Don't Miss!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- News ಗೃಹ ಸಚಿವ ಡಾ. ಜಿ ಪರಮೇಶ್ವರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ರಾಜ್ಯೋತ್ಸವಕ್ಕೆ ಶಿವಣ್ಣ 'ಭಜರಂಗಿ' ತೆರೆಗೆ
ಇತ್ತೀಚೆಗಷ್ಟೇ ಅಭಿಮಾನಿಗಳಿಂದ ರಾಜ ಭೂಷಣ ಬಿರುದು ಪಡೆದಿರುವ ಶಿವರಾಜ್ ಕುಮಾರ್ ನಾಯಕರಾಗಿ ನಟಿಸುತ್ತಿರುವ 'ಭಜರಂಗಿ' ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರ ನವಂಬರ್ (ಕನ್ನಡ ರಾಜ್ಯೋತ್ಸವ)ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಬೆಂಗಳೂರು, ಹೈದರಾಬಾದ್ ಮುಂತಾದ ಕಡೆ 'ಭಜರಂಗಿ' ಚಿತ್ರದ ಚಿತ್ರೀಕರಣ ನಡೆದಿದೆ. ಹೆಸರುಘಟ್ಟ, ಅಭಿಮಾನ್ ಸ್ಟುಡಿಯೋ ಹಾಗೂ ಸಪೋಟ ಗಾರ್ಡನ್ ನಲ್ಲಿ ಈ ಚಿತ್ರಕ್ಕಾಗಿ ವಿಶೇಷ ಸೆಟ್ ಹಾಕಲಾಗಿತ್ತು. ಈವರೆಗೂ ಮೂರು ಹಾಡುಗಳ ಚಿತ್ರೀಕರಣ ಸೇರಿದಂತೆ 100ದಿನ ಚಿತ್ರೀಕರಣ ನಡೆದಿದೆ.
ಜೈಆನಂದ್ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆದಿದ್ದಾರೆ. ದೀಪು.ಎಸ್.ಕುಮಾರ್ ಅವರ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರಮೇಶ್ ಅವರ ನಿರ್ಮಾಣ ನಿರ್ವಹಣೆಯಿರುದೆ.
ಈ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ಐಂದ್ರಿತಾ ರೇ, ಊರ್ವಶಿ, ಬುಲೆಟ್ ಪ್ರಕಾಶ್, ಸಾಧುಕೋಕಿಲಾ, ತಬಲನಾಣಿ, ಹೊನ್ನವಳ್ಳಿ ಕೃಷ್ಣ, ಶಿವರಾಂ, ಎಂ.ಎಸ್.ಉಮೇಶ್, ಬಿರಾದಾರ್, ಚಿಕ್ಕಣ್ಣ, ಎಂ.ಎನ್.ಲಕ್ಷ್ಮೀದೇವಿ, ಶೃತಿ, ಸಿಲ್ಲಿಲಲ್ಲಿ ಆನಂದ್ ಹಾಗೂ ರಂಗಭೂಮಿ ಕಲಾವಿದರಾದ ಲೋಕಿ, ರಾಜಕುಮಾರ್, ಮಧು, ಚೇತನ್ ಮುಂತಾದವರಿದ್ದಾರೆ. (ಒನ್ಇಂಡಿಯಾ ಕನ್ನಡ)