Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಎಫ್ಸಿಸಿ'ಗೆ ಮತ್ತೊಂದು ವರ್ಷ ಸಾ.ರಾ.ಗೋವಿಂದು ಅಧ್ಯಕ್ಷ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಸಾ.ರಾ.ಗೋವಿಂದು ಅವರೇ ಇನ್ನೊಂದು ವರ್ಷದ ಅವಧಿಗೆ ಮುಂದುವರೆಯಲಿ ಎಂದು ಚಿತ್ರರಂಗದ ಪ್ರಮುಖರ ಗುಂಪು ತೀರ್ಮಾನ ಕೈಗೊಂಡಿದೆ.
ಒಂದು ವರ್ಷ ಕಳೆದರು ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿಲ್ಲ ಎಂಬ ಕಾರಣದಿಂದ ನಿರ್ಮಾಪಕ ಭಾಮಾ ಹರೀಶ್ ಮತ್ತು ಅವರ ತಂಡ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಸಾ.ರಾ.ಗೋವಿಂದು ರವರ ಅಧಿಕಾರ ಅವಧಿ ಮುಗಿದರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ(ಮೇ 26) ರಾಕ್ ಲೈನ್ ವೆಂಕಟೇಶ್, ಕೆ ಮಂಜು, ಜಯಣ್ಣ, ನಟ ಜಗ್ಗೇಶ್ ಸೇರಿದಂತೆ ಹಲವರು ಚಲನಚಿತ್ರ ವಾಣಿಜ್ಯ ಮಂಡಳಿ ಆವರಣದಲ್ಲಿ ಸಭೆ ನಡೆಸಿ ಸಾ.ರಾ.ಗೋವಿಂದು ಅವರೇ ಇನ್ನೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರೆಯಲು ಎಂಬ ನಿರ್ಣಯ ತೆಗೆದುಕೊಂಡಿದ್ದಾರೆ.
ಸಭೆಯ ನಂತರ ಮಾತನಾಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, 'ಸಾ.ರಾ.ಗೋವಿಂದು ರವರ ಅಧ್ಯಕ್ಷತೆಯಲ್ಲಿ ಸಾಕಷ್ಟು ಉತ್ತಮ ಕೆಲಸಗಳು ಆಗಿವೆ. ಅವರಿಂದ ಇಂತಹ ಮತ್ತಷ್ಟು ಉತ್ತಮ ಕೆಲಸಗಳು ಆಗಬೇಕಿದೆ. ಆದ್ದರಿಂದ ಅವರೇ ಅಧ್ಯಕ್ಷರಾಗಿ ಮುಂದುವರೆಯಲಿ' ಎಂದು ಹೇಳಿ ಚಿತ್ರರಂಗದ ವತಿಯಿಂದ ಸಾ.ರಾ.ಗೋವಿಂದು ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕಾಗಿದೆ ಎಂದು ಮನವಿ ಪತ್ರ ಸಲ್ಲಿಸಿದರು.
ಚಿತ್ರಕೃಪೆ:ಚಿತ್ರಲೋಕ.ಕಾಂ
ಚಲನಚಿತ್ರ ವಾಣಿಜ್ಯ ಮಂಡಳಿಯ ಇತರೆ ಅಂಗ ಸಂಸ್ಥೆಗಳು ಸಾ.ರಾ.ಗೋವಿಂದು ಅವರೇ ಅಧ್ಯಕ್ಷರಾಗಿ ಮುಂದುವರೆಯಲು ಬೆಂಬಲ ಸೂಚಿಸಿವೆ. ಆದರೇ ಜೂನ್ 16 ರಂದು ಸರ್ವ ಸದಸ್ಯರ ಸಭೆ ನಡೆಯಲಿದ್ದು ಅಂದು ಏನು ತೀರ್ಮಾನ ಕೈಗೊಳ್ಳಲಾಗುತ್ತದೋ ಅದರ ಆಧಾರದ ಮೇಲೆ ಸಾ.ರಾ.ಗೋವಿಂದು ರವರು ಅಧ್ಯಕ್ಷರಾಗಿ ಉಳಿಯುತ್ತಾರೋ ಇಲ್ಲವೋ ಎಂಬುದು ನಿರ್ಧಾರವಾಗಲಿದೆ.