Don't Miss!
- News ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಡಿ ಕೆ ಶಿವಕುಮಾರ್ ಹೇಳಿದ್ದೇನು?
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವ ಮೂರನೇ ಕಣ್ಣು ತೆರೆಯುತ್ತಾನೆ: ಶಿವರಾಜ್ ಕುಮಾರ್
ಕನ್ನಡ ಚಿತ್ರರಂಗದ ಹೆಸರಾಂತ ನಿರ್ಮಾಪಕರಲ್ಲಿ ಒಬ್ಬರಾದ ಸೂರಪ್ಪ ಬಾಬು, ಬಹಳಷ್ಟು ಚಿತ್ರಗಳನ್ನು ನಿರ್ಮಿಸಿದ್ದಾರೆ. ಪ್ರಮುಖವಾಗಿ ಸಾಹಸಸಿಂಹ ಡಾ ವಿಷ್ಣುವರ್ಧನ್ ಚಿತ್ರವನ್ನು ನಿರ್ಮಿಸಿದ್ದ ಸೂರಪ್ಪ ಬಾಬು, ಈ ಮೊದಲು ಶಿವರಾಜ್ ಕುಮಾರ್ ಅಭಿನಯದ 'ಬಂಧು ಬಳಗ' ಎಂಬ ಚಿತ್ರ ಕೂಡ ನಿರ್ಮಿಸಿದವರು. ಈಗ ದೂರು ದಾಖಲಿಸಲು ಕಾರಣವಾಗಿರುವುದು ಅವರು ಕೊಟ್ಟಿದ್ದರೆನ್ನಲಾದ ರು. 20 ಲಕ್ಷ ಮುಂಗಡ ಹಣ.
ದಿವಂಗತ ತೂಗುದೀಪ ಶ್ರೀನಿವಾಸ್ ಅವರಿಗೆ ಸೂರಪ್ಪ ಬಾಬು ಮಾಡಿರುವ ಅಪಮಾನದಿಂದ ಕೋಪಗೊಂಡು ಕುದಿಯುತ್ತಿರುವ ಅಖಿಲ ಕರ್ನಾಟಕ ದರ್ಶನ್ ಅಭಿಮಾನಿಗಳ ಸಂಘ, ಶ್ರೀಮತಿ ಮೀನಾ ತೂಗುದೀಪ ಶ್ರೀನಿವಾಸ್ ಅವರ ಕಾಲಿಗೆ ಬಿದ್ದು ಸೂರಪ್ಪ ಬಾಬು ಕ್ಷಮೆಯಾಚಿಸಬೇಕು ಎಂದು ಭಾನುವಾರ (ಜು.8) ಸಂಜೆ ಆಗ್ರಹಿಸಿದೆ. (ಯೂಟ್ಯೂಬ್ ವಿಡಿಯೋ)
ಗ್ರೀನ್ ಹೌಸ್ ರಾಜ್ ಮಿಲನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯಕರ್ತರು ಮಾತನಾಡುತ್ತಿದ್ದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು, ದರ್ಶನ್ ಅಭಿಮಾನಿಗಳು ಹಾಗೂ ಮಾಧ್ಯಮದವರ ಮುಂದೆ ಮೀನಾ ಅವರ ಕಾಲಿಗೆ ಬಿದ್ದು ಸೂರಪ್ಪ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ದರ್ಶನ್ ಅಭಿಮಾನಿಗಳು ಎಚ್ಚರಿಸಿದ್ದಾರೆ.
ಕ್ಷಮೆ ಕೋರಲು ಸೂರಪ್ಪ ಬಾಬುಗೆ ಮಂಗಳವಾರದ (ಜು.10)ತನಕ ಗಡುವು ನೀಡಲಾಗಿದೆ. ಇದೇ ವೇಳೆ ಈ ಘಟನೆಗೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಆಡಿದ ಮಾತು ಎಲ್ಲರ ಗಮನಸೆಳೆಯಲಿರುವುದು ಖಂಡಿತ. ಸೂರಪ್ಪ ಬಾಬುರ ಮುಂದಿನ ನಡೆ ಹಾಗೂ ದರ್ಶನ್ ಅಭಿಮಾನಿಗಳು ಇಡಬಹುದಾದ ಮುಂದಿನ ಹೆಜ್ಜೆ ಏನಿರಬಹುದೆಂಬುದು ಈಗ ಸ್ಯಾಂಡಲ್ ವುಡ್ ನಲ್ಲಿ ಎಲ್ಲರಿಂದಲೂ ಚರ್ಚಿಸಲ್ಪಡುತ್ತಿರುವ ವಿಷಯ. (ಏಜೆನ್ಸೀಸ್)