ರದೀಪ್ ಆಂಟೋನಿ ಅವರ ನೃತ್ಯ ನಿರ್ದೇಶನ 'ಬ್ರಹ್ಮ' ಚಿತ್ರಕ್ಕಿದೆ. (ಒನ್ಇಂಡಿಯಾ ಕನ್ನಡ)