Don't Miss!
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- News Dubai Rain: ದುಬಾರಿ ದುಬೈಗೆ ಭಾರವಾದ ಮಳೆ: 4 ದಿನ ಕಳೆದ್ರೂ ಸಹಜ ಸ್ಥಿತಿಗೆ ಬಾರದೆ ಹೈರಾಣ
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾರಾಯಣ್ ಮುಂದಿನ ಚಿತ್ರದ ಹೆಸರೇನು ಗೊತ್ತೆ?
ಇದಕ್ಕಾಗಿ ನಾಡಿನ ಮೂಲೆ ಮೂಲೆಯಿಂದ 60 ಸಾವಿರದಷ್ಟು ಪತ್ರಗಳು, ಇ-ಮೇಲ್, ಎಸ್ಎಂಎಸ್ ಗಳು ಹರಿದುಬಂದಿವೆ. ಅವುಗಳಲ್ಲಿ ಬೆಂಗಳೂರಿನ ವಾದಿರಾಜ್ ಅವರು ಸೂಚಿಸಿದ ಟೈಟಲ್ ಆಯ್ಕೆಯಾಗಿದೆ. ವಾದಿರಾಜ್ ಅವರಿಗೆ ಹೀರೋ ಮೋಟರ್ ಬೈಕ್ ಬಹುಮಾನವಾಗಿ ನೀಡಲಾಗಿದೆ.
ಇಷ್ಟಕ್ಕೂ ವರದರಾಜ್ ಸೂಚಿಸಿದ ಹೆಸರೇನು ಗೊತ್ತೆ? 'ಛತ್ರಿಗಳು ಸಾರ್ ಛತ್ರಿಗಳು'! ಈ ಚಿತ್ರದಲ್ಲಿ ನಾರಾಯಣ್ ಜೊತೆ ಮೋಹನ್, ರಮೇಶ್ ಅರವಿಂದ್ ಅವರು ಅಭಿನಯಿಸುತ್ತಿದ್ದಾರೆ. ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸುತ್ತಿರುವ ಈ ಚಿತ್ರವನ್ನು ಪದ್ಮಸುಂದರಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿದೆ.
ಮಾನಸಿ, ಸನಾತನಿ, ಪವಿತ್ರಾ ಗೌಡ ಹಾಗೂ ಸುಷ್ಮಾ ರಾಜ್ ಚಿತ್ರದ ನಾಯಕಿಯರು. ಈ ಹಿಂದೆ ಎಸ್ ನಾರಾಯಣ್ ಅವರು ಕುರಿಗಳು ಸಾರ್ ಕುರಿಗಳು ಹಾಗೂ ಕೋತಿಗಳು ಸಾರ್ ಕೋತಿಗಳು ಎಂಬ ಚಿತ್ರಗಳಲ್ಲಿ ನಟಿಸಿ ಯಶಸ್ವಿಯಾಗಿದ್ದರು. ಈಗ 'ಛತ್ರಿಗಳು ಸಾರ್ ಛತ್ರಿಗಳು' ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.
ಚಿತ್ರದ ಪಾತ್ರವರ್ಗದಲ್ಲಿ ಸಾಧು ಕೋಕಿಲ, ಸುಂದರ ರಾಜ್, ಉಮಾಶ್ರೀ, ಮುಖ್ಯಮಂತ್ರಿ ಚಂದ್ರು, ಶಿವರಾಂ ಮುಂತಾದ ಹಾಸ್ಯ ನಟರ ಬಳಗವೇ ಚಿತ್ರದಲ್ಲಿದೆ. ಮಾಲೂರು ಶ್ರೀನಿವಾಸ್ ಅವರ ನೃತ್ಯ ಸಂಯೋಜನೆ ಚಿತ್ರಕ್ಕಿದೆ. (ಏಜೆನ್ಸೀಸ್)