Don't Miss!
- News Bengaluru Heat: ಏ.25 ರಂದು ನಗರದಲ್ಲಿ ಅತ್ಯಧಿಕ ತಾಪಮಾನ: 12 ವರ್ಷಗಳ ದಾಖಲೆ ಉಡೀಸ್
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಭಿಮಾನಿ ದೇವರು'ಗಳಿಗೆ ಶಿವಣ್ಣನ ಆದರದ ಆಮಂತ್ರಣ
ಅಣ್ಣಾವ್ರ ಮುದ್ದಿನ ಮೊಮ್ಮಗಳು, ಡಾ.ಶಿವರಾಜ್ ಕುಮಾರ್ ಸುಪುತ್ರಿ ನಿರುಪಮಾ ವಿವಾಹ ಮಹೋತ್ಸವಕ್ಕೆ ಇನ್ನು ಮೂರು ದಿನಗಳು ಬಾಕಿ. ಆಗಸ್ಟ್ 30-31 ರಂದು ಅರಮನೆ ಮೈದಾನದಲ್ಲಿ ಡಾ.ನಿರುಪಮಾ, ಡಾ.ದಿಲೀಪ್ ಅವರ ಕೈಹಿಡಿಯಲಿದ್ದಾರೆ.
ವಧು-ವರರನ್ನ ಆಶೀರ್ವದಿಸುವುದಕ್ಕೆ ಸ್ಯಾಂಡಲ್ ವುಡ್, ಕಾಲಿವುಡ್, ಟಾಲಿವುಡ್ ಮತ್ತು ಬಾಲಿವುಡ್ ನ ದೊಡ್ಡ ದೊಡ್ಡ ಕಲಾವಿದರಿಗೆ ಆತ್ಮೀಯ ಆಮಂತ್ರಣ ನೀಡಲಾಗಿದೆ.
ಬಿಗ್ ಬಿ ಅಮಿತಾಬ್ ಬಚ್ಚನ್, ಸೂಪರ್ ಸ್ಟಾರ್ ರಜಿನಿಕಾಂತ್, ಸಕಲಕಲಾವಲ್ಲಭ ಕಮಲ್ ಹಾಸನ್ ಸೇರಿದಂತೆ ಭಾರತೀಯ ಚಿತ್ರರಂಗದ ಅತಿರಥ ಮಹಾರಥರೇ ಶಿವಣ್ಣನ ಮಗಳ ಮದುವೆಗೆ ಆಗಮಿಸುವ ನಿರೀಕ್ಷೆ ಇದೆ. [ಶಿವಣ್ಣನ ಮಗಳ ಮದುವೆಗೆ ಅಮಿತಾಬ್ ಬರ್ತಾರಂತೆ!]
ಇಂತಿಪ್ಪ ದೊಡ್ಡ ದೊಡ್ಡ ಕಲಾವಿದರ ಜೊತೆ ನೀವೂ ಸಹ ದೊಡ್ಮನೆ ಮೊಮ್ಮಗಳ ಮದುವೆಗೆ ಹೋಗಿ ಆಶೀರ್ವಾದ ಮಾಡಿ ಬರಬಹುದು. ಅಂತಹ ಸದಾವಕಾಶವನ್ನ ಡಾ.ಶಿವರಾಜ್ ಕುಮಾರ್ ಮತ್ತು ಅವರ ಆಪ್ತ ಕೆ.ಪಿ.ಶ್ರೀಕಾಂತ್ ಒದಗಿಸಿದ್ದಾರೆ.
ಯಾವುದೇ ರೀತಿಯ ಪಾಸ್ ಇಲ್ಲದೆ ಎಲ್ಲಾ 'ಅಭಿಮಾನಿ ದೇವರುಗಳು' ಅರಮನೆ ಮೈದಾನದಲ್ಲಿ ನಡೆಯುವ ಶಿವಣ್ಣನ ಮುದ್ದಿನ ಮಗಳ ವಿವಾಹಕ್ಕೆ ತೆರಳಬಹುದು. [ಶಿವರಾಜ್ ಕುಮಾರ್ ಮಗಳ ಮದುವೆ ಸಿದ್ಧತೆ ಚಿತ್ರಗಳು]
ಹಾಗಾದ್ರೆ, ಇನ್ಯಾಕೆ ತಡ. ಇಂದ್ರ ಲೋಕವೇ ಧರೆಗಿಳಿದಂತೆ ವೈಭೋಗದಿಂದ ನಡೆಯಲಿರುವ ವಿವಾಹ ಮಹೋತ್ಸವಕ್ಕೆ ನೀವು ಸಾಕ್ಷಿಯಾಗೋಕೆ ತಯಾರಾಗಿ.