Don't Miss!
- News Karnataka LS Election 2024 LIVE: ಇಂದು ದೇಶದಲ್ಲಿ ಎರಡನೇ ಹಂತದ, ರಾಜ್ಯದಲ್ಲಿ ಮೊದಲ ಹಂತದ ಮತದಾನ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪುನೀತ್ ಅಭಿಮಾನಿಗಳಿಗೆ ಸಂಕ್ರಾಂತಿ ಕೊಡುಗೆ ನಿನ್ನಿಂದಲೇ
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಬಹಳ ಕಾತುರತೆ ತೆರೆಬೀಳುವ ಸಮಯ ಹತ್ತಿರವಾಗಿದೆ. ಹೊಂಬಾಳೆ ಫಿಲಂಸ್ ಅವರ ಮೊದಲ ಕಾಣಿಕೆ 'ನಿನ್ನಿಂದಲೇ' ಚಿತ್ರ ಇದೇ ಗುರುವಾರ (ಜ.16) ರಾಜ್ಯದಾದ್ಯಂತ ತೆರೆಕಾಣುತ್ತಿದೆ. ನಿರ್ದೇಶಕ ಜಯಂತ್ ಪರಂಜಿ ಅವರ ಮೊಟ್ಟ ಮೊದಲ ಕನ್ನಡ ಸಿನಿಮಾ ಇದಾಗಿದೆ.
ಮೊಟ್ಟ ಮೊದಲ ಬಾರಿಗೆ ಎರಿಕ ಫರ್ನಾಂಡೀಜ್ ಅವರು ನಾಯಕಿ ಆಗಿ ಅಭಿನಯಿಸಿರುವ ಚಿತ್ರವನ್ನು ದಕ್ಷಿಣ ಭಾರತದಲ್ಲಿ ಅತ್ಯಂತ ಯಶಸ್ವಿ ಚಿತ್ರ ನಿರ್ದೇಶಕರಲ್ಲಿ ಒಬ್ಬರಾದ ಜಯಂತ್ ಪರಾಂಜೆ ಅವರು ನಿರ್ದೇಶನವನ್ನು ಮಾಡಿದ್ದಾರೆ. ವಿಜಯ್ ಕಿರಗಂದುರ್ ಈ ಚಿತ್ರದ ನಿರ್ಮಾಪಕರು. [ಪುನೀತ್ 'ನಿನ್ನಿಂದಲೇ' ಟಿವಿ ರೈಟ್ಸ್ ಗೆ ಭರ್ಜರಿ ರೇಟ್]
ಅಮೆರಿಕ ದೇಶದಲ್ಲಿ ಕೆಲವು ಆಕ್ರಮಣಕಾರಿ ಸನ್ನಿವೇಶಗಳು ಹಾಗೂ ಮಾತಿನ ಭಾಗ, ಹಾಡುಗಳನ್ನು ಚಿತ್ರೀಕರಣ 40 ದಿವಸಗಳಲ್ಲಿ ಮಾಡುವುದಕ್ಕೂ ಮುಂಚೆ ನಿನ್ನಿಂದಲೇ' ಚಿತ್ರವು 20 ದಿವಸಗಳ ಚಿತ್ರೀಕರಣವನ್ನು ಕಂಠೀರವ ಸ್ಟುಡಿಯೋ, ಎಫ್ ಬಾರ್, ಒರಿಯನ್ ಮಾಲ್ ಕಾಫಿ ಶಾಪ್ ಹಾಗೂ ಮೂರು ದಿವಸಗಳ ಚಿತ್ರೀಕರಣ ಹೈದರಾಬಾದ್ ಅಲ್ಲಿ ಮುಗಿಸಿಕೊಂಡಿದೆ.
ಚಿನ್ನಿ ಪ್ರಾಕಾಶ್, ಕಲ್ಯಾಣ್ ಮಾಸ್ಟರ್ ಹಾಗೂ ರಾಜು ಸುಂದರಂ ಈ ಚಿತ್ರದ ನೃತ್ಯ ನಿರ್ದೇಶಕರು. 'ನಿನ್ನಿಂದಲೇ' ನ್ಯೂ ಯಾರ್ಕ್ ಅಲ್ಲಿ ಚಿತ್ರೀಕರಣ ಮಾಡುವುದಕ್ಕಾಗಿ ಸ್ವದೇಶದ ಮೂರು ಹಾಗೂ ವಿದೇಶದ ಕೆಲವು ಕ್ಯಾಮರಗಳನ್ನು ಬಳಸಲಾಗಿದೆ.
ಮಣಿ ಶರ್ಮ ಅವರ ಸಂಗೀತ ಇರುವ ಈ ಚಿತ್ರದ ಸಂಕಲನಕಾರ ಮಾರ್ತಾಂಡ ಕೆ ಪ್ರಕಾಶ್, ನಿರ್ದೇಶಕ ಜಯಂತ್ ಸಿ ಪರಂಜಿ ಅವರ ಜೊತೆ ಶಂಕರ್ ಅವರು ಚಿತ್ರಕಥೆ ನೆರವು ನೀಡಿದ್ದಾರೆ. ಪಿ ಜಿ ವಿಂಧಾ ಅವರು ಈ ಚಿತ್ರದ ಛಾಯಾಗ್ರಾಹಕರು.
ಪೋಷಕ ಪಾತ್ರಗಳಲ್ಲಿ ಅವಿನಾಷ್ ಶೃಂಗೇರಿ (ಜುಗಾರಿ) ವಿನಾಯಕ್ ಜೋಷಿ, ಸೋನಿಯ ದೀಪ್ತಿ, ಆಲೋಕ್ ಬಾಬು, ಅವಿನಾಷ್, ಅಚ್ಯುತ್ ಕುಮಾರ್, ಸಾಧು ಕೋಕಿಲ, ರಂಗಾಯಣ ರಘು, ಪ್ರತಾಪ್, ಶ್ರೀ ನಿವಾಸ್ ಪ್ರಭು, ಸಿಹಿಕಹಿ ಚಂದ್ರು, ರೋಹಿಣಿ ರಘುವರನ್ ಹಾಗೂ ಇತರರು ಇದ್ದಾರೆ. (ಒನ್ಇಂಡಿಯಾ ಕನ್ನಡ)